Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:4 - ಕನ್ನಡ ಸಮಕಾಲಿಕ ಅನುವಾದ

4 ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ತಂದು, ನೀರಿನಲ್ಲಿ ಅವರನ್ನು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಳಿಕ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಲಿಗೆ ಕರಕೊಂಡು ಬಂದು ನೀರಿನಲ್ಲಿ ಸ್ನಾನ ಮಾಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ತರುವಾಯ ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನಗುಡಾರದ ದ್ವಾರಕ್ಕೆ ಕರೆದುಕೊಂಡು ಬಾ. ಅವರನ್ನು ನೀರಿನಲ್ಲಿ ಸ್ನಾನಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:4
18 ತಿಳಿವುಗಳ ಹೋಲಿಕೆ  

“ಆರೋನನನ್ನೂ, ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ, ಅವರನ್ನು ನೀರಿನಿಂದ ಸ್ನಾನ ಮಾಡಿಸಬೇಕು.


ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.


ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.


ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.


ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ಸಂಜೆ ಆಗುತ್ತಿರುವಾಗ ಅವನು ಸ್ನಾನಮಾಡಿ, ಸೂರ್ಯನು ಮುಳುಗಿದಾಗ ಪಾಳೆಯದ ಒಳಗೆ ತಿರುಗಿಬರಬಹುದು.


“ಶುದ್ಧವಾಗುವುದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ, ತನ್ನ ಎಲ್ಲಾ ಕೂದಲನ್ನು ಬೋಳಿಸಿಕೊಂಡು, ತಾನು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು. ತರುವಾಯ ಅವನು ಪಾಳೆಯದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳವರೆಗೆ ಕಾಯಬೇಕು.


ಗುಡಾರದ ಬಾಗಿಲಿನ ಪರದೆಯನ್ನು ತೂಗುಹಾಕಿದನು.


“ಗುಡಾರದ ಬಾಗಿಲಿಗೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಗಳಿಂದ ಹೊಸೆದು ಕಸೂತಿ ಕೆಲಸಮಾಡಿದ ಪರದೆಯನ್ನು ಮಾಡಬೇಕು.


ಇವುಗಳನ್ನು ಒಂದೇ ಬುಟ್ಟಿಯಲ್ಲಿ ಇಟ್ಟುಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತೆಗೆದುಕೊಂಡು ಬರಬೇಕು.


ಆಗ ನೀನು ಲೇವಿಯರನ್ನು ದೇವದರ್ಶನದ ಗುಡಾರದ ಮುಂದೆ ಕರೆತಂದು, ಇಸ್ರಾಯೇಲರ ಸಮೂಹವನ್ನೆಲ್ಲಾ ಒಟ್ಟುಗೂಡಿಸಬೇಕು.


ಯಾಜಕರು ಅವುಗಳಲ್ಲಿ ಪ್ರವೇಶಿಸುವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು. ಏಕೆಂದರೆ ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸಮೀಪಿಸಬೇಕು,” ಎಂದನು.


ಅವರು ದೇವದರ್ಶನದ ಗುಡಾರದ ಒಳಗೆ ಸೇರುವ ಸಮಯದಲ್ಲಿಯೂ, ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಸ್ನಾನ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು