Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:8 - ಕನ್ನಡ ಸಮಕಾಲಿಕ ಅನುವಾದ

8 ಅವಳನ್ನು ನಿಶ್ಚಯಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ, ಆಗ ಅವಳು ಬಿಡುಗಡೆಯಾಗುವಂತೆ ಮಾಡಲಿ. ಅವನು ಅವಳನ್ನು ವಂಚಿಸಿದ್ದರಿಂದ ಯೆಹೂದ್ಯರಲ್ಲದವರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವಳನ್ನು ತನಗಾಗಿ ಗೊತ್ತುಮಾಡಿಕೊಂಡ ಯಜಮಾನನಿಗೆ ಅವಳಲ್ಲಿ ಇಷ್ಟವಿಲ್ಲದೆ ಹೋದರೆ ಅವನಿಂದ ಬಿಡಿಸಿಕೊಳ್ಳಲು ಅವಳಿಗೆ ಅವಕಾಶಕೊಡಬೇಕು. ಅವನು ಕೊಟ್ಟ ಮಾತನ್ನು ತಪ್ಪಿದವನಾದುದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವಳನ್ನು ಗೊತ್ತು ಮಾಡಿಕೊಂಡ ಯಜಮಾನನಿಗೆ ಅವಳಲ್ಲಿ ಇಷ್ಟವಿಲ್ಲದೆ ಹೋದರೆ ಬಿಡಿಸಿಕೊಳ್ಳಲಿಕ್ಕೆ ಅವಳಿಗೆ ಅನುಕೂಲಕೊಡಬೇಕು. ಅವನು ಕೊಟ್ಟ ಮಾತನ್ನು ತಪ್ಪಿದವನಾದದರಿಂದ ಅನ್ಯಜನರಿಗೆ ಅವಳನ್ನು ಮಾರುವದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಜಮಾನನು ತನಗಾಗಿ ಆರಿಸಿಕೊಂಡ ಗುಲಾಮಳನ್ನು ಇಷ್ಟಪಡದಿದ್ದರೆ, ಅವಳನ್ನು ಬಿಡುಗಡೆ ಮಾಡಬಹುದು. (ಅವಳ ತಂದೆಗೆ ಅವಳನ್ನು ಮಾರಬಹುದು.) ಅವಳನ್ನು ವಿದೇಶಿಯರಿಗೆ ಮಾರುವ ಹಕ್ಕನ್ನು ಯಜಮಾನನು ಕಳೆದುಕೊಳ್ಳುತ್ತಾನೆ; ಯಾಕೆಂದರೆ ಆಕೆಯಲ್ಲಿ ಅವನಿಗಿದ್ದ ನಂಬಿಕೆಯು ಮುರಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:8
13 ತಿಳಿವುಗಳ ಹೋಲಿಕೆ  

ಆಗ ಅವನ ತಂದೆಯೂ, ತಾಯಿಯೂ ಅವನಿಗೆ, “ನಿನಗೆ ಸುನ್ನತಿಯಾಗದ ಫಿಲಿಷ್ಟಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ನಿನ್ನ ಸಹೋದರರ ಪುತ್ರಿಯರಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ಸ್ತ್ರೀ ಇಲ್ಲವೋ?” ಎಂದರು. ಆದರೆ ಸಂಸೋನನು ತನ್ನ ತಂದೆಗೆ, “ಅವಳನ್ನು ನನಗೆ ತೆಗೆದುಕೋ. ಏಕೆಂದರೆ ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ,” ಎಂದನು.


ಯೆರುಬ್ಬಾಳನ ಯೋಗ್ಯತೆಗೆ ತಕ್ಕದ್ದಾಗಿದ್ದರೆ ಮತ್ತು ಈ ಹೊತ್ತು ಅವನಿಗೂ, ಅವನ ಮಗನಿಗೂ ನೀವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಕಾರ್ಯ ಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ. ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.


ಯಾವನಾದರೂ ಮದುವೆ ಮಾಡಿಕೊಂಡಿದ್ದು, ತನ್ನ ಹೆಂಡತಿಯೊಂದಿಗೆ ಸಂಸಾರ ಮಾಡಿರದಿದ್ದರೆ, ಅಂಥವನು ಮನೆಗೆ ಹೋಗಲಿ. ಅವನು ಯುದ್ಧದಲ್ಲಿ ಸತ್ತರೆ, ಬೇರೊಬ್ಬನು ಆಕೆಯನ್ನು ಸೇರಿಸಿಕೊಂಡಾನು.”


ಆಗ ಮೋಶೆಯು ಅವನಿಗೆ, “ನಾನು ನಿನ್ನನ್ನು ಬಿಟ್ಟು ಹೋಗಿ, ಯೆಹೋವ ದೇವರಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ, ಅವನ ಸೇವಕರನ್ನೂ, ಅವರ ಜನರನ್ನೂ ಬಿಟ್ಟು ಹೋಗುವುವು. ಆದರೆ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುವುದಕ್ಕೆ ಫರೋಹನಾದ ನೀನು ಜನರನ್ನು ಕಳುಹಿಸದೆ ಇನ್ನು ಮೇಲೆ ವಂಚಿಸಬಾರದು,” ಎಂದನು.


ಕಾನಾನ್ಯರ ಪುತ್ರಿಯರು ತನ್ನ ತಂದೆ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ಏಸಾವನು ತಿಳಿದು,


ಆದರೆ ನನ್ನ ಸಹೋದರರಾದರೋ, ಉಕ್ಕಿ ಹರಿಯುವ ತೊರೆಯಂತೆಯೂ, ಬತ್ತಿದ ಹಳ್ಳದಂತೆಯೂ ಅಪನಂಬಿಗಸ್ತರಾಗಿದ್ದಾರೆ.


ಇದರಿಂದ ಸೌಲನಿಗೆ ಬಹು ಕೋಪವಾಯಿತು. ಆ ಹಾಡಿನಿಂದ ಅವನಿಗೆ ಬಹುಬೇಸರವಾಯಿತು. “ಇವರು ದಾವೀದನಿಗೆ ಹತ್ತು ಸಾವಿರಗಳಷ್ಟು ಎಂದು ಹಾಡಿದ್ದಾರೆ; ನನಗೆ ಸಾವಿರಗಳಷ್ಟೇ ಎಂದು ಹಾಡಿದ್ದಾರೆ; ಹಾಗಾದರೆ, ಅವನಿಗೆ ರಾಜ್ಯವಲ್ಲದೆ ಇನ್ನು ಆಗಬೇಕಾದದ್ದೇನು?” ಎಂದುಕೊಂಡನು.


“ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು,” ಎಂದು ಅವರು ಹೇಳಿದ್ದು ಸಮುಯೇಲನಿಗೆ ಕೆಟ್ಟದ್ದಾಗಿ ಕಾಣಿಸಿತು. ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು.


“ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಹೋಗುವಂತೆ ಆಕೆಯು ಹೋಗಿಬಿಡಬಾರದು.


ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿದರೆ, ಹೆಣ್ಣು ಮಕ್ಕಳ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕು.


ಅವರು ದ್ರೋಹ ಮಾಡಿದ್ದರಿಂದ ನಾನು ಆ ದೇಶವನ್ನು ಹಾಳುಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು