Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:21 - ಕನ್ನಡ ಸಮಕಾಲಿಕ ಅನುವಾದ

21 ಮೋಶೆಯು ಆರೋನನಿಗೆ, “ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಲ್ಲದೆ, ಆರೋನನನ್ನು ಉದ್ದೇಶಿಸಿ, “ನೀನು ಈ ಜನರಿಂದ ಮಹಾಪಾಪವನ್ನು ಮಾಡಿಸಿರುವೆ. ಹೀಗೆ ಮಾಡಿಸಲು ಇವರು ನಿನಗೇನು ಮಾಡಿದರು,” ಎಂದು ವಿಚಾರಿಸಿದನು. ಅದಕ್ಕೆ ಆರೋನನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಅವನು ಆರೋನನನ್ನು - ನೀನು ಈ ಜನರಿಂದ ಮಹಾಪರಾಧವನ್ನು ಮಾಡಿಸಿದಿಯಲ್ಲಾ; ಹೀಗೆ ಮಾಡಿಸುವದಕ್ಕೆ ಇವರು ನಿನಗೇನು ಮಾಡಿದರು ಎಂದು ವಿಚಾರಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮೋಶೆಯು ಆರೋನನಿಗೆ, “ಈ ಜನರು ನಿನಗೇನು ಮಾಡಿದರು? ಇಂಥಾ ಕೆಟ್ಟ ಪಾಪವನ್ನು ಮಾಡುವಂತೆ ಯಾಕೆ ಅವರನ್ನು ನಡಿಸಿದೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:21
11 ತಿಳಿವುಗಳ ಹೋಲಿಕೆ  

ಅಬೀಮೆಲೆಕನು ಅಬ್ರಹಾಮನನ್ನು ಕರೆದು ಅವನಿಗೆ, “ನೀನು ನಮಗೆ ಮಾಡಿದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಿನಗೆ ನಾನು ಏನು ಅಪರಾಧ ಮಾಡಿದ್ದೇನೆ? ನೀನು ನನಗೆ ಮಾಡಬಾರದ ಕೆಲಸಗಳನ್ನು ಮಾಡಿದ್ದೀಯೆ,” ಎಂದನು.


ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ, ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ, ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ, ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು, ಎಂದನು.’


ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.


ಆಗ ಅಬೀಮೆಲೆಕನು, “ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯನ್ನು ತೆಗೆದುಕೊಂಡಿದ್ದರೆ, ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ,” ಎಂದನು.


ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟು ಪುಡಿಯಾಗುವವರೆಗೆ ಅರೆದು ನೀರಿನ ಮೇಲೆ ಚೆಲ್ಲಿ, ಆ ನೀರನ್ನು ಇಸ್ರಾಯೇಲರು ಕುಡಿಯುವಂತೆ ಮಾಡಿದನು.


ಅದಕ್ಕೆ ಆರೋನನು, “ನನ್ನ ಒಡೆಯನೇ ಕೋಪಗೊಳ್ಳಬೇಡಿ ಈ ಜನರು ಕೆಡುಕಿನ ಮನಸ್ಸಿನವರಾಗಿದ್ದಾರೆಂದು ನೀವು ಬಲ್ಲಿರಿ.


ಆಗ ಸಮುಯೇಲನು ಅವನಿಗೆ, “ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು