Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:15 - ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಜೀವನದ ಪ್ರಾಯಶ್ಚಿತ್ತಕ್ಕೆ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವುದರಲ್ಲಿ ಐಶ್ವರ್ಯವಂತರು ಅರ್ಧ ಶೇಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪ್ರಾಣರಕ್ಷಣೆಯ ಈ ತೆರಿಗೆಯನ್ನು ನನಗೆ ಕೊಡುವವರಲ್ಲಿ ಐಶ್ವರ್ಯವಂತರು ಅರ್ಧನಾಣ್ಯಕ್ಕಿಂತ ಹೆಚ್ಚು ಕೊಡಬಾರದು; ಬಡವರು ಕಮ್ಮಿ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಪ್ರಾಣರಕ್ಷಣೆಯ ಕಪ್ಪವನ್ನು ಯೆಹೋವನಿಗೆ ಕೊಡುವದರಲ್ಲಿ ಐಶ್ವರ್ಯವಂತರು ಅರ್ಧ ರೂಪಾಯಿಗಿಂತ ಹೆಚ್ಚು ಕೊಡಬಾರದು, ಬಡವರು ಕಮ್ಮಿಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಐಶ್ವರ್ಯವಂತರು ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು; ಬಡವರು ಅರ್ಧಶೆಕೆಲಿಗಿಂತ ಕಡಿಮೆ ಕೊಡಬಾರದು. ಜನರೆಲ್ಲರೂ ಈ ಕಾಣಿಕೆಯನ್ನು ಯೆಹೋವನಿಗೆ ಅರ್ಪಿಸಬೇಕು. ಇದು ನಿಮ್ಮ ಪ್ರಾಣರಕ್ಷಣೆಯ ತೆರಿಗೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:15
12 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವ ದೇವರ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ವಸ್ತುಗಳಾದ ಸರಪಣಿಗಳನ್ನೂ, ಕಡಗಗಳನ್ನೂ, ಉಂಗುರಗಳನ್ನೂ, ವಾಲೆಗಳನ್ನೂ, ಪದಕಗಳನ್ನೂ ಯೆಹೋವ ದೇವರಿಗೆ ಕಾಣಿಕೆಯಾಗಿ ತಂದಿದ್ದೇವೆ,” ಎಂದು ಹೇಳಿದರು.


ಯಜಮಾನರೇ, ನೀವು ಸಹ ನಿಮ್ಮ ಸೇವಕರೊಡನೆ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೆ ಯಜಮಾನನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿರಿ.


ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.


ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ.


“ನೀನು ಇಸ್ರಾಯೇಲರನ್ನು ಎಣಿಸಲು ಜನಗಣತಿಯನ್ನು ತೆಗೆದುಕೊಂಡಾಗ ಪ್ರತಿಯೊಬ್ಬನು ತನ್ನ ಜೀವನದ ವಿಮೋಚನೆಯ ಕ್ರಯವನ್ನು ಯೆಹೋವ ದೇವರಿಗೆ ಕೊಡಬೇಕು. ಈ ರೀತಿ ಮಾಡಿದಲ್ಲಿ ಅವರನ್ನು ಎಣಿಸುವಾಗ ಅವರಲ್ಲಿ ವ್ಯಾಧಿ ಉಂಟಾಗುವುದಿಲ್ಲ.


ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ದೇವರಲ್ಲಿ ಪಕ್ಷಪಾತವಿರುವುದಿಲ್ಲ.


ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ.


ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಮಾಡಬೇಕಾದದ್ದೇನು? ನೀವು ಯೆಹೋವ ದೇವರ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ, ನಾನು ಯಾವುದರಿಂದ ಪ್ರಾಯಶ್ಚಿತ್ತ ಮಾಡಲಿ,” ಎಂದು ಕೇಳಿದನು.


ಲೆಕ್ಕಿತರಾದವರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕೂ ಹೆಚ್ಚು ಪ್ರಾಯವುಳ್ಳವರೂ ಯೆಹೋವ ದೇವರಿಗೆ ಕಾಣಿಕೆಯನ್ನು ಕೊಡಬೇಕು.


ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಕೆಲಸಕ್ಕಾಗಿ ಪ್ರತ್ಯೇಕಿಸಬೇಕು. ಇದೇ ಯೆಹೋವ ದೇವರ ಮುಂದೆ ಇಸ್ರಾಯೇಲರಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಯಶ್ಚಿತ್ತಕ್ಕಾಗಿಯೂ ಇರುವುದು,” ಎಂದರು.


ಪರಿಶುದ್ಧಾಲಯದ ನಿಯಮದ ಮೇರೆಗೆ ಪ್ರತಿಯೊಬ್ಬ ಮನುಷ್ಯನಿಂದ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಕೊಟ್ಟವರ ಲೆಕ್ಕವನ್ನು ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲಿನ ಪ್ರಾಯದವರನ್ನು ಲೆಕ್ಕ ಮಾಡಲಾಗಿ ಅದು 6,03,550 ಗಂಡಸರ ಸಂಖ್ಯೆ ಇತ್ತು.


ದೇಶದಲ್ಲಿರುವ ಜನರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭುವಿಗಾಗಿ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು