Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:1 - ಕನ್ನಡ ಸಮಕಾಲಿಕ ಅನುವಾದ

1 “ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುರುದ್ದೇಶಪೂರಿತ ಸಾಕ್ಷಿಯಾಗುವ ಮೂಲಕ ದುಷ್ಟರಿಗೆ ಸಹಾಯಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯ ವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಧಾರವಿಲ್ಲದ ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಬೇರೆಯವರ ವಿರುದ್ಧವಾಗಿ ಸುಳ್ಳು ಹೇಳಬೇಡಿರಿ. ನೀವು ನ್ಯಾಯಾಲಯದಲ್ಲಿ ದುಷ್ಟರ ಸಹಾಯಕ್ಕಾಗಿ ಸುಳ್ಳುಸಾಕ್ಷಿ ಹೇಳದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:1
40 ತಿಳಿವುಗಳ ಹೋಲಿಕೆ  

ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು; ಗರ್ವದ ಕಣ್ಣೂ, ಅಹಂಕಾರದ ಹೃದಯವೂ ಉಳ್ಳವನನ್ನು ಸಹಿಸಲಾರೆನು.


ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.


ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.


ಸುಳ್ಳುಸಾಕ್ಷಿಗಳು ನನಗೆ ಎದುರಾಗಿ ಎದ್ದು, ನಾನು ತಿಳಿಯದವುಗಳ ಬಗ್ಗೆ ಪ್ರಶ್ನೆ ಮಾಡುತ್ತಾರೆ.


ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.


“ ‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. “ ‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು.


ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.


“ಒಳ್ಳೆಯದಾಗುವಂತೆ ಕೆಟ್ಟದ್ದನ್ನು ಮಾಡೋಣ,” ಎಂದು ನಾವು ಹೇಳುತ್ತಿರುವುದಾಗಿ, ಕೆಲವರು ನಮ್ಮ ಬಗ್ಗೆ ದೂಷಿಸಿ ಹೇಳುವ ಪ್ರಕಾರ ನಾವೇಕೆ ಹೇಳಬಾರದು? ಅಂಥವರಿಗೆ ದಂಡನೆಯ ತೀರ್ಪಾಗುವುದು ನ್ಯಾಯವೇ!


ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; ಸುಳ್ಳಾಡುವವನು ಹಾಳಾಗಿ ಹೋಗುವನು.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.


ಮಾನವತ್ವವಿಲ್ಲದವರೂ ಸಮಾಧಾನವಾಗದವರೂ ಚಾಡಿಕೋರರೂ ಸಂಯಮವಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯದನ್ನು ಪ್ರೀತಿಸದವರೂ


ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.


ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ಮಾತುಗಳಿಂದ ಅವನಿಗೆ ಮೋಸ ಮಾಡಬೇಡ.


ಸುಳ್ಳುಸಾಕ್ಷಿಯವನು ನಾಶವಾಗುವನು; ಆದರೆ ಕೇಳಿದ್ದನ್ನೇ ನುಡಿಯುವವನ ಸಾಕ್ಷಿ ಸದಾ ನಿಲ್ಲುವುದು.


ದ್ವೇಷವನ್ನು ಮರೆಮಾಚುವವನು ಸುಳ್ಳುಗಾರ ಮತ್ತು ಚಾಡಿ ಹೇಳುವವನು ಮೂರ್ಖನು.


ಅಸತ್ಯವನ್ನಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.


ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ, ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ, ಇತರರನ್ನು ನಿಂದಿಸುವುದೂ ಇಲ್ಲ;


“ ‘ಕದಿಯಬಾರದು. “ ‘ಸುಳ್ಳಾಡಬಾರದು. “ ‘ಒಬ್ಬರಿಗೊಬ್ಬರು ಮೋಸಮಾಡಬಾರದು.


ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಅದರಂತೆಯೇ ಸೈನಿಕರು, “ನಾವೇನು ಮಾಡಬೇಕು?” ಎಂದು ಕೇಳಿದರು. ಅದಕ್ಕೆ ಯೋಹಾನನು, “ಯಾರನ್ನೂ ಬೆದರಿಸಿ ಹಣ ತೆಗೆದುಕೊಳ್ಳಬೇಡಿರಿ. ಯಾರ ಮೇಲೆಯೂ ಸುಳ್ಳು ದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ,” ಎಂದು ಹೇಳಿದನು.


ಅವನು ಯೇಸುವಿಗೆ, “ಅವು ಯಾವುವು?” ಎಂದು ಕೇಳಿದನು. ಅದಕ್ಕೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು,


ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ.


ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಖಡ್ಗ, ಹರಿತವಾದ ಬಾಣವಾಗಿದ್ದಾನೆ.


ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ; ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು.


ಕೇಡು ಮಾಡುವವನು ಕೆಟ್ಟ ಮಾತುಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು.


ಒಬ್ಬ ಪ್ರಾಮಾಣಿಕ ಸಾಕ್ಷಿ ಸತ್ಯವನ್ನು ಹೇಳುತ್ತಾನೆ, ಆದರೆ ಸುಳ್ಳುಸಾಕ್ಷಿಯು ಸುಳ್ಳನ್ನು ಹೇಳುತ್ತಾನೆ.


ಮೋಸದ ನಾಲಿಗೆಯೇ, ದೇವರು ನಿನಗೆ ಏನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?


ನನ್ನ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡಿರಿ; ಸುಳ್ಳುಸಾಕ್ಷಿಗಳೂ ಕ್ರೂರ ನಿಂದಕರೂ ನನಗೆ ವಿರೋಧವಾಗಿ ಎದ್ದಿದ್ದಾರೆ.


ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಮಾಡು.


ಆಗ ಅರಸನು ಅವನನ್ನು, “ನಿನ್ನ ಯಜಮಾನನ ಪುತ್ರನು ಎಲ್ಲಿದ್ದಾನೆ?” ಎಂದು ಕೇಳಿದನು. ಚೀಬನು ಅರಸನಿಗೆ, “ಅವನು ಯೆರೂಸಲೇಮಿನಲ್ಲಿದ್ದಾನೆ. ಏಕೆಂದರೆ ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರುಗಿ ಕೊಡುವರೆಂದು ಹೇಳಿಕೊಂಡನು,” ಎಂದನು.


ಸುಳ್ಳಿನ ವಿಷಯಗಳಿಂದ ನೀವು ದೂರವಿರಬೇಕು. ನಿರಪರಾಧಿ, ನೀತಿವಂತ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಬಾರದು. ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.


“ಒಬ್ಬ ಮನುಷ್ಯನನ್ನು ಮೊದಲು ವಿಚಾರಿಸಿ, ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ನಮ್ಮ ನಿಯಮವು ಅವನಿಗೆ ತೀರ್ಪುಮಾಡುವುದುಂಟೇ?” ಎಂದನು.


ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುತ್ತಾ, “ನೀನು ನಮ್ಮ ಬಳಿಗೆ ತಂದ ಹಿಬ್ರಿಯ ಸೇವಕನು ನನ್ನನ್ನು ಅವಮಾನ ಮಾಡುವುದಕ್ಕೆ ನನ್ನ ಬಳಿಗೆ ಬಂದನು.


ಪ್ರಾಮಾಣಿಕ ಸಾಕ್ಷಿಯು ಸುಳ್ಳಾಡನು, ಆದರೆ ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು