Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:21 - ಕನ್ನಡ ಸಮಕಾಲಿಕ ಅನುವಾದ

21 ಅವನ ವಿಷಯದಲ್ಲಿ ಜಾಗ್ರತೆಯಾಗಿದ್ದು, ಅವನ ಮಾತಿಗೆ ವಿಧೇಯರಾಗಿರಿ. ಅವನಿಗೆ ಕೋಪವನ್ನೆಬ್ಬಿಸಬೇಡಿರಿ. ಏಕೆಂದರೆ ನನ್ನ ಹೆಸರು ಅವನಲ್ಲಿ ಇರುವುದರಿಂದ ಅವನು ನಿಮ್ಮ ದ್ರೋಹಗಳನ್ನು ಮನ್ನಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವು ಆತನಲ್ಲಿ ಲಕ್ಷ್ಯವಿಟ್ಟು ಮಾತಿಗೆ ಕಿವಿಗೊಡಬೇಕು. ಆತನಿಗೆ ಅವಿಧೇಯರಾಗಿ ಇರಬಾರದು. ಏಕೆಂದರೆ ಆತ ಬರುವುದು ನನ್ನ ಹೆಸರಿನಲ್ಲಿ. ನೀವು ಅವಿಧೇಯರಾದರೆ ಆತ ನಿಮ್ಮನ್ನು ಕ್ಷಮಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ಕಿವಿಗೊಡಬೇಕು; ಆತನಿಗೆ ಅವಿಧೇಯರಾಗಿರಬಾರದು; ಅವಿಧೇಯರಾದರೆ ನಿಮ್ಮನ್ನು ಕ್ಷವಿುಸಲಾರನು; ನನ್ನ ನಾಮಮಹಿಮೆ ಆತನಲ್ಲಿ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:21
41 ತಿಳಿವುಗಳ ಹೋಲಿಕೆ  

ಆದರೆ ಜನರು ಮಹೋನ್ನತರಾದ ದೇವರನ್ನು ಪರೀಕ್ಷಿಸಿ ವಿರೋಧಿಸಿದರು; ದೇವರ ಶಾಸನಗಳನ್ನು ಅವರು ಕೈಗೊಳ್ಳಲಿಲ್ಲ.


ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದಿದ್ದರೂ ಈ ಕಾರ್ಯಗಳನ್ನಾದರೂ ನಂಬಿರಿ. ಆಗ ತಂದೆಯು ನನ್ನಲ್ಲಿಯೂ ನಾನು ತಂದೆಯಲ್ಲಿಯೂ ಇರುವುದು ನಿಮಗೆ ಗೊತ್ತಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.


ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸಲಾರಿರಿ. ಏಕೆಂದರೆ ಅವರು ಪರಿಶುದ್ಧ ದೇವರು, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ತೀಕ್ಷ್ಣ ದೇವರು. ಅವರು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸರು.


ಆಗ ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ. ‘ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು,” ಎಂದರು.


ಏಕೆಂದರೆ ದೇವರ ಸರ್ವಸಂಪೂರ್ಣತೆಯು ಮಾನವ ದೇಹವಾಗಿ ಕ್ರಿಸ್ತ ಯೇಸುವಿನಲ್ಲಿಯೇ ವಾಸಮಾಡಿದೆ.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಆ ಪ್ರವಾದಿ ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.


ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?


ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.


ಯೆಹೋವ ದೇವರಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಸೇರಿರುವ ಈ ದುಷ್ಟ ಸಭೆಗೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಮರುಭೂಮಿಯಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು,” ಎಂದರು.


ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.


ನಾನೇ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಸರ್ವಶಕ್ತ ದೇವರೆಂದು ಪ್ರಕಟಿಸಿಗೊಂಡೆನು. ಆದರೆ ಯೆಹೋವ ದೇವರೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಪೂರ್ಣವಾಗಿ ತಿಳಿಸಲಿಲ್ಲ.


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


“ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:


“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


“ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:


ಮರಣಕರವಲ್ಲದ ಪಾಪವನ್ನು ಮಾಡುವ ಸಹೋದರ ಅಥವಾ ಸಹೋದರಿಯನ್ನು ಯಾರಾದರೂ ಕಂಡರೆ, ಆ ಸಹೋದರ ಅಥವಾ ಸಹೋದರಿಯರಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಅವರಿಗೆ ಜೀವವನ್ನು ದಯಪಾಲಿಸುವರು. ಮರಣಕರವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಆದರೆ ಮರಣಕರವಾದ ಪಾಪವೂ ಉಂಟು. ಈ ಮರಣಕರವಾದ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


“ದೇವರು ನುಡಿದದ್ದನ್ನು ಕೇಳಿ ಕೋಪಗೊಂಡು ವಿರೋಧಿಸಿದವರು ಯಾರು? ಆದರೂ ಮೋಶೆಯ ಮೂಲಕ ಈಜಿಪ್ಟಿನಿಂದ ಹೊರಟು ಬಂದವರೆಲ್ಲರೂ ಹಾಗೆ ಮಾಡಲಿಲ್ಲವಲ್ಲಾ?


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ. ನಾನು ಅವರನ್ನು ತೃಪ್ತಿಪಡಿಸಿದ ಮೇಲೆ, ಅವರು ವ್ಯಭಿಚಾರ ಮಾಡಿದ್ದಾರೆ. ವೇಶ್ಯೆಯರ ಮನೆಗಳಲ್ಲಿ ಗುಂಪಾಗಿ ಸೇರಿದ್ದಾರೆ.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಪೂರ್ವದಿಂದ ಪಶ್ಚಿಮದವರೆಗೆ ಇರುವವರೆಲ್ಲರೂ ನನ್ನ ಹೊರತು ಮತ್ತೊಬ್ಬನು ಇಲ್ಲ, ನಾನೇ ಯೆಹೋವ ದೇವರು ಮತ್ತೊಬ್ಬ ದೇವರು ಇಲ್ಲ ಎಂದು ನನ್ನನ್ನು ತಿಳಿದುಕೊಳ್ಳುವರು.


ನಾನೇ ಯೆಹೋವ ದೇವರು, ಅದೇ ನನ್ನ ಹೆಸರು. ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತುತಿಯನ್ನು ಎರಕದ ವಿಗ್ರಹಗಳಿಗೂ ಕೊಡೆನು.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.


ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್.


ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ.


ಆದರೆ ಯೆಹೋವ ದೇವರ ದೂತನು ಅವನಿಗೆ, “ನನ್ನ ಹೆಸರು ಏನೆಂದು ನೀನು ಕೇಳುವುದೇನು? ಆ ಹೆಸರು ಆಶ್ಚರ್ಯಕರವಾದದ್ದು,” ಎಂದನು.


ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ ರಕ್ತದಲ್ಲಿ ಹೊರಳಾಡಿಸಿದ ವಸ್ತ್ರಗಳು ಆಗಿರುತ್ತವೆ. ಆದರೆ ಇವು ಬೆಂಕಿಗೆ ಆಹುತಿಯಾಗುತ್ತವೆ. ಅದು ಬೆಂಕಿಗೆ ಇಂಧನವಾಗಿರುತ್ತದೆ.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು