Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:34 - ಕನ್ನಡ ಸಮಕಾಲಿಕ ಅನುವಾದ

34 ಯೆಹೋವ ದೇವರು ಮೋಶೆಗೆ, “ನೀನು ಹಾಲು ಮಡ್ಡಿ, ಗುಗ್ಗಲ ಹಾಗೂ ಗಂಧದ ಚಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಮ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸರ್ವೇಶ್ವರ ಮೋಶೆಗೆ ಮತ್ತೆ ಆಜ್ಞಾಪಿಸಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ ಹಾಗು ಗಂಧದಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಮತ್ತು ಸ್ವಚ್ಚವಾದ ಧೂಪವನ್ನು ಸಮಭಾಗವಾಗಿ ತೆಗೆದುಕೊಂಡು ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ - ನೀನು ಹಾಲು ಮಡ್ಡಿ, ಗುಗ್ಗುಲ, ಗಂಧದ ಚೆಕ್ಕೆ ಎಂಬ ಪರಿಮಳದ್ರವ್ಯಗಳನ್ನೂ ಸ್ವಚ್ಫವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ, ಗಂಧದ ಚೆಕ್ಕೆ ಎಂಬ ಸುಗಂಧ ದ್ರವ್ಯಗಳನ್ನು ಸಮವಾಗಿ ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:34
20 ತಿಳಿವುಗಳ ಹೋಲಿಕೆ  

ಅನಂತರ ಅವರು ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮತ್ತು ಪರಿಮಳ ದ್ರವ್ಯದಿಂದ ಶುದ್ಧವಾದ ಧೂಪವನ್ನು ತಯಾರಿಸಿದರು.


ನೀನು ಅದರ ಮೇಲೆ ಎಣ್ಣೆಯನ್ನು ಸಾಂಬ್ರಾಣಿಯನ್ನು ಹಾಕು. ಇದೇ ಧಾನ್ಯ ಸಮರ್ಪಣೆ.


“ಉತ್ತಮವಾದ ತೈಲಗಳನ್ನು ಆರು ಕಿಲೋಗ್ರಾಂ ಸ್ವಚ್ಛವಾದ ರಕ್ತಬೋಳವು, ಇದರ ಅರ್ಧದಷ್ಟು ಮೂರು ಕಿಲೋಗ್ರಾಂ ಸುಗಂಧವಾದ ಲವಂಗಚಕ್ಕೆಯನ್ನು ಮತ್ತು ಮೂರು ಕಿಲೋಗ್ರಾಂ ಸುಗಂಧವಾದ ಬಜೆಯನ್ನು,


ದೀಪಕ್ಕಾಗಿ ಓಲಿವ್ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳು,


ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು ಕಾಣಿಕೆಯಾಗಿ ಸಮರ್ಪಿಸಿದರು.


ರಕ್ತಬೋಳ, ಸಾಂಬ್ರಾಣಿಗಳಿಂದಲೂ ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು?


ಲೇವಿಯರಿಗೂ, ಹಾಡುಗಾರರಿಗೂ, ದ್ವಾರಪಾಲಕರಿಗೂ ನೇಮಕವಾದ ಕಾಣಿಕೆಗಳನ್ನೂ, ಧೂಪವನ್ನೂ, ಸಾಮಗ್ರಿಗಳನ್ನೂ, ಧಾನ್ಯದ ಹತ್ತನೆಯ ಪಾಲುಗಳನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇಡುತ್ತಿದ್ದ ದೊಡ್ಡ ಕೊಠಡಿಯನ್ನು ಎಲ್ಯಾಷೀಬನು ಟೋಬೀಯನಿಗೋಸ್ಕರ ಸಿದ್ಧ ಮಾಡಿಕೊಟ್ಟಿದ್ದನು.


ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.


“ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.


“ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.


ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು.


ಅದನ್ನು ಸುಗಂಧ ತೈಲ ಮಾಡುವವರ ವಿದ್ಯೆಯ ಪ್ರಕಾರ ಬೆರಸಿ, ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡಬೇಕು.


ಅಭಿಷೇಕಿಸುವ ತೈಲ, ಪರಿಶುದ್ಧ ಸ್ಥಳಕ್ಕೋಸ್ಕರವಿರುವ ಪರಿಮಳ ಧೂಪ. “ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು,” ಎಂದರು.


ಧೂಪವೇದಿಯನ್ನು, ಅದರ ಕೋಲುಗಳನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,


ಅವನು ಯೆಹೋವ ದೇವರ ಸನ್ನಿಧಿಯಲ್ಲಿರುವ ಬಲಿಪೀಠದಿಂದ ಬೆಂಕಿಯ ಕೆಂಡಗಳನ್ನು ಧೂಪ ಸುಡುವ ಪಾತ್ರೆಯಲ್ಲಿ ತುಂಬಿಸಿ, ತನ್ನ ಎರಡು ಕೈತುಂಬ ಪರಿಮಳ ಧೂಪದ್ರವ್ಯದ ಚೂರ್ಣವನ್ನು ತೆಗೆದುಕೊಂಡು, ತೆರೆಯನ್ನು ದಾಟಿ ತರಬೇಕು.


“ಯಾಜಕನಾದ ಆರೋನನ ಮಗ ಎಲಿಯಾಜರನ ಕೆಲಸ ಯಾವುದೆಂದರೆ, ದೀಪದ ಎಣ್ಣೆಯೂ, ಸುಗಂಧ ಧೂಪವೂ, ನಿತ್ಯದ ಧಾನ್ಯ ಸಮರ್ಪಣೆಯೂ, ಅಭಿಷೇಕದ ತೈಲವೂ, ಸಮಸ್ತ ಗುಡಾರವೂ, ಅದರಲ್ಲಿರುವ ಸಕಲವೂ, ಪರಿಶುದ್ಧ ಸ್ಥಳದಲ್ಲಿರುವ ಅದರ ಸಾಮಗ್ರಿಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”


ನಿನ್ನ ದಹನಬಲಿಯ ಎಳೆಯ ಕುರಿಗಳನ್ನು ನನಗೆ ತರಲಿಲ್ಲ. ನಿನ್ನ ಯಜ್ಞಗಳಿಂದ ನನ್ನನ್ನು ಸನ್ಮಾನಿಸಲಿಲ್ಲ. ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.


“ಅದರ ಮೇಲೆ ಆರೋನನು ಪರಿಮಳ ಧೂಪವನ್ನು ಸುಡಬೇಕು. ಪ್ರತಿದಿನ ಬೆಳಿಗ್ಗೆ ಸುಡಬೇಕು. ಪ್ರತಿದಿನ ಬೆಳಿಗ್ಗೆ ದೀಪಗಳನ್ನು ಸಿದ್ಧಮಾಡುವಾಗ ಅದನ್ನು ಸುಡಬೇಕು.


ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು