Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:25 - ಕನ್ನಡ ಸಮಕಾಲಿಕ ಅನುವಾದ

25 “ನಿಮ್ಮ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ, ಅವನಿಂದ ಬಡ್ಡಿ ತೆಗೆದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ನಡಿಸಬಾರದು; ಅವನಿಂದ ಬಡ್ಡಿಯನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:25
20 ತಿಳಿವುಗಳ ಹೋಲಿಕೆ  

ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.


ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.


ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೇಷ್ಠರನ್ನೂ, ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೇ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ, ಅವರಿಗೆ ವಿರೋಧವಾಗಿ ಮಹಾ ಸಭೆಯನ್ನು ಕೂಡಿಸಿದೆ.


ತನ್ನ ಕೈಯನ್ನು ಪಾಪ ಮಾಡುವುದರಿಂದ ಹಿಂತೆಗೆದು ಬಡ್ಡಿಯನ್ನೂ, ಲಾಭವನ್ನೂ ತೆಗೆದುಕೊಳ್ಳದೆ, ನನ್ನ ವಿಧಿಗಳನ್ನು ಪಾಲಿಸಿ, ನನ್ನ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವುದಿಲ್ಲ, ಅವನು ನಿಶ್ಚಯವಾಗಿ ಬದುಕುವನು.


ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.


ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು, “ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ, ಮಿಕ್ಕದ್ದರಿಂದ ನೀನೂ, ನಿನ್ನ ಮಕ್ಕಳು ಜೀವನ ಮಾಡಿರಿ,” ಎಂದನು.


ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.


ಹಾಗಿದ್ದರೆ ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಏಕೆ ಹಾಕಲಿಲ್ಲ, ನಾನು ಹಿಂದಿರುಗಿದಾಗ ಹಣವನ್ನು ಬಡ್ಡಿ ಸಮೇತವಾಗಿ ತೆಗೆದುಕೊಳ್ಳುತ್ತಿದ್ದೆನು,’ ಎಂದು ಹೇಳಿದನು.


ಹಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಕೊಡಬೇಕಾಗಿತ್ತು; ನಾನು ಬಂದಾಗ ಹಣವನ್ನು ಬಡ್ಡಿ ಸಮೇತವಾಗಿ ಪಡೆದುಕೊಳ್ಳುತ್ತಿದ್ದೆನು,’ ಎಂದು ಹೇಳಿ,


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ನಿಮ್ಮ ದೇಶದಲ್ಲಿ, ನಿಮ್ಮ ಸಹೋದರರಲ್ಲಿ ಬಡವರು ಇದ್ದರೆ, ನಿಮ್ಮ ಹೃದಯವನ್ನು ಕಠಿಣ ಮಾಡಿಕೊಳ್ಳಬೇಡಿರಿ. ನಿಮ್ಮ ಕೈಯನ್ನು ನಿಮ್ಮ ಬಡ ಸಹೋದರರಿಗೆ ಮುಚ್ಚಿಕೊಳ್ಳಬೇಡಿರಿ.


ನಿನ್ನ ನೆರೆಯವನು ಅದರಲ್ಲಿ ಮಲಗಲು ಸಾಯಂಕಾಲದ ಹೊತ್ತಿಗೆ ಅವನು ಹೊದ್ದುಕೊಳ್ಳುವ ವಸ್ತ್ರವನ್ನು ಹಿಂತಿರುಗಿಸು. ಆಗ ಅವನು ನಿನ್ನನ್ನು ಆಶೀರ್ವದಿಸುವನು. ನೀನು ಮಾಡಿದ್ದು ನಿನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ನೀತಿಯ ಕಾರ್ಯವೆಂದು ಪರಿಗಣಿಸಲಾಗುವುದು.


ಯಾರನ್ನೂ ಉಪದ್ರವಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸೆ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಿರುವವನಿಗೆ ಬಟ್ಟೆಯನ್ನು ಹೊದಿಸಿ,


ಅವರು ಅಡವು ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ. ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು