Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:21 - ಕನ್ನಡ ಸಮಕಾಲಿಕ ಅನುವಾದ

21 ಈ ರತ್ನಗಳು ಇಸ್ರಾಯೇಲರ ಗೋತ್ರದ ಹೆಸರುಗಳ ಪ್ರಕಾರ ಅವು ಹನ್ನೆರಡಾಗಿರಬೇಕು. ಒಂದೊಂದರ ಮೇಲೆ ಒಂದೊಂದು ಹೆಸರಿದ್ದು, ಹನ್ನೆರಡು ಗೋತ್ರಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲರ ಕುಲಗಳ ಸಂಖ್ಯಾನುಸಾರ ಹನ್ನೆರಡು ರತ್ನಗಳಿರಬೇಕು. ಮುದ್ರಾ ರತ್ನದಲ್ಲಿ ಕೆತ್ತುವಂತೆ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರ ಕುಲಗಳ ಸಂಖ್ಯಾಪ್ರಕಾರ ಹನ್ನೆರಡು ರತ್ನಗಳಿರಬೇಕು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಸ್ರೇಲನ ಗಂಡುಮಕ್ಕಳಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿರಬೇಕು. ಪ್ರತಿಯೊಂದು ಕಲ್ಲುಗಳಲ್ಲಿ ಇಸ್ರೇಲನ ಗಂಡುಮಕ್ಕಳ ಒಬ್ಬೊಬ್ಬರ ಹೆಸರನ್ನು ಬರೆಸಬೇಕು. ಒಬ್ಬ ಕೆಲಸಗಾರನು ಮುದ್ರೆಯನ್ನು ಕೆತ್ತುವಂತೆ ಈ ಹೆಸರುಗಳನ್ನು ಪ್ರತಿ ರತ್ನದ ಮೇಲೆ ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:21
11 ತಿಳಿವುಗಳ ಹೋಲಿಕೆ  

ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ ಪುತ್ರರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು.


ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.


ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


“ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವುದು,” ಎಂದು ಯೆಹೋವ ದೇವರ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ, ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,


ಶಿಲ್ಪಿಗನು ಕಲ್ಲಿನ ಮೇಲೆ ಮುದ್ರೆ ಕೆತ್ತುವ ಪ್ರಕಾರ, ಆ ಎರಡೂ ರತ್ನಗಳ ಮೇಲೆ ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಕೆತ್ತಿಸಿ, ಅವುಗಳನ್ನು ಬಂಗಾರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.


“ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ಹೆಣೆದ ಕೆಲಸವಾಗಿರುವ ಹುರಿಗಳಂತಿರುವ ಸರಪಣಿಯನ್ನು ಮಾಡಬೇಕು.


ಮೋಶೆಯು ಯೆಹೋವ ದೇವರು ಪ್ರಕಟಪಡಿಸಿದ ಮಾತುಗಳನ್ನೆಲ್ಲಾ ಬರೆದಿಟ್ಟನು. ಅವನು ಮರುದಿನ ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಬಲಿಪೀಠವನ್ನು ಕಟ್ಟಿಸಿ, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.


ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು ಅವುಗಳನ್ನು ಶಾಶ್ವತ ಶಾಸನವಾಗಿ ಮಾಡಿದ್ದರೆ ಎಷ್ಟೋ ಒಳಿತು!


ಅವರ ದೇವರಾದ ಯೆಹೋವ ದೇವರು ಆ ದಿವಸದಲ್ಲಿ, ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು, ಅವರು ಕಿರೀಟದ ರತ್ನಗಳಂತೆ ಆತನ ದೇಶದಲ್ಲಿ ಹೊಳೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು