Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:10 - ಕನ್ನಡ ಸಮಕಾಲಿಕ ಅನುವಾದ

10 ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೆ ಒಂದು ಸಾರಿ ಪಾಪ ಪರಿಹಾರದ ಬಲಿಯ ರಕ್ತದಿಂದ ಅದರ ಕೊಂಬುಗಳಿಗೆ ಹಚ್ಚಿ ಪ್ರಾಯಶ್ಚಿತ್ತ ಮಾಡಬೇಕು. ಅದು ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆರೋನನೂ ಅವನ ಸಂತತಿಯವರೂ ವರುಷಕ್ಕೊಮ್ಮೆ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷ ಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿಪರಿಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:10
18 ತಿಳಿವುಗಳ ಹೋಲಿಕೆ  

“ಅವನು ಯೆಹೋವ ದೇವರ ಎದುರಿನಲ್ಲಿರುವ ಬಲಿಪೀಠದ ಬಳಿಗೆ ಬಂದು, ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಹೋರಿಯ ರಕ್ತವನ್ನೂ, ಹೋತದ ರಕ್ತವನ್ನೂ ತೆಗೆದುಕೊಂಡು ಬಲಿಪೀಠದ ಸುತ್ತಲೂ ಇರುವ ಕೊಂಬುಗಳಿಗೆ ಹಚ್ಚಬೇಕು.


ಇದಲ್ಲದೆ ಮಹಾಯಾಜಕನು ಪ್ರತಿವರ್ಷವೂ ತನ್ನ ಸ್ವಂತದ್ದಾಗಿರದ ರಕ್ತವನ್ನು ತೆಗದುಕೊಂಡು ಅತಿ ಪವಿತ್ರ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಯೇಸು ತಮ್ಮನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಪ್ರವೇಶಿಸಲಿಲ್ಲ.


“ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿರುವುದು. ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವುದು. ನೀವು ಉಪವಾಸ ಮಾಡಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು.


ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಆರನೆಯ ದೇವದೂತನು ತನ್ನ ತುತೂರಿಯನ್ನು ಊದಲು, ದೇವರ ಮುಂದೆ ಇರುವ ಚಿನ್ನದ ಬಲಿಪೀಠದ ನಾಲ್ಕು ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.


ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ, ದಹನಬಲಿಗಳನ್ನಾಗಲಿ, ಧಾನ್ಯಗಳ ಅರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.


ಆಗ ಯೆಹೋವ ದೇವರು ಪ್ರಕಟಪಡಿಸಿ ಮೋಶೆಗೆ,


ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.


ಇಸ್ರಾಯೇಲರ ಅಶುದ್ಧತ್ವದ ನಿಮಿತ್ತವಾಗಿಯೂ, ಎಲ್ಲಾ ಅಪರಾಧಗಳಿಗಾಗಿಯೂ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಅವರು ಅಶುದ್ಧತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ದೇವದರ್ಶನದ ಗುಡಾರಕ್ಕೂ ಅದರಂತೆಯೇ ಮಾಡಬೇಕು.


ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು.


ಆದರೆ ಆರೋನನೂ, ಅವನ ಪುತ್ರರೂ ದಹನಬಲಿಯ ಪೀಠದ ಮೇಲೆಯೂ, ಧೂಪವನ್ನು ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಳದ ಸಮಸ್ತ ಕಾರ್ಯಕ್ಕೂ, ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ನೇಮಕವಾಗಿದ್ದರು.


ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು