Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:7 - ಕನ್ನಡ ಸಮಕಾಲಿಕ ಅನುವಾದ

7 “ಅದರ ಮೇಲೆ ಆರೋನನು ಪರಿಮಳ ಧೂಪವನ್ನು ಸುಡಬೇಕು. ಪ್ರತಿದಿನ ಬೆಳಿಗ್ಗೆ ಸುಡಬೇಕು. ಪ್ರತಿದಿನ ಬೆಳಿಗ್ಗೆ ದೀಪಗಳನ್ನು ಸಿದ್ಧಮಾಡುವಾಗ ಅದನ್ನು ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆರೋನನು ಪ್ರತಿನಿತ್ಯವು ಬೆಳಿಗ್ಗೆ ದೀಪಗಳನ್ನು ಸರಿಪಡಿಸುವಾಗ ಹಾಗು ಸಂಜೆದೀಪಗಳನ್ನು ಹೊತ್ತಿಸುವಾಗ ಆ ವೇದಿಕೆಯ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆರೋನನು ಪ್ರತಿನಿತ್ಯವೂ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಆರೋನನು ಪ್ರತಿಮುಂಜಾನೆ ಧೂಪವೇದಿಕೆಯ ಮೇಲೆ ಸುಗಂಧದ್ರವ್ಯಗಳ ಧೂಪವನ್ನು ಉರಿಸಬೇಕು. ಅವನು ದೀಪಗಳನ್ನು ಸರಿಪಡಿಸಲು ಬರುವಾಗ ಇದನ್ನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:7
20 ತಿಳಿವುಗಳ ಹೋಲಿಕೆ  

ನನ್ನ ಬಲಿಪೀಠದ ಮೇಲೆ ಬಲಿಯನ್ನು ಅರ್ಪಿಸುವುದಕ್ಕೂ, ಧೂಪವನ್ನು ಸುಡುವುದಕ್ಕೂ, ನನ್ನ ಮುಂದೆ ಏಫೋದನ್ನು ಧರಿಸಿಕೊಂಡಿರುವುದಕ್ಕೂ, ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರಬೇಕೆಂದು ನಾನು ಅವನನ್ನು ಆಯ್ದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲರು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?


ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು.


ಅಮ್ರಾಮನ ಪುತ್ರರು: ಆರೋನ್ ಮತ್ತು ಮೋಶೆ; ಆರೋನನನ್ನು ಮತ್ತು ಅವನ ಪುತ್ರರನ್ನು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಶಾಶ್ವತವಾಗಿ ಪ್ರತ್ಯೇಕಿಸಲಾಯಿತು. ಇವರು ಯೆಹೋವ ದೇವರ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಅವರ ಸೇವೆ ಮಾಡುವವರೂ, ಅವರ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.


ನಾವಾದರೋ ಪ್ರಾರ್ಥನೆ ಮಾಡುವುದರಲ್ಲಿಯೂ ದೇವರ ವಾಕ್ಯ ಬೋಧಿಸುವುದರಲ್ಲಿಯೂ ನಿರತರಾಗಿರುವೆವು,” ಎಂದು ಹೇಳಿದರು.


ದೇವರ ಮಂಜೂಷವಿರುವ ಯೆಹೋವ ದೇವರ ಮಂದಿರದಲ್ಲಿ ದೇವರ ದೀಪವು ಆರಿಹೋಗುವುದಕ್ಕಿಂತ ಮುಂಚೆ ಸಮುಯೇಲನು ಮಲಗಿದ್ದನು.


ಯೆಹೋವ ದೇವರು ಮೋಶೆಗೆ, “ನೀನು ಹಾಲು ಮಡ್ಡಿ, ಗುಗ್ಗಲ ಹಾಗೂ ಗಂಧದ ಚಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಮ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.


ಅದನ್ನು ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾಸನದ ಮುಂದೆಯೂ ಇಡಬೇಕು.


ಆರೋನನು ಸಂಜೆ ದೀಪಗಳನ್ನು ಹಚ್ಚುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಯೆಹೋವ ದೇವರ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪವು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.


ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.


ಅವನನ್ನು ಎದುರಿಸಿ, “ಉಜ್ಜೀಯನೇ, ಯೆಹೋವ ದೇವರಿಗೆ ಧೂಪ ಸುಡುವುದು ಪ್ರತಿಷ್ಠಿತರಾದ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು. ನೀನು ಪರಿಶುದ್ಧ ಸ್ಥಳದಿಂದ ಹೊರಟು ಹೋಗು, ಅಪರಾಧ ಮಾಡಿದೆ. ದೇವರಾದ ಯೆಹೋವ ದೇವರಿಂದ ನಿನಗೆ ಗೌರವ ದೊರಕದು,” ಎಂದನು.


ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ, ಪಡೆದವುಗಳೆಲ್ಲವುಗಳನ್ನೂ ಕೂಡಿಸಿ, ಹಿಂದಕ್ಕೆ ಕೊಡಬೇಕು. ಪ್ರಾಯಶ್ಚಿತ್ತದ ಬಲಿ ಅರ್ಪಿಸುವ ದಿನದಲ್ಲಿ, ಅದರ ಯಜಮಾನನು ಯಾವನಾಗಿರುವನೋ, ಅವನಿಗೆ ಕೊಡಬೇಕು.


ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು.


ಅವನು ಎಲ್ಕಾನನ ಮಗನು, ಅವನು ಯೆರೋಹಾಮನ ಮಗನು, ಅವನು ಎಲೀಯೇಲನ ಮಗನು, ಅವನು ತೋಹನ ಮಗನು,


ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ, “ನೀನು ನನ್ನ ತಂದೆ ದಾವೀದನಿಗೆ ವಾಸವಾಗಿರುವ ಅರಮನೆಯನ್ನು ಕಟ್ಟಿಸಲು, ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ, ಹಾಗೆಯೇ ನನಗೂ ಮಾಡು.


ಇದಲ್ಲದೆ ಅವರು ದ್ವಾರಾಂಗಳದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ಆರಿಸಿ, ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿಸದೆ ಹೋದರು.


ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು