Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:14 - ಕನ್ನಡ ಸಮಕಾಲಿಕ ಅನುವಾದ

14 “ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಲಾಗಿ ತೆಗೆದುಕೊಂಡಿರಲಾಗಿ ಅದರ ಒಡೆಯನು ಅದರ ಹತ್ತಿರ ಇಲ್ಲದಿರುವಾಗ, ಆ ಪಶುವಿಗೆ ಊನವಾದರೆ, ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪ ಕಾಲಕ್ಕೆ ಬಾಡಿಗೆಗೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಗಾಯಗೊಂಡರೆ ಇಲ್ಲವೆ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಒಬ್ಬನು ಮತ್ತೊಬ್ಬನಿಂದ ಪಶುಪ್ರಾಣಿಯನ್ನು ಕೊಂಚಕಾಲಕ್ಕೆ ಎರವಲಾಗಿ ತೆಗೆದುಕೊಂಡಿರುವಾಗ ಆ ಪ್ರಾಣಿಯ, ಒಡೆಯನು ಹತ್ತಿರವಿಲ್ಲದ ಸಮಯದಲ್ಲಿ ಗಾಯಗೊಂಡರೆ ಅಥವಾ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪಕಾಲಕ್ಕೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಊನವಾದರೆ ಇಲ್ಲವೆ ಸತ್ತರೆ ಕೇಳಿಕೊಂಡವನು ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಸ್ವಲ್ಪಕಾಲಕ್ಕೆ ಸಾಲವಾಗಿ ತೆಗೆದುಕೊಂಡಿರುವಾಗ ಅದರ ಮಾಲೀಕನು ಅದರ ಸಮೀಪದಲ್ಲಿ ಇಲ್ಲದಿರುವ ಸಮಯದಲ್ಲಿ ಆ ಪಶುವಿಗೆ ಗಾಯವಾದರೆ ಅಥವಾ ಅದು ಸತ್ತುಹೋದರೆ, ಸಾಲ ತೆಗೆದುಕೊಂಡವನು ಆ ಪಶುವಿಗೆ ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:14
11 ತಿಳಿವುಗಳ ಹೋಲಿಕೆ  

ನೀವು ಮಾಡಬೇಕಾದ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಾದ ಇಸ್ರಾಯೇಲರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡಬೇಕು. ಅದು ಯೆಹೋವ ದೇವರ ಬಿಡುಗಡೆಯ ವರ್ಷ ಎಂದು ಪ್ರಕಟವಾಗಿರುವುದರಿಂದ ತನ್ನ ನೆರೆಯವನಿಂದಲೂ, ತನ್ನ ಸಹೋದರನಿಂದಲೂ ಸಾಲವನ್ನು ಕೇಳಬಾರದು.


ಪಶುವನ್ನು ಕೊಲ್ಲುವವರು, ಅದಕ್ಕೆ ಪ್ರತಿಯಾಗಿ ಒಂದು ಪಶುವನ್ನು ಕೊಡಬೇಕು.


ಗುಂಡಿಯನ್ನು ಅಗೆದವನು ಈಡು ಕೊಡಬೇಕು. ಅವುಗಳ ಯಜಮಾನನಿಗೆ ಕ್ರಯ ನೀಡಬೇಕು. ಆದರೆ ಸತ್ತ ಪಶು ಅವನದಾಗಬೇಕು.


ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.


ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಯೆಹೋವ ದೇವರ ಮುಂದೆ ಪ್ರಮಾಣಮಾಡಬೇಕು. ಅದನ್ನು ಪಶುವಿನ ಯಜಮಾನನು ಒಪ್ಪಿದರೆ ಅವನು ಈಡುಕೊಡಬಾರದು.


ಕೇಳುವವನಿಗೆ ಕೊಡು, ನಿನ್ನಿಂದ ಸಾಲ ಕೇಳುವವನ ಕಡೆಯಿಂದ ಮುಖ ತಿರುಗಿಸಿಕೊಳ್ಳಬೇಡ.


ದುಷ್ಟನು ಸಾಲ ಮಾಡಿ ಹಿಂದಿರುಗಿ ಕೊಡದೆ ಹೋಗುವನು. ಆದರೆ ನೀತಿವಂತನು ಧಾರಾಳವಾಗಿ ಕೊಡುತ್ತಾನೆ.


ಇನ್ನು ಕೆಲವರು, “ಅರಸನಿಗೆ ತೆರಿಗೆಯನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ, ನಮ್ಮ ದ್ರಾಕ್ಷಿತೋಟಗಳ ಮೇಲೆಯೂ ಸಾಲವನ್ನು ತೆಗೆದುಕೊಳ್ಳಬೇಕಾಯಿತು.


ಕಾಡುಮೃಗವು ಅದನ್ನು ಕೊಂದಿದ್ದರೆ, ಅದರ ಹೆಣವನ್ನು ಸಾಕ್ಷಿಗಾಗಿ ತರಲಿ. ಕಾಡುಮೃಗ ಕೊಂದಿದ್ದಕ್ಕೆ ಈಡುಕೊಡಬೇಕಾದ ಅವಶ್ಯಕತೆ ಇಲ್ಲ.


ಆದರೆ ಅದರ ಯಜಮಾನನು ಅದರ ಸಂಗಡ ಇದ್ದರೆ ಈಡು ಕೊಡದೆಯಿರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಎಣಿಕೆಯಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು