Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:2 - ಕನ್ನಡ ಸಮಕಾಲಿಕ ಅನುವಾದ

2 “ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕೆಟ್ಟ ಕಾರ್ಯವನ್ನು ಮಾಡುವವರು ಬಹು ಮಂದಿ ಇದ್ದಾರೆ. ಆದರೂ ನೀವು ಅವರ ಜೊತೆ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದುಷ್ಕಾರ್ಯವನ್ನು ಮಾಡುವವರು ಬಹು ಮಂದಿ ಆದಾಗ್ಯೂ ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:2
36 ತಿಳಿವುಗಳ ಹೋಲಿಕೆ  

ಮಗನೇ, ಅವರೊಂದಿಗೆ ಸೇರಬೇಡ, ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.


ನಾನು ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಅವಹೇಳನಕ್ಕೆ ಕಳವಳಗೊಂಡರೂ, ಬಾಗಿಲಿನಿಂದ ಹೊರಗೆ ಹೋಗದೆ ಮೌನವಾಗಿದ್ದೆನೋ?


ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು,” ಎಂದು ಹೇಳಿದೆ.


ಇವನು ಅವರ ತೀರ್ಮಾನಕ್ಕೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ. ಇವನು ಯೆಹೂದ್ಯರ ಪಟ್ಟಣವಾದ ಅರಿಮಥಾಯದವನೂ ದೇವರ ರಾಜ್ಯಕ್ಕಾಗಿ ಎದುರುನೋಡುವವನೂ ಆಗಿದ್ದನು.


ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ದುಷ್ಟರ ದಾರಿಯೊಳಗೆ ನೀನು ಪ್ರವೇಶಿಸದಿರು ಕೆಟ್ಟವರ ಮಾರ್ಗದಲ್ಲಿ ನೀನು ಹೋಗಬೇಡ.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಲು ಬಯಸಿ ಪೌಲನಿಗೆ, “ನೀನು ಯೆರೂಸಲೇಮಿಗೆ ಹೋಗಿ, ಅಲ್ಲಿ ನನ್ನೆದುರಿನಲ್ಲಿ ಈ ದೂರುಗಳ ನ್ಯಾಯವಿಚಾರಣೆಗಾಗಿ ಒಪ್ಪಿಕೊಳ್ಳುವಿಯೋ?” ಎಂದು ಕೇಳಿದನು.


ಎರಡು ವರ್ಷಗಳು ಕಳೆದವು. ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ಎಂಬುವನು ರಾಜ್ಯಪಾಲನಾಗಿ ಬಂದನು. ಫೇಲಿಕ್ಸನು ಯೆಹೂದ್ಯರಿಗೆ ಮೆಚ್ಚುಗೆಯನ್ನು ಗಳಿಸಬಯಸಿದವನಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.


“ನನ್ನ ಒಡೆಯನಾದ ಅರಸನೇ, ಈ ಮನುಷ್ಯರು ಬಾವಿಯಲ್ಲಿ ಹಾಕಿದ ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಏಕೆಂದರೆ ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ,” ಎಂದನು.


ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು.


ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.


ಅರಸನು ನಿಮ್ಮ ಜನರಿಗೆ ನೀತಿಯಿಂದಲೂ ನಿಮ್ಮ ಬಾಧೆಪಟ್ಟ ಪ್ರಜೆಗೆ ನ್ಯಾಯದಿಂದಲೂ ತೀರ್ಪುಮಾಡಲಿ.


“ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.


ಆದರೆ ಅವರು ಮಲಗುವುದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರವರೆಗೆ ಎಲ್ಲಾ ಜನರೂ ಪ್ರತಿಯೊಂದು ಮೂಲೆಯಿಂದ ಕೂಡಿ, ಮನೆಯನ್ನು ಸುತ್ತಿಕೊಂಡರು.


ದೇವರು ಭೂಮಿಯನ್ನು ನೋಡಲಾಗಿ ಅದು ಕೆಟ್ಟುಹೋಗಿತ್ತು, ಮನುಷ್ಯರೆಲ್ಲರೂ ಭೂಮಿಯ ಮೇಲೆ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.


ಇಂಥವುಗಳನ್ನು ನಡೆಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೈವವಿಧಿಯನ್ನು ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಹಾಗೆ ಮಾಡುವವರನ್ನು ಮೆಚ್ಚುತ್ತಾರೆ.


ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.


ಪರನಿಗೂ, ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸಬೇಡ. ವಿಧವೆಯಿಂದ ಉಡುವ ವಸ್ತ್ರವನ್ನು ಒತ್ತೆಯಾಗಿ ತೆಗೆದುಕೊಳ್ಳಬೇಡ.


ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ಯೆಹೋವ ದೇವರು ನೋಹನಿಗೆ, “ನೀನೂ, ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಸೇರಿಕೊಳ್ಳಿರಿ. ಏಕೆಂದರೆ ಈ ಕಾಲದವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವುದನ್ನು ನಾನು ನೋಡಿದ್ದೇನೆ.


“ಈ ಆಲಯ ಹಾಳುಬಿದ್ದಿರುವಾಗ, ನೀವು, ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವುದಕ್ಕೆ ಇದು ನಿಮಗೆ ಕಾಲವೋ?”


ಸೌಲನೂ, ಅವನ ಜನರೂ ಅಗಾಗನನ್ನೂ ಮೇಲ್ತರವಾದ ಕುರಿಗಳನ್ನೂ ದನಗಳನ್ನೂ ಕುರಿಮರಿಗಳನ್ನೂ, ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದರು. ಆದರೆ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.


ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ.


ಆಗ ಸೌಲನು ಸಮುಯೇಲನಿಗೆ, “ನಾನು ಯೆಹೋವ ದೇವರ ಆಜ್ಞೆಯನ್ನೂ, ನಿನ್ನ ಮಾತುಗಳನ್ನೂ ಮೀರಿದ್ದರಿಂದ ನಾನು ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು