Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:12 - ಕನ್ನಡ ಸಮಕಾಲಿಕ ಅನುವಾದ

12 “ನೀನು ಇಸ್ರಾಯೇಲರನ್ನು ಎಣಿಸಲು ಜನಗಣತಿಯನ್ನು ತೆಗೆದುಕೊಂಡಾಗ ಪ್ರತಿಯೊಬ್ಬನು ತನ್ನ ಜೀವನದ ವಿಮೋಚನೆಯ ಕ್ರಯವನ್ನು ಯೆಹೋವ ದೇವರಿಗೆ ಕೊಡಬೇಕು. ಈ ರೀತಿ ಮಾಡಿದಲ್ಲಿ ಅವರನ್ನು ಎಣಿಸುವಾಗ ಅವರಲ್ಲಿ ವ್ಯಾಧಿ ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನೀನು ಇಸ್ರಯೇಲರ ಜನಗಣತಿ ಮಾಡುವಾಗ ಲೆಕ್ಕಿಸಬೇಕಾದ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಸರ್ವೇಶ್ವರನಾದ ನನಗೆ ತೆರಿಗೆಯನ್ನು ಕೊಡಬೇಕು. ಆಗ ಅವರಿಗೆ ಯಾವ ವಿಪತ್ತು ಸಂಭವಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ಖಾನೇಷುಮಾರಿಯಾಗತಕ್ಕ ಇಸ್ರಾಯೇಲ್ಯರನ್ನು ಲೆಕ್ಕಿಸುವಾಗ ಅವರೊಳಗೆ ವ್ಯಾಧಿಸಂಭವಿಸದಂತೆ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಯೆಹೋವನಿಗೆ ಕಪ್ಪವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಇಸ್ರೇಲರನ್ನು ಲೆಕ್ಕಿಸು. ಹೀಗಾಗಿ ಎಷ್ಟು ಮಂದಿ ಜನರಿರುತ್ತಾರೆಂದು ನೀನು ತಿಳಿದುಕೊಳ್ಳುವೆ. ಪ್ರತಿಸಾರಿ ಇದನ್ನು ಮಾಡಿದಾಗ, ಪ್ರತಿಯೊಬ್ಬನು ತನಗೋಸ್ಕರವಾಗಿ ಯೆಹೋವನಿಗೆ ತೆರಿಗೆಯನ್ನು ಕೊಡಬೇಕು. ಆಗ ಜನರಿಗೆ ಯಾವ ಕೇಡುಗಳೂ ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:12
21 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವ ದೇವರ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ವಸ್ತುಗಳಾದ ಸರಪಣಿಗಳನ್ನೂ, ಕಡಗಗಳನ್ನೂ, ಉಂಗುರಗಳನ್ನೂ, ವಾಲೆಗಳನ್ನೂ, ಪದಕಗಳನ್ನೂ ಯೆಹೋವ ದೇವರಿಗೆ ಕಾಣಿಕೆಯಾಗಿ ತಂದಿದ್ದೇವೆ,” ಎಂದು ಹೇಳಿದರು.


ಚೆರೂಯಳ ಮಗ ಯೋವಾಬನು ಎಣಿಸಲು ಆರಂಭಿಸಿದನು. ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ಕೋಪಾಗ್ನಿಯು ಬಂದದ್ದರಿಂದ, ಅವನು ಪೂರ್ತಿಗೊಳಿಸಲಿಲ್ಲ. ಆ ಲೆಕ್ಕವು ಅರಸನಾದ ದಾವೀದನ ಇತಿಹಾಸಗಳ ಪುಸ್ತಕದಲ್ಲಿ ಲಿಖಿತವಾಗಲಿಲ್ಲ.


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


ಯಾರೂ ಇನ್ನೊಬ್ಬರ ಜೀವವನ್ನು ವಿಮೋಚಿಸಲಾರರು; ಅಥವಾ ಇತರರಿಗಾಗಿ ಯಾರೂ ದೇವರಿಗೆ ಈಡು ಕೊಡಲಾರರು.


ಯೇಸು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು. ಇದೇ ಸೂಕ್ತ ಸಮಯದಲ್ಲಿ ನೀಡಬೇಕಾದ ಸಾಕ್ಷಿಯಾಗಿದೆ.


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು; ದೊಡ್ಡ ಲಂಚತನವು ನಿನ್ನನ್ನು ವಂಚಿಸಬಾರದು.


ಆ ಮಧ್ಯಸ್ಥನು ಅವನನ್ನು ಕರುಣಿಸಿ ದೇವರಿಗೆ, ‘ಅಧೋಲೋಕವೆಂಬ ಕುಣಿಗೆ ಇಳಿಯುವುದರಿಂದ ಇವನನ್ನು ಕಾಪಾಡಿರಿ; ನಾನು ಇವನಿಗಾಗಿ ವಿಮೋಚನೆಯ ಕ್ರಯವನ್ನು ಕಂಡುಹಿಡಿದಿದ್ದೇನೆ.


ಅರಸನು ಮುಖ್ಯಯಾಜಕನಾದ ಯೆಹೋಯಾದಾವನನ್ನು ಕರೆಕಳುಹಿಸಿ ಅವನಿಗೆ, “ಯೆಹೋವ ದೇವರ ಸೇವಕನಾದ ಮೋಶೆಯೂ, ಇಸ್ರಾಯೇಲಿನ ಸಭೆಯೂ ದೇವದರ್ಶನ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆಯನ್ನು ಯೆಹೂದದಿಂದಲೂ, ಯೆರೂಸಲೇಮಿನಿಂದಲೂ ಬರುವಂತೆ ಮಾಡಲು ನೀನು ಲೇವಿಯರನ್ನು ಏಕೆ ವಿಚಾರಿಸಲಿಲ್ಲ?” ಎಂದನು.


ಆದಕಾರಣ ಯೆಹೋವ ದೇವರು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳವರೆಗೆ ನಿನ್ನ ಶತ್ರುಗಳ ಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಯೆಹೋವ ದೇವರ ದೂತನು ಇಸ್ರಾಯೇಲಿನ ಸಮಸ್ತ ಪ್ರಾಂತಗಳಲ್ಲಿ ಯೆಹೋವ ದೇವರ ಖಡ್ಗದಿಂದ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ನೀನು ಆರಿಸಿಕೋ. ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.


ಆಗ ಯೆಹೋವ ದೇವರು ಪ್ರಕಟಪಡಿಸಿ ಮೋಶೆಗೆ,


ಮೋಶೆಗೆ ಅವರು, “ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಭಟರ ಲೆಕ್ಕವನ್ನು ತೆಗೆದುಕೊಂಡೆವು. ಅವರೊಳಗೆ ಒಬ್ಬನಾದರೂ ಕಡಿಮೆಯಾಗಲಿಲ್ಲ.


ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.


ಆಗ ಯೋವಾಬನು, “ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ. ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರೂ ನನ್ನ ಒಡೆಯನ ಸೇವಕರಲ್ಲವೋ, ನನ್ನ ಒಡೆಯನು ಈ ಕಾರ್ಯವನ್ನು ಅಪೇಕ್ಷಿಸುವುದು ಏಕೆ? ಇದು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವುದು,” ಎಂದನು.


ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಇಸ್ರಾಯೇಲರಿಗೆ ಆಜ್ಞಾಪಿಸಿದ ತೆರಿಗೆಯನ್ನು ಯೆಹೋವ ದೇವರಿಗೆ ತರಬೇಕೆಂದು ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು