Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:20 - ಕನ್ನಡ ಸಮಕಾಲಿಕ ಅನುವಾದ

20 ಅವರು ದೇವದರ್ಶನದ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆ ಮಾಡುವುದಕ್ಕೂ, ಬೆಂಕಿಯಿಂದ ಯೆಹೋವ ದೇವರಿಗೆ ದಹನಬಲಿಯನ್ನು ಅರ್ಪಿಸುವುದಕ್ಕೂ ಬಲಿಪೀಠದ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರು ದೇವದರ್ಶನದ ಗುಡಾರಕ್ಕೆ ಹೋಗುವಾಗಲೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು. ತೊಳೆಯದೆ ಹೋದರೆ ಸಾಯುವರು. ಹಾಗೆಯೇ ಅವರು ದೇವರ ಸೇವೆಗೈಯುವವರಾಗಿ ಸರ್ವೇಶ್ವರನಾದ ನನಗೆ ದಹನ ಬಲಿಯರ್ಪಿಸಲು ಬಲಿಪೀಠದ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು; ತೊಳೆಯದೆ ಹೋದರೆ ಸತ್ತಾರು. ಹಾಗೆಯೇ ಅವರು ದೇವರ ಸೇವೆಯನ್ನು ನಡಿಸುವವರಾಗಿ ಯೆಹೋವನಿಗೆ ಹೋಮಸಮರ್ಪಣೆಗಾಗಿ ಯಜ್ಞವೇದಿಯ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪ್ರತಿಸಾರಿ ದೇವದರ್ಶನಗುಡಾರಕ್ಕೆ ಪ್ರವೇಶಿಸುವಾಗ ಅಥವಾ ಯೆಹೋವನಿಗಾಗಿ ಸರ್ವಾಂಗಹೋಮಗಳನ್ನು ಅರ್ಪಿಸಲು ಯಜ್ಞವೇದಿಕೆಯ ಹತ್ತಿರಕ್ಕೆ ಬರುವಾಗ ಅವರು ನೀರಿನಿಂದ ತೊಳೆದುಕೊಳ್ಳಬೇಕು. ಆಗ ಅವರು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:20
14 ತಿಳಿವುಗಳ ಹೋಲಿಕೆ  

ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು.


ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು.


ಉಜ್ಜನು ಮಂಜೂಷದ ಮೇಲೆ ಕೈ ಹಾಕಿದ್ದರಿಂದ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸಿದರು. ಅವನು ಅಲ್ಲಿಯೇ ದೇವರ ಮುಂದೆ ಮರಣಹೊಂದಿದನು.


ಬೇತ್ ಷೆಮೆಷ್ ಊರಿನ ಜನರು ಯೆಹೋವ ದೇವರ ಮಂಜೂಷದೊಳಗೆ ಇಣಿಕಿ ನೋಡಿದ್ದರಿಂದ, ಯೆಹೋವ ದೇವರು ಅವರೊಳಗೆ ಎಪ್ಪತ್ತು ಮಂದಿಯನ್ನು ಕಠಿಣವಾಗಿ ದಂಡಿಸಿದರು.


ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.


ಆ ಕ್ಷಣದಲ್ಲಿಯೇ ಆಕೆ ಅವನ ಪಾದಗಳ ಬಳಿಯಲ್ಲಿ ಬಿದ್ದು ಸತ್ತುಹೋದಳು. ಆಗ ಯುವಕರು ಒಳಗೆ ಬಂದು ಆಕೆ ಸತ್ತು ಹೋಗಿರುವುದನ್ನು ಕಂಡು, ಆಕೆಯ ಶವವನ್ನು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿಯೇ ಸಮಾಧಿಮಾಡಿದರು.


ಏಕೆಂದರೆ ಆರೋನನೂ ಅವನ ಪುತ್ರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.


ಅವರು ಸಾಯದ ಹಾಗೆ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು,” ಎಂದರು.


ಮೋಶೆಯೂ, ಆರೋನನೂ, ಅವನ ಪುತ್ರರೂ ಅದರಲ್ಲಿ ಕೈಕಾಲುಗಳನ್ನು ತೊಳೆದುಕೊಂಡರು.


ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಬಂದು, ಸ್ನಾನಮಾಡಿಸಿ,


ಅವನು ಪರಿಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟುಕೊಂಡು, ತನ್ನ ಶರೀರದ ಮೇಲೆ ನಾರುಬಟ್ಟೆಯ ಒಳಉಡುಪನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು, ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು. ಆದಕಾರಣ ಅವನು ನೀರಿನಿಂದ ಸ್ನಾನಮಾಡಿ ಅವುಗಳನ್ನು ಧರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು