Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:8 - ಕನ್ನಡ ಸಮಕಾಲಿಕ ಅನುವಾದ

8 ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ವಸ್ತುಗಳನ್ನು ಅವನು ಮುಟ್ಟಲಿಲ್ಲವೆಂದು ವಿಚಾರಿಸುವುದಕ್ಕೆ ದೇವರ ಸನ್ನಿಧಿಯಲ್ಲಿ ಅವನನ್ನು ಹಾಜರುಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಳ್ಳನು ಸಿಕ್ಕದೆ ಹೋದರೆ ಆ ಮನೆಯ ಯಜಮಾನ ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ನಿಶ್ಚಯಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕಳ್ಳನು ಸಿಕ್ಕದೆಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಏನೋ ಎಂಬದನ್ನು ನಿಶ್ಚಯಿಸುವದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ನೀವು ಕಳ್ಳನನ್ನು ಕಂಡುಹಿಡಿಯಲಾಗದಿದ್ದರೆ, ಆ ಮನೆಯ ಮಾಲೀಕನು ತಪ್ಪಿತಸ್ಧನಾಗಿದ್ದಾನೋ ಇಲ್ಲವೋ ಎಂದು ದೇವರು ನಿರ್ಣಯಿಸುವನು. ಮನೆಯ ಮಾಲೀಕನು ದೇವರ ಸನ್ನಿಧಿಗೆ ಹೋಗಬೇಕು. ಅವನು ಕದ್ದಿದ್ದಾನೋ ಇಲ್ಲವೋ ಎಂದು ದೇವರು ತೀರ್ಮಾನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:8
9 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನಿಮ್ಮ ಗೋತ್ರಗಳ ಪ್ರಕಾರ ಕೊಡುವ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ನ್ಯಾಯಾಧಿಪತಿಗಳನ್ನೂ, ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು. ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.


“ದೇವರನ್ನು ದೂಷಿಸಬೇಡ, ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.


ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು, ಬಾಗಿಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ, ಅವನ ಯಜಮಾನನು ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ದಾಸನಾಗಿರಬೇಕು.


ದೇವರು ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ, ದೇವರುಗಳ ಮಧ್ಯದಲ್ಲಿ ನ್ಯಾಯತೀರಿಸುತ್ತಾರೆ.


ದಾವೀದನು ಹೇಳಿದ್ದೇನೆಂದರೆ, “ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಯೆಹೋವ ದೇವರ ಮನೆಯ ಕೆಲಸವನ್ನು ನಡಿಸುವವರಾಗಿದ್ದರು. ಮತ್ತು ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿಪತಿಗಳೂ ಆಗಿದ್ದರು.


ಎತ್ತು, ಕತ್ತೆ, ಕುರಿ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದುಹೋದ ಯಾವ ತರದ ವಸ್ತುಗಳ ವಿಷಯದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು, ‘ಇದು ತನ್ನದೆಂದು,’ ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ನ್ಯಾಯಾಧಿಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸುವರೋ, ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.


“ತನ್ನ ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ, ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು