Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:33 - ಕನ್ನಡ ಸಮಕಾಲಿಕ ಅನುವಾದ

33 ಅವರನ್ನು ಪ್ರತಿಷ್ಠೆ ಮಾಡುವುದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವುದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿದವುಗಳನ್ನು ಅವರೇ ಊಟಮಾಡಬೇಕು. ಇತರರು ಅದನ್ನು ಉಣ್ಣಬಾರದು. ಏಕೆಂದರೆ ಅವು ಪರಿಶುದ್ಧವಾದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರನ್ನು ಯಾಜಕ ಪದವಿಗೆ ಸೇರಿಸುವುದಕ್ಕೂ ದೇವರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳನ್ನು ಪಾಪಪರಿಹಾರಕ್ಕಾಗಿ ಸಮರ್ಪಿಸಲಾದುವೋ ಅವುಗಳನ್ನು ಅವರೇ ಭೋಜನ ಮಾಡಬೇಕು. ಇತರರು ಅವುಗಳನ್ನು ತಿನ್ನಕೂಡದು. ಏಕೆಂದರೆ ಅವು ಮೀಸಲಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರನ್ನು ಯಾಜಕೋದ್ಯೋಗಕ್ಕೆ ಸೇರಿಸುವದಕ್ಕೂ ದೇವರ ಸೇವೆಗೆ ಪ್ರತಿಷ್ಠಿಸುವದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರೇ ಭೋಜನಮಾಡಬೇಕೇ ಹೊರತು ಇತರರು ತಿನ್ನಕೂಡದು; ಅವು ಮೀಸಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅವರು ಯಾಜಕರಾಗಿ ಮಾಡಲ್ಪಟ್ಟಾಗ ಅವರ ಪಾಪನಿವಾರಣೆಗಾಗಿ ಇವುಗಳನ್ನು ಸಮರ್ಪಿಸಲಾಗಿತ್ತು. ಆದ್ದರಿಂದ ಆ ಸಮರ್ಪಣೆಗಳನ್ನು ಅವರು ಮಾತ್ರ ತಿನ್ನಬೇಕೇ ಹೊರತು ಬೇರೆಯವರು ತಿನ್ನಬಾರದು; ಯಾಕೆಂದರೆ ಅವು ಪರಿಶುದ್ಧವಾಗಿವೆ ಮತ್ತು ಪ್ರತ್ಯೇಕಿಸಲ್ಪಟ್ಟವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:33
16 ತಿಳಿವುಗಳ ಹೋಲಿಕೆ  

ಆದರೆ ಅವರು ನಿನ್ನ ಸಹಾಯಕರಾಗಿದ್ದು, ದೇವದರ್ಶನದ ಗುಡಾರದ ಎಲ್ಲಾ ಕಾರ್ಯಗಳಿಗೂ ಅದನ್ನು ಕಾಪಾಡುವುದಕ್ಕೂ ಜವಾಬ್ದಾರರಾಗಿರುವರು. ಬೇರೆ ಕುಲದವರು ನಿಮ್ಮ ಸಮೀಪಕ್ಕೆ ಬರಬಾರದು.


ನೀವು ಈ ರೊಟ್ಟಿಯನ್ನು ತಿಂದು, ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ, ಕರ್ತದೇವರ ಮರಣವನ್ನು ಅವರು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.


ಸ್ತೋತ್ರಮಾಡಿ ಮುರಿದು, “ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.


ದೀನರು ಉಂಡು ತೃಪ್ತರಾಗುವರು; ಯೆಹೋವ ದೇವರನ್ನು ಹುಡುಕುವವರು ಅವರನ್ನು ಸ್ತುತಿಸುವರು; ಅಂಥವರ ಹೃದಯವು ಎಂದೆಂದಿಗೂ ಚೈತನ್ಯ ಹೊಂದಲಿ.


ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:


ದೇವದರ್ಶನ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ದೇವದರ್ಶನದ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳಿದುಕೊಳ್ಳುವವರು ಮೋಶೆ, ಆರೋನ್ ಮತ್ತು ಅವನ ಪುತ್ರರು. ಇವರು ಇಸ್ರಾಯೇಲರಿಗಾಗಿ ಪರಿಶುದ್ಧಸ್ಥಳದ ಮೇಲ್ವಿಚಾರಣೆ ಮಾಡುವವರು. ಬೇರೆ ಯಾರಾದರೂ ಸಮೀಪಿಸಿದರೆ, ಅವರಿಗೆ ಮರಣಶಿಕ್ಷೆ ಆಗಬೇಕು.


ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”


ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು.


ಆರೋನನೂ ಅವನ ಪುತ್ರರೂ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಊಟಮಾಡಬೇಕು.


ದಹನಬಲಿ ಅರ್ಪಿಸುವವನು ತನ್ನ ಕೈಯನ್ನು ಆ ಪ್ರಾಣಿಯ ತಲೆಯ ಮೇಲೆ ಇಡಬೇಕು. ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವುದು.


ಮೋಶೆಯು ಆರೋನನೊಂದಿಗೂ ಉಳಿದ ಅವನ ಪುತ್ರರಾದ ಎಲಿಯಾಜರನೊಂದಿಗೂ ಈತಾಮಾರನೊಂದಿಗೂ ಮಾತನಾಡಿ, “ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಗಳಲ್ಲಿ ಉಳಿದಿರುವ ಧಾನ್ಯ ಸಮರ್ಪಣೆಯನ್ನು ತೆಗೆದುಕೊಳ್ಳಿರಿ ಮತ್ತು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿಯಿಲ್ಲದ ರೊಟ್ಟಿ ತಿನ್ನಿರಿ. ಏಕೆಂದರೆ ಅದು ಮಹಾಪರಿಶುದ್ಧವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು