Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:2 - ಕನ್ನಡ ಸಮಕಾಲಿಕ ಅನುವಾದ

2 ನಿನ್ನ ಸಹೋದರನಾದ ಆರೋನನ ಗೌರವಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಅಣ್ಣ ಆರೋನನಿಗೆ ತಕ್ಕ ಗೌರವ ಹಾಗು ಶೋಭೆ ತರುವಂಥ ದೀಕ್ಷಾವಸ್ತ್ರಗಳನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಅಣ್ಣನಾದ ಆರೋನನಿಗೆ ತಕ್ಕ ಗೌರವವೂ ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಿನ್ನ ಅಣ್ಣನಾದ ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿಸು. ಈ ಬಟ್ಟೆಗಳು ಅವನಿಗೆ ಘನತೆಯನ್ನೂ ಗೌರವವನ್ನೂ ನೀಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:2
36 ತಿಳಿವುಗಳ ಹೋಲಿಕೆ  

ಮೋಶೆಯು ಅಭಿಷೇಕ ತೈಲವನ್ನೂ, ಬಲಿಪೀಠದ ಮೇಲಿರುವ ರಕ್ತವನ್ನೂ ತೆಗೆದುಕೊಂಡು, ಆರೋನನ ಮೇಲೆಯೂ, ಅವನ ಉಡುಪುಗಳ ಮೇಲೆಯೂ ಅವನೊಂದಿಗೆ ಅವನ ಪುತ್ರರ ಮೇಲೆಯೂ, ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು. ಆರೋನನನ್ನೂ, ಅವನ ಉಡುಪುಗಳನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಅವನ ಪುತ್ರರ ಉಡುಪುಗಳನ್ನೂ ಪವಿತ್ರ ಮಾಡಿದನು.


ಯಾಜಕನಾದ ಆರೋನನ ಕಲಾತ್ಮಕವಾಗಿ ನೇಯ್ದ ಸೇವಾವಸ್ತ್ರಗಳು, ಪರಿಶುದ್ಧ ವಸ್ತ್ರಗಳು, ಯಾಜಕನ ಕೆಲಸ ಮಾಡುವುದಕ್ಕೆ ಅವನ ಮಕ್ಕಳ ವಸ್ತ್ರಗಳು,


ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ತೊಟ್ಟುಕೊಳ್ಳುವುದಕ್ಕೆ ಆಕೆಗೆ ಅನುಗ್ರಹಿಸಲಾಗಿತ್ತು. ಏಕೆಂದರೆ ಆ ನಾರುಮಡಿಯು ಪರಿಶುದ್ಧರ ನೀತಿಕೃತ್ಯಗಳೇ.


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ಹಾಗಾದರೆ, ಮಹಿಮೆ ಘನತೆಗಳಿಂದ ನಿನ್ನನ್ನು ಅಲಂಕರಿಸಿಕೋ; ನೀನು ಗೌರವ ಪ್ರಭಾವಗಳನ್ನೂ ಧರಿಸಿಕೋ.


ಆರೋನನ ಮಕ್ಕಳಿಗೆ ತಕ್ಕ ಗೌರವ ಹಾಗೂ ಶೋಭೆ ಸಿಗುವಂತೆ ನಿಲುವಂಗಿಗಳನ್ನೂ, ನಡುಕಟ್ಟುಗಳನ್ನೂ ಹಾಗೂ ಪೇಟಗಳನ್ನೂ ಮಾಡಿಸು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.


ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿಯು ಮಹೋನ್ನತ ಮಹಿಮೆಯಿಂದ ಅವರಿಗೆ ಉಂಟಾದದ್ದರಲ್ಲಿ ಅವರು ತಂದೆ ದೇವರಿಂದ ಗೌರವವನ್ನೂ ಮಹಿಮೆಯನ್ನೂ ಹೊಂದಿದರಲ್ಲವೇ.


ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.


ಹೇಗೆಂದರೆ, ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿರಿ.


ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ.


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.


ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ.


ಇಲ್ಲಿನ ಯಾಜಕರಿಗೆ ರಕ್ಷಣೆಯನ್ನು ಹೊದಿಸುವೆನು; ಚೀಯೋನಿನ ನಂಬಿಗಸ್ತ ಸೇವಕರು ಉತ್ಸಾಹಧ್ವನಿಯಿಂದ ಹಾಡುವರು.


ನಿಮ್ಮ ಯಾಜಕರು ನೀತಿಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ; ನಿಮ್ಮ ಭಕ್ತರು ಉತ್ಸಾಹಧ್ವನಿ ಮಾಡಲಿ.’ ”


ಘನತೆಯೂ, ಪ್ರಭೆಯೂ ಅವರ ಮುಂದೆ ಇವೆ; ಬಲವೂ, ಸೌಂದರ್ಯವೂ ಅವರ ಪರಿಶುದ್ಧ ಸ್ಥಳದಲ್ಲಿ ಇವೆ.


ಆರೋನನು ನನಗೆ ಯಾಜಕ ಸೇವೆ ಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ, ಅವನನ್ನು ಶುದ್ಧಮಾಡಬೇಕು.


ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ವೈಭವದ ಉಡುಪುಗಳನ್ನು ಹಾಕಿಕೋ ಏಕೆಂದರೆ ಇಂದಿನಿಂದ ಸುನ್ನತಿ ಇಲ್ಲದವರೂ, ಅಶುದ್ಧರೂ ನಿನ್ನೊಳಗೆ ಬರುವುದಿಲ್ಲ.


ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು