Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:39 - ಕನ್ನಡ ಸಮಕಾಲಿಕ ಅನುವಾದ

39 ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅವುಗಳಲ್ಲಿ ಒಂದನ್ನು ಬೆಳಿಗ್ಗೆ ಮತ್ತೊಂದನ್ನು ಸಂಜೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವುಗಳಲ್ಲಿ ಒಂದನ್ನು ಪ್ರಾತಃಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಮುಂಜಾನೆ ಒಂದು ಕುರಿಮರಿಯನ್ನು ಮತ್ತು ಸಾಯಂಕಾಲ ಮತ್ತೊಂದು ಕುರಿಮರಿಯನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:39
15 ತಿಳಿವುಗಳ ಹೋಲಿಕೆ  

ಆಗ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯದಲ್ಲಿ ದಹನಬಲಿಯನ್ನೂ, ಸಾಯಂಕಾಲದ ಧಾನ್ಯ ಸಮರ್ಪಣೆಯನ್ನೂ, ಪಾನದ್ರವ್ಯವನ್ನೂ ದೊಡ್ಡ ಹೊಸ ಬಲಿಪೀಠದ ಮೇಲೆ ಅರ್ಪಿಸಿ, ದಹನಬಲಿಯ ರಕ್ತವೆಲ್ಲವನ್ನೂ ಚಿಮುಕಿಸಿದನು. ಆದರೆ ಕಂಚಿನ ಬಲಿಪೀಠವನ್ನು ನಾನು ಮಾರ್ಗದರ್ಶನಕ್ಕಾಗಿ ಉಪಯೋಗಿಸುವೆನು,” ಎಂದು ಆಜ್ಞಾಪಿಸಿದನು.


ರಾಜರೇ, ನಮ್ಮ ಹನ್ನೆರಡು ಗೋತ್ರಗಳವರು ಅತ್ಯಾಸಕ್ತಿಯಿಂದ ಹಗಲಿರುಳು ದೇವರ ಸೇವೆಮಾಡುತ್ತಾ, ಆ ವಾಗ್ದಾನವು ನೆರವೇರುವುದೆಂದು ನಿರೀಕ್ಷಿಸುತ್ತಾ ಇದ್ದಾರೆ. ರಾಜರೇ, ಈ ನಿರೀಕ್ಷೆಯ ನಿಮಿತ್ತವಾಗಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ.


ಧೂಪಾರ್ಪಣೆಯ ಸಮಯದಲ್ಲಿ ಸೇರಿದ ಜನರೆಲ್ಲರೂ ಹೊರಗೆ ಪ್ರಾರ್ಥಿಸುತ್ತಿದ್ದರು.


ಯೆಹೋವ ದೇವರೇ, ಉದಯಕಾಲದಲ್ಲಿ ನನ್ನ ಸ್ವರವನ್ನು ಕೇಳಿರಿ; ಮುಂಜಾನೆಯಲ್ಲಿ ನಾನು ನನ್ನ ಬೇಡಿಕೆಗಳನ್ನು ನಿಮ್ಮ ಮುಂದೆ ಸಮರ್ಪಿಸಿ, ಎದುರುನೋಡುತ್ತಾ ಕಾದುಕೊಂಡಿರುವೆನು.


ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.


ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ, ಒಂದು ಲೀಟರ್ ದ್ರಾಕ್ಷಾರಸವನ್ನು ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮ ಮಾಡಬೇಕು.


ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.


ಉದಯದಲ್ಲಿ ಕಾಣಿಕೆಗಳನ್ನು ಅರ್ಪಿಸುತ್ತಿರುವಾಗ, ನೀರು ಎದೋಮಿನ ಮಾರ್ಗವಾಗಿ ಬಂದದ್ದರಿಂದ ದೇಶವು ನೀರಿನಿಂದ ತುಂಬಿಕೊಂಡಿತು.


ಆಗ ಸೆರೆಯಿಂದ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ, ನನ್ನ ಬಳಿಗೆ ಕೂಡಿಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವವರೆಗೆ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು.


ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ.


ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು,


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಳ್ಳಬೇಕು. ತರುವಾಯ ಸಂಜೆಯಲ್ಲಿ ಇಸ್ರಾಯೇಲಿನ ಜನಾಂಗದವರೆಲ್ಲರೂ ಅವುಗಳನ್ನು ವಧಿಸಬೇಕು.


ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ, “ನೀನು ನನ್ನ ತಂದೆ ದಾವೀದನಿಗೆ ವಾಸವಾಗಿರುವ ಅರಮನೆಯನ್ನು ಕಟ್ಟಿಸಲು, ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ, ಹಾಗೆಯೇ ನನಗೂ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು