Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:30 - ಕನ್ನಡ ಸಮಕಾಲಿಕ ಅನುವಾದ

30 ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡೆಸಿ, ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದ ದಿನದಿಂದ ಅವುಗಳನ್ನು ಏಳು ದಿನಗಳವರೆಗೆ ತೊಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವನ ಮಕ್ಕಳಲ್ಲಿ ಅವನಿಗೆ ಪ್ರತಿಯಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದ ದಿನದಿಂದ ಏಳು ದಿವಸಗಳವರೆಗೆ ಆ ವಸ್ತ್ರಗಳನ್ನು ತೊಟ್ಟುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನ ಮಕ್ಕಳಲ್ಲಿ ಅವನಿಗೆ ಪ್ರತಿಯಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡಿಸುವದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿವಸಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆರೋನನ ತರುವಾಯ ಅವನ ಮಗನು ಮಹಾಯಾಜಕನಾಗುವನು. ಅವನು ಪವಿತ್ರಸ್ಥಳದಲ್ಲಿ ಸೇವೆಮಾಡಲು ದೇವದರ್ಶನಗುಡಾರಕ್ಕೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:30
17 ತಿಳಿವುಗಳ ಹೋಲಿಕೆ  

ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು, ಅವನ ಮಗ ಎಲಿಯಾಜರನಿಗೆ ತೊಡಿಸಿದನು. ಆಗ ಆರೋನನು ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ, ಎಲಿಯಾಜರನೂ ಬೆಟ್ಟದಿಂದ ಇಳಿದರು.


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ಏಳು ದಿನಗಳ ತನಕ ಅವರು ಬಲಿಪೀಠವನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.


ಯಾಜಕನು ಏಳನೆಯ ದಿನದಲ್ಲಿ ಅವನನ್ನು ಪರೀಕ್ಷಿಸಿದಾಗ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ, ಆ ವ್ಯಾಧಿ ಚರ್ಮದಲ್ಲಿ ಹರಡಿರದಿದ್ದರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.


ಆದ್ದರಿಂದ ಆರೋನನು ಬಲಿಪೀಠದ ಕಡೆಗೆ ಹೋಗಿ, ತನಗಾಗಿ ಪಾಪ ಪರಿಹಾರದ ಬಲಿಯಾದ ಕರುವನ್ನು ವಧಿಸಿದನು.


ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಮತ್ತು ಇಸ್ರಾಯೇಲಿನ ಹಿರಿಯರನ್ನೂ ಕರೆದನು.


“ಹೀಗೆ ಆರೋನನಿಗೂ ಅವನ ಪುತ್ರಿರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರಮಾಡಿ, ಏಳು ದಿವಸ ಅವರನ್ನು ಪ್ರತಿಷ್ಠೆ ಕ್ರಮವನ್ನು ಮಾಡಬೇಕು.


ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.


ಇನ್ನೂ ಏಳು ದಿನಗಳು ತಡೆದು, ಆ ಪಾರಿವಾಳವನ್ನು ಬಿಟ್ಟಾಗ, ಅದು ತಿರುಗಿ ಅವನ ಬಳಿಗೆ ಬರಲೇ ಇಲ್ಲ.


ಅವನು ಇನ್ನೂ ಏಳು ದಿವಸ ತಡೆದು, ಪಾರಿವಾಳವನ್ನು ಪುನಃ ನಾವೆಯೊಳಗಿಂದ ಹೊರಕ್ಕೆ ಬಿಟ್ಟನು.


“ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಪುತ್ರರಿಗೆ ಆಗಬೇಕು. ಅವರು ಅಭಿಷಿಕ್ತರಾಗಿ ಅವುಗಳನ್ನು ಧರಿಸಿಕೊಂಡು, ಪ್ರತಿಷ್ಠಿತರಾಗಬೇಕು.


“ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸಬೇಕು.


ಯಾವನು ತನ್ನ ತಂದೆಯ ಬದಲಾಗಿ ಮಹಾಯಾಜಕ ಉದ್ಯೋಗಕ್ಕೋಸ್ಕರ ಅಭಿಷಿಕ್ತನಾಗಿ ಪ್ರತಿಷ್ಟಿಸಲಾಗಿದ್ದಾನೋ, ಆ ಮಹಾಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು