Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:30 - ಕನ್ನಡ ಸಮಕಾಲಿಕ ಅನುವಾದ

30 ನಿರ್ಣಯವನ್ನು ತಿಳಿಸುವ ಎದೆಪದಕದಲ್ಲಿ ಊರೀಮ್ ಮತ್ತು ತುಮ್ಮೀಮ್‌ಗಳನ್ನು ಇಡಬೇಕು. ಆರೋನನು ಯೆಹೋವ ದೇವರ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಯೆಹೋವ ದೇವರ ಮುಂದೆ ಯಾವಾಗಲೂ ಇಸ್ರಾಯೇಲರ ನಿರ್ಣಯಗಳನ್ನು ತನ್ನ ಹೃದಯದ ಮೇಲೆ ಹೊರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್‌ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದೈವನಿರ್ಣಯವನ್ನು ತಿಳಿಸುವ ಊರಿಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಆ ಫಲಕದ ಚೀಲದಲ್ಲಿ ಇಡಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಅವು ಅವನ ಎದೆಯ ಮೇಲೆ ಇರುವುವು. ಇಸ್ರಯೇಲರು ಕೈಗೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಯಾವಾಗಲು ಧರಿಸಿಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳನ್ನು ಆ ಚೀಲದ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲ್ಯರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದೈವನಿರ್ಣಯದ ಪದಕದೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಡು. ಆರೋನನು ಯೆಹೋವನ ಮುಂದೆ ಹೋಗುವಾಗ ಅವುಗಳು ಅವನ ಎದೆಯ ಮೇಲಿರುವವು. ಹೀಗೆ ಆರೋನನು ಯೆಹೋವನ ಮುಂದೆ ನಿಲ್ಲುವಾಗಲೆಲ್ಲಾ, ಜನರಿಗೆ ತೀರ್ಪು ನೀಡತಕ್ಕದ್ದನ್ನು ಯಾವಾಗಲೂ ತನ್ನ ಎದೆಯ ಮೇಲೆ ಹೊತ್ತುಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:30
22 ತಿಳಿವುಗಳ ಹೋಲಿಕೆ  

ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.


ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.


ಲೇವಿ ಕುಲದ ವಿಷಯದಲ್ಲಿ ಹೇಳಿದ್ದೇನೆಂದರೆ: “ನಿಮ್ಮ ನಿರ್ಣಯವನ್ನು ತಿಳಿಸುವ ಊರೀಮ್, ತುಮ್ಮೀಮ್ ಎಂಬ ವಸ್ತುಗಳು ನಿಮ್ಮ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀವು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿರಿ. ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿರಿ.


ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.


ಅವನ ಮೇಲೆ ಎದೆಪದಕವನ್ನು ಹಾಕಿ, ಆ ಎದೆಪದಕದಲ್ಲಿ ಊರೀಮ್ ಮತ್ತು ತುಮ್ಮೀಮ್ ಇವುಗಳನ್ನೂ ಸಹ ಹಾಕಿದನು.


ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.


ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.


ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.


ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು.


ಅವನೇ ಯೆಹೋವ ದೇವರ ದೇವಾಲಯವನ್ನು ಕಟ್ಟಿದ ಮೇಲೆ, ರಾಜವೈಭವವನ್ನು ಧರಿಸಿ ಸಿಂಹಾಸನದ ಮೇಲೆ ಆಸೀನನಾಗಿ ಆಳುವನು. ಅವನ ಸಿಂಹಾಸನದಲ್ಲಿ ಒಬ್ಬ ಯಾಜಕನಾಗಿರುವನು. ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವುದು.


ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.


ಇಸ್ರಾಯೇಲರು ಯೆಹೋವ ದೇವರ ಬಳಿಗೆ ಹೋಗಿ, ಅವರ ಮುಂದೆ ಸಂಜೆಯವರೆಗೆ ಅತ್ತು, “ನಮ್ಮ ಸಹೋದರರಾದ ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕೋ?” ಎಂದು ಯೆಹೋವ ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಅವರ ಮೇಲೆ ಹೋಗಿರಿ,” ಎಂದರು. ಎರಡನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರ ಬಳಿಗೆ ಬಂದರು.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ನಾನಂತೂ ನನಗಿರುವುದೆಲ್ಲವನ್ನೂ ನಿಮ್ಮ ಆತ್ಮಗಳಿಗೋಸ್ಕರ ಬಹು ಸಂತೋಷದಿಂದ ವೆಚ್ಚಮಾಡುತ್ತೇನೆ. ನನ್ನನ್ನು ಕೂಡ ನಿಮಗೋಸ್ಕರ ವೆಚ್ಚಮಾಡಲು ಸಿದ್ಧನಾಗಿದ್ದೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?


ನಿಮ್ಮ ಮೇಲೆ ತಪ್ಪು ಹೊರಿಸುವುದಕ್ಕಾಗಿ ನಾನು ಇದನ್ನು ನಿಮಗೆ ಹೇಳುತ್ತಿಲ್ಲ. ನಾವು ನಿಮ್ಮೊಂದಿಗೆ ಜೀವಿಸಿ, ಸಾಯುವಷ್ಟರ ಮಟ್ಟಿಗೆ ನಾವು ನಮ್ಮ ಹೃದಯದಾಳದಿಂದ ನಿಮ್ಮನ್ನು ಪ್ರೀತಿಸುತ್ತಿದ್ದೇವೆ ಎಂದು ನಾನು ಹಿಂದೆ ಹೇಳಲಿಲ್ಲವೇ?


ಆಗ ಇಸ್ರಾಯೇಲರು ಬೇತೇಲಿಗೆ ಹೋಗಿ, ತಮ್ಮಲ್ಲಿ ಮೊದಲು ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕಾದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಮೊದಲು ಹೋಗಬೇಕು,” ಎಂದರು.


“ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲರ ಹೆಸರುಗಳನ್ನು ಯಾವಾಗಲೂ ಯೆಹೋವ ದೇವರ ಮುಂದೆ ಜ್ಞಾಪಕ ಮಾಡುವುದಕ್ಕಾಗಿ ನ್ಯಾಯದ ಎದೆಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು