Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:13 - ಕನ್ನಡ ಸಮಕಾಲಿಕ ಅನುವಾದ

13 ನೀನು ಕರುಳುಗಳನ್ನೂ ಅವುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದರ ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಹಾಗು ಅವುಗಳ ಮೇಲಿರುವ ಕೊಬ್ಬನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದರ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಹೋರಿಯ ಒಳಗಿನ ಕೊಬ್ಬನ್ನೂ ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೂ ತೆಗೆದುಬಿಡು. ಈ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:13
29 ತಿಳಿವುಗಳ ಹೋಲಿಕೆ  

“ಮೊದಲು ಕೊಬ್ಬನ್ನು ಸುಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ,” ಎಂದು ಯಾರಾದರೂ ಹೇಳಿದರೆ; ಸೇವಕನು, “ಇಲ್ಲ ಈಗಲೇ ಕೊಡು. ನೀನು ಕೊಡದಿದ್ದರೆ, ನಾನು ಒತ್ತಾಯದಿಂದ ತೆಗೆದುಕೊಳ್ಳುವೆನು,” ಎನ್ನುತ್ತಿದ್ದನು.


ನೀನು ನನಗೋಸ್ಕರ ಹಣದಿಂದ ಪರಿಮಳ ತೈಲವನ್ನು ಕೊಂಡುಕೊಳ್ಳಲಿಲ್ಲ. ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ಅಕ್ರಮಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.


ಯೆಹೋವ ದೇವರ ಖಡ್ಗವು ರಕ್ತದಲ್ಲಿ ಸ್ನಾನ ಮಾಡಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಮುಚ್ಚಲಾಗಿದೆ. ಏಕೆಂದರೆ ಯೆಹೋವ ದೇವರಿಗೆ ಬೊಚ್ರದಲ್ಲಿ ಬಲಿಯು, ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯು ಉಂಟು.


“ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು?” ಎಂದು ಯೆಹೋವ ದೇವರು ನುಡಿಯುತ್ತಾರೆ. “ಟಗರುಗಳ ದಹನಬಲಿಗಳು, ಪುಷ್ಟಪಶುಗಳ ಕೊಬ್ಬು ಇದೆಲ್ಲಾ ನನಗೆ ಬೇಸರ. ಹೋರಿ, ಕುರಿ, ಹೋತಗಳ ರಕ್ತಕ್ಕೆ, ನಾನು ಸಂತೋಷಪಡುವುದಿಲ್ಲ.


ನಾನು ಚೆಲ್ಲಿದ ನೀರಿನಂತಿದ್ದೇನೆ, ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿ ಹೋಗಿದೆ. ನನ್ನ ಹೃದಯವು ಮೇಣದ ಹಾಗೆ ನನ್ನೊಳಗೆ ಕರಗಿಹೋಗಿದೆ.


“ಆದರೆ ಆಕಳಿನ ಚೊಚ್ಚಲನ್ನಾದರೂ ಕುರಿಯ ಚೊಚ್ಚಲನ್ನಾದರೂ ಮೇಕೆಯ ಚೊಚ್ಚಲನ್ನಾದರೂ ನೀನು ಬಿಟ್ಟುಬಿಡಬಾರದು. ಅವು ಪರಿಶುದ್ಧವಾಗಿವೆ, ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸಬೇಕು, ಅವುಗಳ ಕೊಬ್ಬನ್ನು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ ಮಾಡಬೇಕು.


ಯಾಜಕನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಬಲಿಪೀಠದ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಯೆಹೋವ ದೇವರಿಗೆ ಆಹ್ಲಾದಕರ ಸುಗಂಧ ವಾಸನೆಯಾಗಿ ಸುಡಬೇಕು.


ಪಾಪ ಪರಿಹಾರದ ಬಲಿಯ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು.


ಹೋರಿಯ ಮತ್ತು ಟಗರಿನ ಕೊಬ್ಬನ್ನೂ ಹಿಂಭಾಗದ ಕೊಬ್ಬನ್ನೂ ಮತ್ತು ಕರುಳುಗಳ ಸುತ್ತಲಿನ ಕೊಬ್ಬನ್ನೂ ಮೂತ್ರಪಿಂಡಗಳ ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬನ್ನೂ


ಅದರ ಪಾಪ ಪರಿಹಾರದ ಬಲಿಯ ಕೊಬ್ಬು, ಮೂತ್ರಪಿಂಡಗಳು ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬು, ಇವುಗಳನ್ನು ಅವನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ, ಬಲಿಪೀಠದ ಮೇಲೆ ಸುಟ್ಟನು.


ಅವನು ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಂಡನು.


ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಬಲಿಪೀಠದ ಮೇಲೆ ಸುಟ್ಟನು.


ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳಿಗೆ ಸೇರುವುದು.


ಅದರ ಎಲ್ಲಾ ಕೊಬ್ಬನ್ನೂ, ಅಂದರೆ ಬಾಲದ ಕೊಬ್ಬನ್ನೂ ಕರುಳಿನ ಸುತ್ತಲಿರುವ ಕೊಬ್ಬನ್ನು,


ಬಲಿಪೀಠದ ಮೇಲೆ ಬೆಂಕಿಯು ಅದರೊಳಗೆ ಸುಡುತ್ತಲೇ ಇರಬೇಕು. ಅದು ಆರಿಹೋಗಿರಬಾರದು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆಯನ್ನು ಹಾಕಬೇಕು. ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು. ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಬಲಿ ಅರ್ಪಣೆಗಳ ಕೊಬ್ಬನ್ನು ಸುಡಬೇಕು.


ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು.


ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ನೀನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರ ಮುಂದೆ ಸುವಾಸನೆಗೋಸ್ಕರ ದಹಿಸಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.


“ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಳ್ಳಬೇಕು. ಏಕೆಂದರೆ ಅದು ಪ್ರತಿಷ್ಠೆಯ ಟಗರು.


ಅದನ್ನೆಲ್ಲಾ ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ದಹನಬಲಿಯಾಗಿದೆ. ಅದು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ.


ಅದರಲ್ಲಿ ಯಾವುದನ್ನೂ ಹಸಿಯಾದದ್ದನ್ನಾಗಲಿ, ನೀರಿನಲ್ಲಿ ಬೇಯಿಸಿಯಾಗಲಿ ತಿನ್ನದೆ, ಅದರ ತಲೆ, ತೊಡೆ, ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.


ಬದಿಯಲ್ಲಿರುವ ಎರಡು ಮೂತ್ರ ಜನಕಾಂಗಗಳನ್ನೂ, ಅವುಗಳ ಮೇಲಿರುವ ಕೊಬ್ಬನ್ನೂ, ಪಕ್ಕೆಯ ಬದಿಯಲ್ಲಿಯ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದುಕೊಂಡು ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು