Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:6 - ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದಲ್ಲದೆ ಆತನು - ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಂದಾಗ ಮೋಶೆ ದೇವರನ್ನು ನೋಡುವದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:6
42 ತಿಳಿವುಗಳ ಹೋಲಿಕೆ  

ಆದರೆ ಉರಿಯುವ ಪೊದೆಯ ಬಳಿ ಕರ್ತದೇವರು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು,’ ಎಂದು ತಿಳಿಸಿ ಸತ್ತವರು ಏಳುತ್ತಾರೆಂಬದನ್ನು ಮೋಶೆಗೆ ವ್ಯಕ್ತಪಡಿಸಿದ್ದಾರೆ.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು.


ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?


ಆಗ ಯೆಹೋವ ದೇವರು ಅವನಿಗೆ, “ಇದರಿಂದ ಆ ಜನರು ತಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗೂ ಯಾಕೋಬರ ದೇವರಾಗಿರುವ ಯೆಹೋವ ದೇವರು ನಿನಗೆ ಪ್ರಕಟವಾಗಿದ್ದು ನಿಜ ಎಂಬುದನ್ನು ನಂಬುವರು,” ಎಂದರು.


‘ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ, ಇಸಾಕನ, ಯಾಕೋಬನ ದೇವರು,’ ಎಂಬ ವಾಣಿಯನ್ನು ಕೇಳಿಸಿಕೊಂಡ ಮೋಶೆ ಭಯದಿಂದ ನಡುಗುತ್ತಾ ನೇರವಾಗಿ ದೃಷ್ಟಿಸಲು ಧೈರ್ಯಗೊಳ್ಳಲಿಲ್ಲ.


ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ


ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.


ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಂಡದ್ದರಿಂದ ನಿಶ್ಚಯವಾಗಿ ಸಾಯುವೆವು,” ಎಂದನು.


ಅವರು ನನ್ನ ಜನರಾಗಿರುವರು. ನಾನು ಅವರಿಗೆ ದೇವರಾಗಿರುವೆನು.


“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.


ದಾವೀದನು ಯೆಹೋವ ದೇವರಿಗೆ ಆಣೆ ಇಟ್ಟು, ಪರಾಕ್ರಮಿಯಾದ ಯಾಕೋಬನ ದೇವರಿಗೆ ಹೀಗೆಂದು ಪ್ರಮಾಣ ಮಾಡಿದನು:


ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದು ವಾಣಿ ಕೇಳಿಸಿತು.


ಇಸ್ರಾಯೇಲರ ಮಧ್ಯದಲ್ಲಿ ನಾನು ವಾಸಮಾಡಿ, ಅವರಿಗೆ ನಾನು ದೇವರಾಗಿರುವೆನು.


ಇದಲ್ಲದೆ ಯಾಕೋಬನು, “ನನ್ನ ತಂದೆ ಅಬ್ರಹಾಮನ ದೇವರೇ, ನನ್ನ ತಂದೆ ಇಸಾಕನ ದೇವರೇ, ನಿಮ್ಮ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ಆಗ ನಾನು ನಿನಗೆ ಒಳ್ಳೆಯದನ್ನು ಮಾಡುವೆನು ಎಂದು ನನಗೆ ಹೇಳಿದ ಯೆಹೋವ ದೇವರೇ,


ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.


ಆಗ ಅಬ್ರಾಮನು ಸಾಷ್ಟಾಂಗ ನಮಸ್ಕಾರಮಾಡಿದನು. ದೇವರು ಅವನ ಸಂಗಡ ಮಾತನಾಡಿದ್ದೇನೆಂದರೆ:


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ಯೆಹೋವ ದೇವರು ಅಬ್ರಾಮನಿಗೆ ಹೀಗೆ ಹೇಳಿದರು, “ನೀನು ನಿನ್ನ ಸ್ವದೇಶದಿಂದಲೂ ಬಂಧುಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರಬಂದು, ನಾನು ನಿನಗೆ ತೋರಿಸುವ ನಾಡಿಗೆ ಹೋಗು.


ಇದಲ್ಲದೆ ಆ ದೃಶ್ಯವು ಎಷ್ಟೋ ಭಯಂಕರವಾದದ್ದರಿಂದ ಮೋಶೆಯು, “ನಾನು ಭಯದಿಂದಲೂ ನಡುಕದಿಂದಲೂ ತುಂಬಿದವನಾಗಿದ್ದೇನೆ!” ಎಂದು ಹೇಳಿದನು.


ಈಜಿಪ್ಟಿನಲ್ಲಿ ನನ್ನ ಜನರ ದುರವಸ್ಥೆಯನ್ನು ನಾನು ಕಂಡಿದ್ದೇನೆ. ಅವರ ನರಳಾಟವನ್ನು ಕೇಳಿಸಿಕೊಂಡಿದ್ದೇನೆ. ಅವರನ್ನು ಬಿಡುಗಡೆ ಮಾಡಲು ನಾನಿಳಿದು ಬಂದಿದ್ದೇನೆ. ಇಲ್ಲಿ ಬಾ, ನಾನು ನಿನ್ನನ್ನು ಹಿಂದಿರುಗಿ ಈಜಿಪ್ಟಿಗೆ ಕಳುಹಿಸುತ್ತೇನೆ,’ ಎಂದರು.


ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.


ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.


ನಾನು ಅವರನ್ನು ತರುವೆನು. ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು. ನಾನು ಅವರಿಗೆ ನಂಬಿಗಸ್ತನೂ, ನೀತಿವಂತನೂ ಆದ ದೇವರಾಗಿರುವೆನು.”


ಆಗ ಅವರು ನನ್ನ ನಿಯಮಗಳನ್ನು ಕೈಗೊಂಡು ಜಾಗರೂಕತೆಯಿಂದ ಪಾಲಿಸುವರು. ನನ್ನ ನಿಯಮಗಳನ್ನು ಕೈಗೊಳ್ಳುವರು. ಅವರು ನನ್ನ ಜನರಾಗುವರು, ನಾನು ಅವರ ದೇವರಾಗುವೆನು.


“ಇದಲ್ಲದೆ ಈಜಿಪ್ಟಿನಲ್ಲಿ ನಮ್ಮ ಪಿತೃಗಳ ದೀನಸ್ಥಿತಿಯನ್ನು ನೋಡಿದಿರಿ. ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿರಿ.


ಅವರು ಪ್ರತಿದಿನ ಅವನಿಗೆ ಹೇಳಿದರೂ ಅವನು ಅವರ ಮಾತಿಗೆ ಕಿವಿಗೊಡಲಿಲ್ಲ. ತಾನು ಯೆಹೂದ್ಯನೆಂದು ಅವರಿಗೆ ಹೇಳಿಕೊಳ್ಳುತ್ತಿದ್ದ ಮೊರ್ದೆಕೈಯ ನಡವಳಿಕೆಯನ್ನು ಸಹಿಸಬಹುದೋ ಎಂದು ಕಾಣಲು ಅವರು ಹಾಮಾನನಿಗೆ ದೂರು ಹೇಳಿದರು.


ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.


ಆಗ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರೇ, ಈ ಹೊತ್ತು ನನಗೆ ಅನುಕೂಲವನ್ನು ಉಂಟುಮಾಡಿ, ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸಿರಿ.


“ನೀನು ಹೋಗಿ ಇಸ್ರಾಯೇಲ್ ಹಿರಿಯರನ್ನು ಕೂಡಿಸಿ ಅವರಿಗೆ, ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನಗೆ ಕಾಣಿಸಿಕೊಂಡು ಹೀಗೆಂದಿದ್ದಾರೆ: ನಾನು ನಿಮ್ಮನ್ನೂ ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲವನ್ನೂ ನಿಶ್ಚಯವಾಗಿ ನೋಡಿದ್ದೇನೆ.


“ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.


ಅವನು ಭಯಪಟ್ಟು, “ಈ ಸ್ಥಳವು ಎಷ್ಟೋ ಗಂಭೀರವಾದದ್ದು, ಇದು ದೇವರ ಮನೆಯೇ ಹೊರತು ಬೇರೆಯಲ್ಲ. ಇದೇ ಪರಲೋಕದ ಬಾಗಿಲು,” ಎಂದನು.


ಮತ್ತೆ ದೇವರು ಮೋಶೆಗೆ, “ನೀನು ನನ್ನ ಮುಖವನ್ನು ನೋಡಲಾರಿ. ಏಕೆಂದರೆ ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕಿರಲಾರನು,” ಎಂದರು.


ಹೀಗಿರುವುದರಿಂದ ಓ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ವಿಧೇಯರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು