Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:18 - ಕನ್ನಡ ಸಮಕಾಲಿಕ ಅನುವಾದ

18 “ತೊಳೆದುಕೊಳ್ಳುವದಕ್ಕಾಗಿ ಕಂಚಿನ ಬೋಗುಣಿಯನ್ನು ಮಾಡಿಸಿ ಅದಕ್ಕೆ ಕಂಚಿನ ಪೀಠವನ್ನೂ ಮಾಡಿಸಿ, ಅದನ್ನು ದೇವದರ್ಶನದ ಗುಡಾರ ಮತ್ತು ಬಲಿಪೀಠದ ಮಧ್ಯದಲ್ಲಿಟ್ಟು, ಅದರಲ್ಲಿ ನೀರನ್ನು ತುಂಬಿಸಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನು ಕಟ್ಟಿಸು. ಅದನ್ನು ಇಡಲು ಒಂದು ತಾಮ್ರದ ಪೀಠವನ್ನು ಮಾಡಿಸು. ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ಅದನ್ನಿಟ್ಟು ಅದರಲ್ಲಿ ನೀರನ್ನು ತುಂಬಿಸಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸ್ನಾನಕ್ಕೋಸ್ಕರ ಒಂದು ತಾಮ್ರದ ಗಂಗಾಳವನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ತಾಮ್ರದ ಗಂಗಾಳವನ್ನು ಮಾಡಿ ಅದನ್ನು ತಾಮ್ರದ ಪೀಠದ ಮೇಲಿಡು. ತೊಳೆದುಕೊಳ್ಳುವುದಕ್ಕೆ ನೀವು ಇದನ್ನು ಉಪಯೋಗಿಸುವಿರಿ. ಗಂಗಾಳವನ್ನು ದೇವದರ್ಶನಗುಡಾರ ಮತ್ತು ಯಜ್ಞವೇದಿಕೆಯ ನಡುವೆ ಇಡು. ಗಂಗಾಳದಲ್ಲಿ ನೀರನ್ನು ತುಂಬಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:18
15 ತಿಳಿವುಗಳ ಹೋಲಿಕೆ  

ನೀನು ದೇವದರ್ಶನದ ಗುಡಾರಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಗಂಗಾಳವನ್ನಿಟ್ಟು, ಅದರಲ್ಲಿ ನೀರನ್ನು ತುಂಬಿಸಬೇಕು.


ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಸೇವೆಮಾಡುತ್ತಿದ್ದ ಸ್ತ್ರೀಯರಿಂದ ಕೂಡಿಸಿದ ಕಂಚಿನ ದರ್ಪಣಗಳಿಂದ ಕಂಚಿನಿಂದ ಬೋಗುಣಿಯನ್ನು ಅದರ ಪೀಠವನ್ನೂ ಮಾಡಿದರು.


ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು; ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್; ಅದರ ಎತ್ತರ ಸುಮಾರು ಎರಡು ಮೀಟರ್; ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು;


ಹತ್ತು ಕಂಚಿನ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು 800 ಲೀಟರ್ ನೀರು ಹಿಡಿಯುತ್ತಿತ್ತು. ಒಂದೊಂದು ತೊಟ್ಟಿಯು 2 ಮೀಟರ್ ಇದ್ದವು. ಪ್ರತಿಯೊಂದು ಪೀಠಗಳ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.


ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್. ಅದರ ಎತ್ತರ ಸುಮಾರು ಎರಡು ಮೀಟರ್. ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ, ಅವುಗಳಲ್ಲಿ ತೊಳೆಯುವ ನಿಮಿತ್ತವಾಗಿ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿದನು. ದಹನಬಲಿಗೋಸ್ಕರ ಅರ್ಪಿಸುವವುಗಳನ್ನು ಅವುಗಳಲ್ಲಿ ತೊಳೆಯುತ್ತಿದ್ದರು. ಆದರೆ ಆ ಕೊಳವು ಯಾಜಕರು ತೊಳೆದುಕೊಳ್ಳುವುದಕ್ಕೆ ಇತ್ತು.


ಅವನು ಅದರಿಂದ ಬಲಿಪೀಠದ ಮೇಲೆ ಏಳು ಸಾರಿ ಚಿಮುಕಿಸಿ, ಬಲಿಪೀಠವನ್ನೂ, ಅದರ ಎಲ್ಲಾ ಪಾತ್ರೆಗಳನ್ನೂ, ಗಂಗಾಳವನ್ನೂ, ಅದರ ಕಾಲನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.


ದಹನಬಲಿಪೀಠದ ಎಲ್ಲಾ ಉಪಕರಣಗಳು, ಗಂಗಾಳ, ಅದರ ಕಾಲು,


ದೇವರ ಆಲಯಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂರ್ಖರು ಅರ್ಪಿಸುವ ಯಜ್ಞಕ್ಕಿಂತ, ದೇವರ ಸಮೀಪವಾಗಿದ್ದು ಅವರಿಗೆ ಕಿವಿಗೊಟ್ಟು ಆಲಿಸುವುದು ಲೇಸು. ತಾವು ತಪ್ಪು ಮಾಡುತ್ತಿದ್ದಾರೆಂದು ಮೂಢರಿಗೆ ತಿಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು