Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:31 - ಕನ್ನಡ ಸಮಕಾಲಿಕ ಅನುವಾದ

31 “ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಬೇಕು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹುರಿನಾರಿನ ಬಟ್ಟೆಯಲ್ಲಿ ನೀಲಿ, ಧೂಮ್ರ, ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಕಲಾತ್ಮಕವಾಗಿ ಕಸೂತಿಹಾಕಿ ಒಂದು ತೆರೆಯ ಚಿತ್ರವನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:31
30 ತಿಳಿವುಗಳ ಹೋಲಿಕೆ  

ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು.


ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ಹೊಸೆದ ನಾರಿನಿಂದ ಮಾಡಿಸಿ, ಅದರಲ್ಲಿ ಕೆರೂಬಿಗಳುಳ್ಳದ್ದನ್ನಾಗಿ ಮಾಡಿಸಿದನು.


ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದರು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಿದರು.


ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.


ಕೆಲಸದವರಲ್ಲಿದ್ದ ಶಿಲ್ಪಿಗಳೆಲ್ಲರೂ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿದರು.


“ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಮಾಡಿದ ಕೆರೂಬಿಗಳುಳ್ಳವುಗಳಾಗಿಯೂ ಇರಬೇಕು.


ಕ್ರಿಸ್ತ ಯೇಸು ತಾವೇ ನಮ್ಮ ಸಮಾಧಾನವಾಗಿದ್ದು, ಎರಡು ಗುಂಪಿನವರನ್ನು ಒಂದು ಮಾಡಿ, ಅಗಲಿಸಿದ ವೈರತ್ವದ ಅಡ್ಡಗೋಡೆಯನ್ನು ತಮ್ಮ ಶರೀರದ ಮೂಲಕ ಕೆಡವಿಹಾಕಿದರು.


ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು.


ಓ ರಾಜಪುತ್ರಿಯೇ! ಕೆರಗಳನ್ನು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದರವಾಗಿವೆ! ನಿನ್ನ ಅಂದದ ಕಾಲುಗಳು ಶಿಲ್ಪಿಯ ಕೈಕೆಲಸದ ಆಭರಣಗಳಂತಿವೆ.


ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ, ನನ್ನ ಬಲಗೈಯ ಕೌಶಲ್ಯ ಮರೆತು ಹೋಗಲಿ.


“ತರುವಾಯ ಅವನು ಜನರಿಗೋಸ್ಕರ ಪಾಪ ಪರಿಹಾರದ ಬಲಿಯಾಗಿರುವ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯ ಒಳಗಡೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಕರುಣಾಸನದ ಮೇಲೆಯೂ, ಕರುಣಾಸನದ ಮುಂದೆಯೂ ಚಿಮುಕಿಸಬೇಕು.


ಅವನು ಮಂಜೂಷವನ್ನು ಗುಡಾರಕ್ಕೆ ತಂದು, ಮರೆಮಾಡುವ ಪರದೆಯನ್ನಿರಿಸಿ, ಒಡಂಬಡಿಕೆಯ ಮಂಜೂಷವನ್ನು ಮರೆಮಾಡಿದನು. ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಮೋಶೆಯು ಮಾಡಿದನು.


ಒಡಂಬಡಿಕೆಯ ಮಂಜೂಷವನ್ನು ಅದರಲ್ಲಿ ಇಟ್ಟು, ಅದನ್ನು ನೀನು ಪರದೆಯಿಂದ ಮುಚ್ಚಬೇಕು.


ಅವನ ಜೊತೆಯಲ್ಲಿ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ, ಧೂಮ್ರ ಮತ್ತು ರಕ್ತವರ್ಣದ ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡುವವನೂ ಆಗಿದ್ದನು.


ಕೆತ್ತನೆಯ ಕೆಲಸಗಳನ್ನು, ವಿನ್ಯಾಸದ ಕೆಲಸಗಳನ್ನು, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ, ನಯವಾದ ನಾರುಬಟ್ಟೆ ಇವುಗಳಲ್ಲಿ ಕಸೂತಿ ಕೆಲಸಗಳನ್ನು ಮಾಡುವುದಕ್ಕೆ ಮತ್ತು ನೇಯ್ಗೆಯ ಕೆಲಸ ಮಾಡುವುದಕ್ಕೆ ಎಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಯೆಹೋವ ದೇವರು ಅವರಿಗೆ ಜ್ಞಾನವನ್ನು ಅನುಗ್ರಹಿಸಿದ್ದಾರೆ.


ಕುಶಲತೆ ಬಲ್ಲ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ದಾರಗಳನ್ನು ಮತ್ತು ನಯವಾದ ನಾರುಮಡಿಯನ್ನು ತಂದರು.


ನೀಲಿ, ನಾರು, ರಕ್ತವರ್ಣ ನಾರು, ಲಾಕಿ ಬಣ್ಣ, ನಾರು, ನಾರುಬಟ್ಟೆಗಳು, ಮೇಕೆಯ ಕೂದಲು,


“ದೇವನಿರ್ಣಯ ಮಾಡುವ ಆತನ ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿಸಬೇಕು.


ಕರುಣಾಸನದ ಎರಡು ತುದಿಗಳಲ್ಲಿ ಎರಡು ಬಂಗಾರದಿಂದ ಕೆರೂಬಿಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು.


ನೀಲಿ, ಧೂಮ್ರ, ರಕ್ತವರ್ಣದಾರಗಳು, ನಾರುಬಟ್ಟೆಗಳು, ಮೇಕೆಯ ಕೂದಲು,


ಸೂರ್ಯನು ಕಳೆಗುಂದಿದನು ಮತ್ತು ದೇವಾಲಯದ ತೆರೆಯು ಹರಿದು ಎರಡು ಭಾಗವಾಯಿತು.


ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳ ಮೇಲೆ ಊರಿಕೊಂಡಿರುವ ಜಾಲಿ ಮರದ ಸ್ತಂಭಗಳಲ್ಲಿ ಅದನ್ನು ತೂಗು ಹಾಕಬೇಕು.


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.


ಅದಕ್ಕೆ ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಅವುಗಳಿಗೆ ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳನ್ನು ಎರಕ ಹೊಯ್ದರು.


“ಗುಡಾರದ ಅಂಗಳದ ದ್ವಾರಕ್ಕಾಗಿ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸಮಾಡಿದ ಇಪ್ಪತ್ತು ಮೊಳದ ಪರದೆ, ಅದಕ್ಕೆ ನಾಲ್ಕು ಸ್ತಂಭಗಳು ಮತ್ತು ನಾಲ್ಕು ಗದ್ದಿಗೇ ಕಲ್ಲುಗಳಿರಬೇಕು.


ಮಂಜೂಷವನ್ನು, ಅದರ ಕೋಲುಗಳನ್ನು, ಅವುಗಳೊಂದಿಗೆ ಕರುಣಾಸನವನ್ನು, ಮರೆಮಾಡುವ ಪರದೆಯನ್ನು,


ಜನರು ಹೊರಡುವಾಗ, ಆರೋನನೂ, ಅವನ ಮಕ್ಕಳೂ ಒಳಗೆ ಹೋಗಿ ಪರದೆಯನ್ನು ಇಳಿಸಿ, ಅದರಿಂದ ಒಡಂಬಡಿಕೆಯ ಮಂಜೂಷವನ್ನು ಮುಚ್ಚಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು