Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:21 - ಕನ್ನಡ ಸಮಕಾಲಿಕ ಅನುವಾದ

21 ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:21
44 ತಿಳಿವುಗಳ ಹೋಲಿಕೆ  

ಇದು ಅವರಿಗೆ ಶಾಶ್ವತ ಕಟ್ಟಳೆಯಾಗಿರಬೇಕು. “ಶುದ್ಧೀಕರಣದ ನೀರನ್ನು ಚಿಮುಕಿಸುವವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಂಜೆಯವರೆಗೆ ಅಪವಿತ್ರನಾಗಿರುವನು.


ಆದರೆ ಲೇವಿಯರೇ ದೇವದರ್ಶನ ಗುಡಾರದ ಸೇವೆಯನ್ನು ಮಾಡಬೇಕು. ಅವರು ಅಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದು ನಿಮ್ಮ ಸಂತತಿಗಳಿಗೆ ಶಾಶ್ವತ ಕಟ್ಟಳೆಯಾಗಿದೆ, ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಾಸ್ತ್ಯ ಇರಬಾರದು.


ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.


ದೇವರ ಮಂಜೂಷವಿರುವ ಯೆಹೋವ ದೇವರ ಮಂದಿರದಲ್ಲಿ ದೇವರ ದೀಪವು ಆರಿಹೋಗುವುದಕ್ಕಿಂತ ಮುಂಚೆ ಸಮುಯೇಲನು ಮಲಗಿದ್ದನು.


“ಹೀಗೆ ಇಸ್ರಾಯೇಲರ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತ ಮಾಡುವುದು, ನಿಮಗೆ ನಿರಂತರವಾದ ನಿಯಮವಾಗಿರುವುದು,” ಎಂದು ಹೇಳಿದರು. ಯೆಹೋವ ದೇವರು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.


“ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.


ಆರೋನನು ಸಂಜೆ ದೀಪಗಳನ್ನು ಹಚ್ಚುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಯೆಹೋವ ದೇವರ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪವು.


ಮಾತ್ರವಲ್ಲದೆ ನಮಗೆ ಬಹು ನಿಶ್ಚಯವಾದ ಪ್ರವಾದನೆಯ ವಾಕ್ಯಗಳಿವೆ. ಉದಯ ನಕ್ಷತ್ರವಾಗಿರುವ ಕ್ರಿಸ್ತ ಯೇಸು ನಿಮ್ಮ ಹೃದಯಗಳಲ್ಲಿ ಉದಯಿಸುವಾಗ ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪದಂತೆ ಎಣಿಸಿ, ನೀವು ಆ ಪ್ರವಾದನಾ ವಾಕ್ಯಗಳಿಗೆ ಲಕ್ಷ್ಯಕೊಡುವುದು ಒಳ್ಳೆಯದು.


ಯೋಹಾನನು ಉರಿದು ಪ್ರಕಾಶಿಸುವ ದೀಪವಾಗಿದ್ದನು. ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಅತ್ಯಾನಂದಪಡಲು ನೀವು ಇಚ್ಚಿಸಿದಿರಿ.


ಹಾಗೆಯೇ ದಾವೀದನು ಆ ದಿವಸ ಮೊದಲ್ಗೊಂಡು ಇಂದಿನವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ, ಕಟ್ಟಳೆಯಾಗಿಯೂ ಮಾಡಿದನು.


ಆರೋನನೂ ಅವನ ಪುತ್ರರೂ ದೇವದರ್ಶನದ ಗುಡಾರಕ್ಕೆ ಬರುವ ಸಮಯದಲ್ಲಿಯೂ ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ದೋಷವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. “ಇದೇ ಆರೋನನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.


“ನೀನು ಎಫೆಸದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು, ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವವರು ಹೇಳುವುದೇನೆಂದರೆ:


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


“ನೀವು ವಸ್ತ್ರ ಧರಿಸಿ ಸೇವೆಗೆ ಸಿದ್ಧರಾಗಿರಿ. ನಿಮ್ಮ ದೀಪಗಳು ಉರಿಯುತ್ತಿರಲಿ,


ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


ಯೆಹೋವ ದೇವರ ಆಲಯದಲ್ಲಿ ಪ್ರತಿ ರಾತ್ರಿ ಸೇವೆ ಸಲ್ಲಿಸುವ ಯೆಹೋವ ದೇವರ ಎಲ್ಲಾ ಸೇವಕರೇ, ಯೆಹೋವ ದೇವರನ್ನು ಸ್ತುತಿಸಿರಿ.


ಆಗ ನೀನು ಲೇವಿಯರನ್ನು ದೇವದರ್ಶನದ ಗುಡಾರದ ಮುಂದೆ ಕರೆತಂದು, ಇಸ್ರಾಯೇಲರ ಸಮೂಹವನ್ನೆಲ್ಲಾ ಒಟ್ಟುಗೂಡಿಸಬೇಕು.


ಅದು ಆರೋನನ ಮತ್ತು ಅವನ ಪುತ್ರರದಾಗಿರಬೇಕು. ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ನಿತ್ಯವಾದ ನಿಯಮವಾಗಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವವುಗಳಲ್ಲಿ ಅವನಿಗೆ ಮಹಾಪರಿಶುದ್ಧವಾಗಿರುವುದು.”


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ನಿಮಗೆ ಮತ್ತು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರುವುದು.


ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು, ಅದನ್ನು ದೇವದರ್ಶನದ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಪುತ್ರರು ಬಲಿಪೀಠದ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.


ಒಡಂಬಡಿಕೆಯ ಮಂಜೂಷವನ್ನು ಅದರಲ್ಲಿ ಇಟ್ಟು, ಅದನ್ನು ನೀನು ಪರದೆಯಿಂದ ಮುಚ್ಚಬೇಕು.


ಅದರಲ್ಲಿ ಸ್ವಲ್ಪ ಪುಡಿಮಾಡಿ, ದೇವದರ್ಶನದ ಗುಡಾರದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇಡು. ಅದು ನಿಮಗೆ ಮಹಾಪರಿಶುದ್ಧವಾಗಿರಲಿ.


“ನಾನು ದೇವದರ್ಶನದ ಗುಡಾರವನ್ನೂ ಬಲಿಪೀಠವನ್ನೂ ಪರಿಶುದ್ಧ ಮಾಡುವೆನು. ಆರೋನನನ್ನೂ ಅವನ ಪುತ್ರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರ ಮಾಡುವೆನು.


“ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ದೇವದರ್ಶನದ ಗುಡಾರದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವುದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವುದು.


ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.


ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನದ ಹಲಗೆಯನ್ನು ಇಡಬೇಕು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮನ್ನವನ್ನು ಸಂರಕ್ಷಿಸುವುದಕ್ಕೆ ಸಾಕ್ಷಿಯಾಗಿ ಇಟ್ಟನು.


ದೇವರು ಆ ಗುಮ್ಮಟಕ್ಕೆ ಆಕಾಶ ಎಂದು ಕರೆದರು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.


ದೇವರು ಬೆಳಕಿಗೆ ಹಗಲು ಎಂದೂ ಕತ್ತಲೆಗೆ ರಾತ್ರಿ ಎಂದೂ ಕರೆದರು. ಆಗ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.


“ಬೆಳಕಿಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿರುವಂತೆ ಅವರು ಕುಟ್ಟಿದ ಶುದ್ಧವಾದ ಓಲಿವ್ ಎಣ್ಣೆಯನ್ನು ನನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕು.


“ಇಸ್ರಾಯೇಲರ ಮೇಲೆ ಇನ್ನು ಮುಂದೆ ಎಂದಿಗೂ ನನ್ನ ಕೋಪಾಗ್ನಿಯು ಬಾರದ ಹಾಗೆ ಪರಿಶುದ್ಧ ಸ್ಥಳವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು.


“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಅವರು ಸಾಯದ ಹಾಗೆ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು,” ಎಂದರು.


ಯಾಜಕನು ಧಾನ್ಯ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ, ಧಾನ್ಯ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ, ಅದರ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದುಕೊಂಡು ಜ್ಞಾಪಕಾರ್ಥವಾಗಿ ಯೆಹೋವ ದೇವರಿಗೆ ಬಲಿಪೀಠದ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.


ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾರೆ.


“ನೀನು ಸಾಯದಂತೆ ದೇವದರ್ಶನದ ಗುಡಾರಕ್ಕೆ ಬರುವಾಗ ನೀನೂ ಇಲ್ಲವೆ ನಿನ್ನ ಪುತ್ರರೂ ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿಯಬಾರದು. ಇದು ನಿಮ್ಮ ವಂಶಾವಳಿಯು ಇರುವವರೆಗೂ ಶಾಶ್ವತವಾಗಿರುವ ಕಟ್ಟಳೆಯಾಗಿದೆ.


ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’


ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಬಲಿಯನ್ನು ತರುವವರೆಗೆ ರೊಟ್ಟಿಯನ್ನಾಗಲಿ, ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿಯೂ ಶಾಶ್ವತವಾದ ನಿಯಮವಾಗಿರಬೇಕು.


ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ.


“ ‘ಹೀಗೆ ಇವು ನಿಮ್ಮ ಸಮಸ್ತ ನಿವಾಸಿಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಯಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು