Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:4 - ಕನ್ನಡ ಸಮಕಾಲಿಕ ಅನುವಾದ

4 ಮೋಶೆಯು ಯೆಹೋವ ದೇವರು ಪ್ರಕಟಪಡಿಸಿದ ಮಾತುಗಳನ್ನೆಲ್ಲಾ ಬರೆದಿಟ್ಟನು. ಅವನು ಮರುದಿನ ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಬಲಿಪೀಠವನ್ನು ಕಟ್ಟಿಸಿ, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಆ ಬೆಟ್ಟದ ಬುಡದಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿ ಇಸ್ರಾಯೇಲ್ಯರ ಯೌವನಸ್ಥರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಮೋಶೆ ಯೆಹೋವನ ಆಜ್ಞೆಗಳನ್ನೆಲ್ಲಾ ಒಂದು ಸುರುಳಿಯಲ್ಲಿ ಬರೆದನು. ಮರುದಿನ ಮುಂಜಾನೆ, ಅವನು ಬೇಗನೆ ಎದ್ದು ಬೆಟ್ಟದ ಕೆಳಭಾಗದ ಹತ್ತಿರ, ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಂಬಗಳುಳ್ಳ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಇಸ್ರೇಲರ ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:4
27 ತಿಳಿವುಗಳ ಹೋಲಿಕೆ  

ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.


ಯಾಕೋಬನು ಬೆಳಿಗ್ಗೆ ಎದ್ದು, ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು, ಅದನ್ನು ಸ್ತಂಭವಾಗಿ ನೆಟ್ಟು, ಅದರ ಮೇಲೆ ಎಣ್ಣೆಯನ್ನು ಹೊಯ್ದನು.


ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಕುರಿಮರಿಯಾದವರ ಹನ್ನೆರಡು ಜನ ಅಪೊಸ್ತಲರ ಹೆಸರುಗಳಿದ್ದವು.


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ದೇವರ ಆಲಯದ ಪ್ರತಿಷ್ಠಾಪನೆಗೋಸ್ಕರ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ, ನಾನೂರು ಕುರಿಮರಿಗಳನ್ನೂ, ಇಸ್ರಾಯೇಲ್ ಕುಲ ಗೋತ್ರಗಳ ಲೆಕ್ಕದ ಪ್ರಕಾರ, ಸಮಸ್ತ ಇಸ್ರಾಯೇಲರ ದೋಷಪರಿಹಾರ ಬಲಿಗಾಗಿ ಹನ್ನೆರಡು ಮೇಕೆಯ ಹೋತಗಳನ್ನೂ ಅರ್ಪಿಸಿದರು.


ಆಗ ಅಹೀಯನು ತನ್ನ ಮೇಲೆ ಇರುವ ಹೊಸ ಕಂಬಳಿಯನ್ನು ತೆಗೆದುಕೊಂಡು ಅದನ್ನು ಹನ್ನೆರಡು ತುಂಡುಗಳಾಗಿ ಹರಿದು,


ಅವರು ಯೊರ್ದನಿನಿಂದ ತೆಗೆದುಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.


“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಗೋತ್ರಗಳ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ ಕೋಲುಗಳನ್ನು ತೆಗೆದುಕೊಂಡು, ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ನೀನು ಬರೆ.


“ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು ಇರಬೇಕು.


ಈ ರತ್ನಗಳು ಇಸ್ರಾಯೇಲರ ಗೋತ್ರದ ಹೆಸರುಗಳ ಪ್ರಕಾರ ಅವು ಹನ್ನೆರಡಾಗಿರಬೇಕು. ಒಂದೊಂದರ ಮೇಲೆ ಒಂದೊಂದು ಹೆಸರಿದ್ದು, ಹನ್ನೆರಡು ಗೋತ್ರಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.


ಆಗ ಯಾಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ತಂಭವಾಗಿ ನಿಲ್ಲಿಸಿದನು.


ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.


ಆಗ ಯೆಹೋವ ದೇವರು ಮೋಶೆಗೆ, “ಇದನ್ನು ಜ್ಞಾಪಕಾರ್ಥವಾಗಿ ಗ್ರಂಥದಲ್ಲಿ ಬರೆ. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಲೋಕದಲ್ಲಿ ಇರದಂತೆ ಸಂಪೂರ್ಣವಾಗಿ ಅಳಿಸಿಬಿಡುವೆನು. ಇದನ್ನು ಯೆಹೋಶುವನಿಗೆ ಮನದಟ್ಟಾಗುವಂತೆ ಹೇಳು,” ಎಂದರು.


ಇದಾದ ಮೇಲೆ ಮೋಶೆ ಬಲಿಪೀಠವನ್ನು ಕಟ್ಟಿ, ಅದಕ್ಕೆ “ಯೆಹೋವ ನಿಸ್ಸೀ,” ಎಂದು ಹೆಸರಿಟ್ಟನು.


“ಈಗ ಅವರ ಮುಂದೆ ನೀನು ಇಡತಕ್ಕ ನ್ಯಾಯವಿಧಿಗಳು ಇವೇ.


ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರ ಸಭೆಯಲ್ಲಿ ಓದಿದನು. ಆಗ ಅವರು, “ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ಅವುಗಳಿಗೆ ವಿಧೇಯರಾಗುವೆವು,” ಎಂದರು.


ಯೆಹೋವ ದೇವರು ಮೋಶೆಗೆ ಹೀಗೆ ಹೇಳಿದರು, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಪ್ರಕಾರವೇ ನಾನು ನಿನ್ನ ಮತ್ತು ಇಸ್ರಾಯೇಲಿನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ.”


ಆ ದಿನದಲ್ಲಿ ಈಜಿಪ್ಟ್ ದೇಶದ ಮಧ್ಯದಲ್ಲಿ ಯೆಹೋವ ದೇವರಿಗೆ ಬಲಿಪೀಠವು ದೇಶದ ಎಲ್ಲೆಯಲ್ಲಿ ಯೆಹೋವ ದೇವರಿಗೆ ಒಂದು ಸ್ತಂಭವು ಇರುವುದು.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ಯೆಹೋಶುವನು ಅವರಿಗೆ, “ನೀವು ಯೊರ್ದನ್ ನದಿ ಮಧ್ಯದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮಂಜೂಷದ ಮುಂದೆ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನೂ ಒಂದೊಂದು ಕಲ್ಲನ್ನು ಭುಜದ ಮೇಲೆ ಹೊತ್ತುಕೊಂಡು ಬನ್ನಿರಿ.


“ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವುದು,” ಎಂದು ಯೆಹೋವ ದೇವರ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ, ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,


ಮುದ್ರೆ ಹಾಕಿದವರು ಯಾರೆಂದರೆ: ಅಧಿಪತಿಯಾದ ಹಕಲ್ಯನ ಮಗ ನೆಹೆಮೀಯನು. ಚಿದ್ಕೀಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು