Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:3 - ಕನ್ನಡ ಸಮಕಾಲಿಕ ಅನುವಾದ

3 ಬಡವನಿಗೂ ವ್ಯಾಜ್ಯದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಲ್ಲದೆ ಬಡವನನ್ನು ಕರುಣಿಸಿ ಪಕ್ಷಪಾತದಿಂದ ತೀರ್ಮಾನ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಇದಲ್ಲದೆ ಬಡವನೆಂದು ಕರುಣಿಸಿ ಪಕ್ಷಪಾತದ ತೀರ್ಪನ್ನು ನೀಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:3
10 ತಿಳಿವುಗಳ ಹೋಲಿಕೆ  

ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


“ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.


ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು,” ಎಂದು ಹೇಳಿದೆ.


“ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ತಪ್ಪಿಸಿ ತೀರ್ಪುಕೊಡಬಾರದು.


ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ.


ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆಮಾಡಬೇಡ; ನ್ಯಾಯಾಲಯದಲ್ಲಿ ದರಿದ್ರರನ್ನು ತುಳಿಯಬೇಡ.


ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಕಾನೂನುಗಳನ್ನು ಬರೆಯುವವರಿಗೆ ಕಷ್ಟ!


ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ, ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು. ಅವರು ನಿರಪರಾಧಿಯನ್ನು ಬಾಧೆಪಡಿಸಿ, ಲಂಚವನ್ನು ತೆಗೆದುಕೊಂಡರು ಮತ್ತು ಬಾಗಿಲ ಬಳಿಯಲ್ಲಿರುವ ಬಡವರ ನ್ಯಾಯವನ್ನು ತೀರಿಸದೇ ಕಳುಹಿಸಿಬಿಟ್ಟಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು