Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:12 - ಕನ್ನಡ ಸಮಕಾಲಿಕ ಅನುವಾದ

12 ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ, ರಕ್ತವನ್ನೆಲ್ಲಾ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲ ಬಲಿಪೀಠದ ಬುಡಕ್ಕೆ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತರುವಾಯ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬಳಿಗೆ ಹೋಗು. ವೇದಿಕೆಯ ಕೊಂಬುಗಳಿಗೆ ನಿನ್ನ ಬೆರಳಿನಿಂದ ರಕ್ತವನ್ನು ಹಚ್ಚು. ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಕೆಯ ಬುಡಕ್ಕೆ ಸುರಿದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:12
18 ತಿಳಿವುಗಳ ಹೋಲಿಕೆ  

ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಬೇಕು.


ಆಗ ಆರೋನನ ಪುತ್ರರು ಅವನ ಬಳಿಗೆ ರಕ್ತವನ್ನು ತಂದರು. ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಬಲಿಪೀಠದ ಅಡಿಯಲ್ಲಿ ಉಳಿದ ರಕ್ತವನ್ನು ಹೊಯ್ದನು.


ಆಗ ಅವನು ಅದನ್ನು ವಧಿಸಿದನು. ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಸುತ್ತಲೂ ಇರುವ ಕೊಂಬುಗಳ ಮೇಲೆ ತನ್ನ ಬೆರಳಿನಿಂದ ಹಚ್ಚಿ, ಬಲಿಪೀಠವನ್ನು ಶುದ್ಧೀಕರಿಸಿ, ಉಳಿದ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಅದನ್ನು ಪವಿತ್ರ ಮಾಡಿದನು.


ಅದರ ಉದ್ದ ಮತ್ತು ಅಗಲ ಸುಮಾರು ನಲವತ್ತೈದು ಸೆಂಟಿಮೀಟರ್, ಅದರ ಎತ್ತರ ಸುಮಾರು ತೊಂಬತ್ತು ಸೆಂಟಿಮೀಟರ್ ಇದ್ದು, ಅದು ಚಚ್ಚೌಕವಾಗಿರಬೇಕು. ಅದರ ಕೊಂಬುಗಳನ್ನು ಸಹ ಜಾಲಿ ಮರದಿಂದಲೇ ಮಾಡಬೇಕು.


ಏಕೆಂದರೆ ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದುಹಾಕುವುದು ಅಸಾಧ್ಯ.


ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.


ಆ ಹೋರಿಯ ರಕ್ತದಿಂದ ಸ್ವಲ್ಪ ತೆಗೆದುಕೊಂಡು, ಕರುಣಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು, ಕರುಣಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೇಕು.


ಇದಲ್ಲದೆ, ಅವನು ಪಾಪ ಪರಿಹಾರದ ಬಲಿಯ ರಕ್ತವನ್ನು ಬಲಿಪೀಠದ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಬಲಿಪೀಠದ ಬದಿಯಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿಯಾಗಿರುವುದು.


ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಬೇಕು. ಉಳಿದ ಎಲ್ಲಾ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ಯಬೇಕು.


ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ಆ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.


ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು.


ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದರು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಿದರು.


ಕುರಿಮರಿ ಆಗಿರುವವರು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ ತಮಗಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತರಾದವರ ಆತ್ಮಗಳು ಬಲಿಪೀಠದ ಕೆಳಗಿರುವುದನ್ನು ಕಂಡೆನು.


ತರುವಾಯ ನೀನು ಆ ಹೋರಿಯನ್ನು ಯೆಹೋವ ದೇವರ ಮುಂದೆ ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು