Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:6 - ಕನ್ನಡ ಸಮಕಾಲಿಕ ಅನುವಾದ

6 ಅದನ್ನು ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾಸನದ ಮುಂದೆಯೂ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಜ್ಞಾಶಾಸನಗಳಿರುವ ಮಂಜೂಷದ ಮುಂದೆ ಇರುವ ತೆರೆಗೆ ಎದುರಾಗಿ ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಹಾಗು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಜ್ಞಾಶಾಸನಗಳ ಮಂಜೂಷದ ಮುಂದಣ ತೆರೆಗೆ ಎದುರಾಗಿ, ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ವಿಶೇಷ ಪರದೆಯ (ಒಡಂಬಡಿಕೆಯ ಪೆಟ್ಟಿಗೆಯನ್ನು ಆವರಿಸಿಕೊಂಡಿರುವ) ಮುಂಭಾಗದಲ್ಲಿ ಧೂಪವೇದಿಕೆಯನ್ನು ಇಡು. ಧೂಪವೇದಿಕೆಯು ಒಡಂಬಡಿಕೆ ಪೆಟ್ಟಿಗೆಯ ಕೃಪಾಸನದ ಮುಂಭಾಗದಲ್ಲಿರುವುದು. ಇದು ನಾನು ನಿನ್ನನ್ನು ಸಂಧಿಸುವ ಸ್ಥಳವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:6
16 ತಿಳಿವುಗಳ ಹೋಲಿಕೆ  

ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.


ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು.


ಆಗ ದಾವೀದನು ತನ್ನ ಮಗ ಸೊಲೊಮೋನನಿಗೆ, “ದ್ವಾರಾಂಗಳದ ಮಾದರಿಯನ್ನೂ, ಅದರ ಮನೆಗಳು, ಅದರ ಉಗ್ರಾಣಗಳು, ಅದರ ಮೇಲಿನ ಕೊಠಡಿಗಳು, ಅದರ ಅಂತರಂಗದ ಕೊಠಡಿಗಳು, ಕರುಣಾಸನದ ಸ್ಥಾನವು,


ಅವುಗಳನ್ನು ದೇವದರ್ಶನ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಒಡಂಬಡಿಕೆಯ ಮಂಜೂಷದ ಮುಂದೆ ಇಡಬೇಕು.


ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕರುಣಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಯೆಹೋವ ದೇವರ ಎದುರಿನಲ್ಲಿ ಬೆಂಕಿಯ ಮೇಲೆ ಹಾಕಬೇಕು.


ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ಪರದೆಯ ಮುಂದೆ ಇಟ್ಟನು.


ನೀನು ಮಾಡಿದ ಚಿನ್ನದ ಧೂಪಪೀಠವನ್ನು ಒಡಂಬಡಿಕೆಯ ಮಂಜೂಷದ ಎದುರಾಗಿ ಇಟ್ಟು, ದೇವದರ್ಶನದ ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಬೇಕು.


ಒಡಂಬಡಿಕೆಯ ಮಂಜೂಷವನ್ನು ಅದರಲ್ಲಿ ಇಟ್ಟು, ಅದನ್ನು ನೀನು ಪರದೆಯಿಂದ ಮುಚ್ಚಬೇಕು.


ಅದರಲ್ಲಿ ಸ್ವಲ್ಪ ಪುಡಿಮಾಡಿ, ದೇವದರ್ಶನದ ಗುಡಾರದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇಡು. ಅದು ನಿಮಗೆ ಮಹಾಪರಿಶುದ್ಧವಾಗಿರಲಿ.


ಆ ಕೋಲುಗಳನ್ನು ಜಾಲಿ ಮರದಿಂದ ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು.


“ಅದರ ಮೇಲೆ ಆರೋನನು ಪರಿಮಳ ಧೂಪವನ್ನು ಸುಡಬೇಕು. ಪ್ರತಿದಿನ ಬೆಳಿಗ್ಗೆ ಸುಡಬೇಕು. ಪ್ರತಿದಿನ ಬೆಳಿಗ್ಗೆ ದೀಪಗಳನ್ನು ಸಿದ್ಧಮಾಡುವಾಗ ಅದನ್ನು ಸುಡಬೇಕು.


ಅಮ್ರಾಮನ ಪುತ್ರರು: ಆರೋನ್ ಮತ್ತು ಮೋಶೆ; ಆರೋನನನ್ನು ಮತ್ತು ಅವನ ಪುತ್ರರನ್ನು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಶಾಶ್ವತವಾಗಿ ಪ್ರತ್ಯೇಕಿಸಲಾಯಿತು. ಇವರು ಯೆಹೋವ ದೇವರ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಅವರ ಸೇವೆ ಮಾಡುವವರೂ, ಅವರ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು