Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:9 - ಕನ್ನಡ ಸಮಕಾಲಿಕ ಅನುವಾದ

9 ಆರೋನನಿಗೂ ಅವನ ಪುತ್ರರಿಗೂ ಮುಂಡಾಸುಗಳನ್ನು ಇಟ್ಟು ನಡುಕಟ್ಟುಗಳನ್ನು ಕಟ್ಟಬೇಕು, ಅವರಿಗೆ ಹೀಗೆ ಅವರಿಗೆ ಯಾಜಕತ್ವ ಸೇವೆಯು ಶಾಶ್ವತ ಕಟ್ಟಳೆಯಾಗಿರುವುದು. “ಈ ರೀತಿಯಾಗಿ ಆರೋನನನ್ನೂ ಅವನ ಪುತ್ರರನ್ನೂ ನೀನು ಪ್ರತಿಷ್ಠೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕ ಸೇವೆಗೆ ಸೇರಿಸು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತ ನಿಯಮವಾಗಿ ಪ್ರಾಪ್ತಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಸುತ್ತಿಸಬೇಕು. ಆ ಹೊತ್ತಿನಿಂದ ಯಾಜಕತ್ವವು ಶಾಶ್ವತವಾದ ನಿಯಮದಿಂದ ಅವರಿಗೆ ಉಂಟಾಗುವದು. ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕೋದ್ಯೋಗಕ್ಕೆ ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ಅವರ ಸೊಂಟಗಳಿಗೆ ನಡುಕಟ್ಟುಗಳನ್ನು ಸುತ್ತಿಸು. ಅಂದಿನಿಂದ ಅವರು ಯಾಜಕರಾಗಿರುವರು. ವಿಶೇಷವಾದ ಈ ಕಟ್ಟಳೆಯು ಶಾಶ್ವತವಾಗಿರುವುದರಿಂದ ಅವರು ಯಾಜಕರಾಗಿರುವರು. ಹೀಗೆ ಆರೋನನನ್ನೂ ಅವನ ಪುತ್ರರನ್ನೂ ನೀನು ಯಾಜಕರನ್ನಾಗಿ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:9
22 ತಿಳಿವುಗಳ ಹೋಲಿಕೆ  

ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.


ಏಕೆಂದರೆ ಅವರೂ, ಅವರ ಪುತ್ರರೂ ನಿತ್ಯವಾಗಿ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡುತ್ತಾ ನಿಂತಿರುವ ಹಾಗೆ ಅವರನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಗೋತ್ರಗಳೊಳಗಿಂದ ಆಯ್ದುಕೊಂಡಿದ್ದಾರೆ.


ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.


ದೇವರು ನಿನ್ನನ್ನೂ, ನಿನ್ನ ಸಂಗಡ ಲೇವಿಯ ಪುತ್ರರಾದ ನಿನ್ನ ಸಹೋದರರೆಲ್ಲರನ್ನೂ ತಮ್ಮ ಹತ್ತಿರ ಬರಮಾಡಿಕೊಂಡಿದ್ದಾರೆ. ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?


ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”


ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಗೊಳ್ಳುವುದಕ್ಕೆ ಏಳು ದಿವಸ ಹಿಡಿಯುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು.


ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ, ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವರನ್ನೂ ನೀನು ಅಭಿಷೇಕಿಸು. ಅವರ ಈ ಅಭಿಷೇಕದಿಂದ ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವುದು,” ಎಂದು ಹೇಳಿದರು.


ಯೇಸು ದೇವರಿಂದ ನೇಮಕಗೊಂಡು, ಮೆಲ್ಕಿಜೆದೇಕನ ಕ್ರಮದ ಪ್ರಕಾರ ಮಹಾಯಾಜಕರಾದರು.


ಆಗ ಮೋಶೆ ಆ ಲೇವಿಯರಿಗೆ, “ಈ ದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ, ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ, ನಿಮ್ಮನ್ನೇ ಯೆಹೋವ ದೇವರ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.


“ನನಗೆ ಯಾಜಕ ಸೇವೆ ಮಾಡುವುದಕ್ಕೆ ನೀನು ಇಸ್ರಾಯೇಲರಿಂದ ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಎಂಬುವರನ್ನು ನಿನ್ನ ಹತ್ತಿರ ಬರಮಾಡಬೇಕು.


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,


ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ, ಅವರ ನಡುಗಳನ್ನು ನಡುಕಟ್ಟುಗಳಿಂದ ಕಟ್ಟಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಹಾಕಿದನು.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಈ ಮೀಕ ಎಂಬವನಿಗೆ ದೇವರ ಮನೆ ಇದ್ದುದರಿಂದ ಅವನು ಒಂದು ಏಫೋದನ್ನೂ, ಪ್ರತಿಮೆಗಳನ್ನೂ ಮಾಡಿ, ತನ್ನ ಪುತ್ರರಲ್ಲಿ ಒಬ್ಬನನ್ನು ಯಾಜಕ ಸೇವೆಗೆ ಪ್ರತಿಷ್ಠೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು