Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:37 - ಕನ್ನಡ ಸಮಕಾಲಿಕ ಅನುವಾದ

37 “ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶಕೊಡುವಂತೆ ಅವುಗಳನ್ನು ಹೊತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳಲ್ಲಿ ದೀಪಹಚ್ಚಿದಾಗ ಅವುಗಳ ಬೆಳಕು ಮುಂಭಾಗದಲ್ಲಿ ಪ್ರಕಾಶಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು; ಆ ಹಣತೆಗಳಲ್ಲಿ ದೀಪಹಚ್ಚಲು ಎದುರಾಗಿ ಬೆಳಕು ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಈ ಹಣತೆಗಳು ದೀಪಸ್ತಂಭದ ಮುಂದಿರುವ ಪ್ರದೇಶಕ್ಕೆ ಬೆಳಕು ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:37
28 ತಿಳಿವುಗಳ ಹೋಲಿಕೆ  

“ಆರೋನನ ಸಂಗಡ ಮಾತನಾಡಿ ಅವನಿಗೆ ಹೀಗೆ ಹೇಳಬೇಕು, ‘ನೀನು ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳೂ ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಪ್ರಕಾಶಕೊಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.”


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯ ಏನೆಂದರೆ: ಆ ಏಳು ನಕ್ಷತ್ರಗಳು, ಆ ಏಳು ಸಭೆಗಳ ಸಂದೇಶಕರು, ಆ ಏಳು ದೀಪಸ್ತಂಭಗಳು, ಆ ಏಳು ಸಭೆಗಳಾಗಿರುತ್ತವೆ.


ನನ್ನೊಂದಿಗೆ ಮಾತನಾಡುತ್ತಿದ್ದ ಧ್ವನಿಯು ಯಾರದೆಂದು ನೋಡುವುದಕ್ಕೆ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ


ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಬ್ಬಿಸಿದನು. ಅವನು ನನಗೆ, “ನೀನು ಏನು ನೋಡುತ್ತೀ?” ಎಂದು ಕೇಳಿದಾಗ ನಾನು, “ಏಳು ದೀಪಗಳುಳ್ಳ ಬಂಗಾರದ ದೀಪಸ್ತಂಭ ಒಂದನ್ನು ನೋಡುತ್ತಿದ್ದೇನೆ. ಅದರ ಮೇಲೆ ಎಣ್ಣೆಯ ಪಾತ್ರೆಗಳಿವೆ.


ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.


ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಸಿಂಹಾಸನದೊಳಗಿಂದ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಹರಡಿದವು. ಸಿಂಹಾಸನದ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಬೆಳಗುತ್ತಿದ್ದವು.


ಯೋಹಾನನು, ಅಂದಿನ ಏಷ್ಯಾ ಪ್ರಾಂತದಲ್ಲಿರುವ ಏಳು ಸಭೆಗಳಿಗೆ ಬರೆಯುವುದೇನೆಂದರೆ, ಗತಕಾಲ, ವರ್ತಮಾನ, ಭವಿಷ್ಯತ್ ಕಾಲಗಳಲ್ಲಿರುವ ದೇವರಿಂದ ಮತ್ತು ತಮ್ಮ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ,


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


“ಈ ತೈಲವನ್ನು ಏಕೆ ಮುನ್ನೂರು ಬೆಳ್ಳಿ ನಾಣ್ಯಗಳನ್ನು ಮಾರಿ ಬಡವರಿಗೆ ಕೊಡಲಿಲ್ಲ?” ಎಂದನು.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.


ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.


ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ವಾಸಿಸುವವರಿಗೆ ಪ್ರಕಾಶಿಸಿ, ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ.”


“ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ಆಜ್ಞೆಯೇ ದೀಪವಾಗಿದೆ, ಬೋಧನೆಯೇ ಬೆಳಕಾಗಿದೆ; ಶಿಕ್ಷಣದ ತಿದ್ದುವಿಕೆಗಳು ಜೀವ ಮಾರ್ಗವಾಗಿವೆ.


ನಿಮ್ಮ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.


ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.


ಅವರು ಏಳು ದೀಪಗಳನ್ನೂ ಕುಡಿ ಕತ್ತರಿಸುವ ಕತ್ತರಿಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಿದರು.


ಆರೋನನು ಸಂಜೆ ದೀಪಗಳನ್ನು ಹಚ್ಚುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಯೆಹೋವ ದೇವರ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪವು.


ಇದಲ್ಲದೆ ಅದರ ಕುಡಿ ಕತ್ತರಿಸುವ ಕತ್ತರಿಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಯೆಹೋವ ದೇವರ ಸನ್ನಿಧಿಯಲ್ಲಿ ದೀಪಗಳನ್ನು ಇರಿಸಿದನು.


“ಇದಲ್ಲದೆ ಅವರು ನೀಲಿವಸ್ತ್ರವನ್ನು ತೆಗೆದುಕೊಂಡು, ಅದರಿಂದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ, ಅದರ ಬತ್ತಿ ಕತ್ತರಿಸುವ ಸಲಕರಣೆಗಳನ್ನೂ, ಅದರ ಬಟ್ಟಲುಗಳನ್ನೂ, ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.


ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಶುದ್ಧ ಬಂಗಾರದ ದೀಪಸ್ತಂಭಗಳನ್ನೂ ಅವುಗಳ ದೀಪಗಳನ್ನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು