Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:8 - ಕನ್ನಡ ಸಮಕಾಲಿಕ ಅನುವಾದ

8 ತರುವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಈ ಎಲ್ಲಾ ಮಾತುಗಳ ವಿಷಯದಲ್ಲಿ ಯೆಹೋವ ದೇವರು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಮೋಶೆ ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿವಿುಕಿಸಿ - ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವು ಇದೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮಿಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ಈ ರಕ್ತವು ಸೂಚಿಸುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:8
23 ತಿಳಿವುಗಳ ಹೋಲಿಕೆ  

ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿದನು ಮತ್ತು ರಕ್ತದಲ್ಲಿ ಮಿಕ್ಕ ಅರ್ಧವನ್ನು ಬಲಿಪೀಠದ ಮೇಲೆ ಚಿಮುಕಿಸಿದನು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ. ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ಜ್ಞಾಪಿಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ,” ಎಂದರು.


ಯೇಸು ಅವರಿಗೆ, “ಇದು ಬಹುಜನರಿಗೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ.


ನೀನು ನನ್ನೊಡನೆ ಒಡಂಬಡಿಕೆಯನ್ನು ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ನಿನ್ನ ಸೆರೆಯವರನ್ನು ನೀರಿಲ್ಲದ ಬಾವಿಯೊಳಗಿಂದ ಬಿಡುಗಡೆಮಾಡುವೆನು.


ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.


ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.


ಮೋಶೆಯು ಅಭಿಷೇಕ ತೈಲವನ್ನೂ, ಬಲಿಪೀಠದ ಮೇಲಿರುವ ರಕ್ತವನ್ನೂ ತೆಗೆದುಕೊಂಡು, ಆರೋನನ ಮೇಲೆಯೂ, ಅವನ ಉಡುಪುಗಳ ಮೇಲೆಯೂ ಅವನೊಂದಿಗೆ ಅವನ ಪುತ್ರರ ಮೇಲೆಯೂ, ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು. ಆರೋನನನ್ನೂ, ಅವನ ಉಡುಪುಗಳನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಅವನ ಪುತ್ರರ ಉಡುಪುಗಳನ್ನೂ ಪವಿತ್ರ ಮಾಡಿದನು.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ, ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.


ಆದರೂ ಅವರು ತಮ್ಮ ಬಾಯಿಗಳಿಂದ ದೇವರಿಗೆ ಮುಖಸ್ತುತಿ ಮಾಡಿ, ತಮ್ಮ ನಾಲಿಗೆಯಿಂದ ದೇವರನ್ನು ಸುಳ್ಳಾಗಿ ಹೋಗಳುತ್ತಿದ್ದರು.


“ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮ ದೇವರಾದ ಯೆಹೋವ ದೇವರು ಹೋರೇಬಿನಲ್ಲಿ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಂಡರು.


ಇದಲ್ಲದೆ ಯೆಹೋವ ದೇವರು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ, ಅವರ ಸಂಗಡ ಮಾಡಿದ ಒಡಂಬಡಿಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು,” ಎಂದನು.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀವು ಈಜಿಪ್ಟಿನೊಳಗಿನಿಂದ ಹೊರಗೆ ಬಂದಾಗ, ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ, ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿರುವುದು. ನೀವು ಭಯಪಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು