Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:9 - ಕನ್ನಡ ಸಮಕಾಲಿಕ ಅನುವಾದ

9 ಮೋಶೆ ಗುಡಾರದೊಳಗೆ ಹೋಗುವಾಗ, ಮೇಘಸ್ತಂಭವು ಪ್ರವೇಶದ್ವಾರದ ಬಳಿಯಲ್ಲಿ ನಿಲ್ಲುತ್ತಿತ್ತು. ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆಯು ಆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋಶೆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವೊಂದು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು. ಆಗ ಮೋಶೆಯ ಸಂಗಡ ಸರ್ವೇಶ್ವರ ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಶೆ ಆ ಡೇರೆಯೊಳಕ್ಕೆ ಹೋದ ಕೂಡಲೆ ಮೇಘಸ್ತಂಭವು ಇಳಿದು ಆ ಡೇರೆಯ ಬಾಗಲಲ್ಲಿ ನಿಲ್ಲುತ್ತಿತ್ತು. ಆಗ ಯೆಹೋವನು ಮೋಶೆಯ ಸಂಗಡ ಮಾತಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೋಶೆಯು ಗುಡಾರದೊಳಕ್ಕೆ ಹೋದಾಗ ಎತ್ತರವಾದ ಮೇಘಸ್ತಂಭವು ಯಾವಾಗಲೂ ಕೆಳಗಿಳಿಯುತ್ತಿತ್ತು. ಆ ಮೇಘಸ್ತಂಭವು ಗುಡಾರದ ದ್ವಾರದಲ್ಲಿ ನಿಲ್ಲುತ್ತಿತ್ತು. ಹೀಗೆ ಯೆಹೋವನು ಮೋಶೆಯೊಡನೆ ಮಾತಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:9
17 ತಿಳಿವುಗಳ ಹೋಲಿಕೆ  

ಮೇಘಸ್ತಂಭದಿಂದ ಅವರ ಸಂಗಡ ಮಾತನಾಡಿದರು. ದೇವರು ಅವರಿಗೆ ಕೊಟ್ಟ ಶಾಸನಗಳನ್ನೂ ತೀರ್ಪುಗಳನ್ನೂ ಅವರು ಕೈಗೊಂಡರು.


ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.


ಆಗ ಅಲ್ಲಿ ಯೆಹೋವ ದೇವರ ಹಸ್ತವು ನನ್ನ ಮೇಲಿತ್ತು. ನನಗೆ ಅವರು ಹೇಳಿದ್ದೇನೆಂದರೆ, “ಎದ್ದೇಳು, ಬಯಲು ಸೀಮೆಗೆ ಹೋಗು ಮತ್ತು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು.”


ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.


ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.


ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು. ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಆ ಬೆಟ್ಟದ ಎದುರಿನಲ್ಲಿ ದನಕುರಿಗಳು ಸಹ ಮೇಯಬಾರದು,” ಎಂದು ಹೇಳಿದರು.


ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಯೆಹೋವ ದೇವರು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದರು. ತರುವಾಯ ಅವನು ಪಾಳೆಯಕ್ಕೆ ಹಿಂದಿರುಗಿ ಹೋಗುತ್ತಿದ್ದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವನೆಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.


ನಾನು ಅಲ್ಲಿ ನಿನಗೆ ದರ್ಶನವನ್ನು ಕೊಟ್ಟು, ಕರುಣಾಸನದ ಮೇಲೆ ಒಡಂಬಡಿಕೆಯ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲರ ವಿಷಯದಲ್ಲಿ ನಾನು ನಿನಗೆ ಆಜ್ಞಾಪಿಸುವವುಗಳನ್ನೆಲ್ಲಾ ನಿನಗೆ ತಿಳಿಸುವೆನು.


ಯೆಹೋವ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿದ ಕೂಡಲೆ ಹೊರಟು ಹೋದರು. ಅಬ್ರಹಾಮನು ತನ್ನ ಮನೆಗೆ ಹಿಂದಿರುಗಿದನು.


ಆಗ ದೇವರು ಅವನ ಸಂಗಡ ಮಾತನಾಡುವುದನ್ನು ಮುಗಿಸಿ, ಅಬ್ರಹಾಮನ ಬಳಿಯಿಂದ ಹೊರಟು ಹೋದರು.


ಇದಾದ ಮೇಲೆ ಮೋಶೆಯು ಗುಡಾರದ ಬಳಿಗೆ ಹೊರಗೆ ಹೋಗುತ್ತಿರುವಾಗ ಜನರೆಲ್ಲರೂ ಎದ್ದು, ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವವರೆಗೆ ಅವನ ಹಿಂದೆ ನೋಡುತ್ತಿದ್ದರು.


ಜನರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡುವಾಗ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಯೆಹೋವ ದೇವರನ್ನು ಆರಾಧಿಸುತ್ತಿದ್ದರು.


ಆಗ ಯೆಹೋವ ದೇವರು ಮೇಘದಲ್ಲಿ ಇಳಿದುಬಂದು ಅಲ್ಲಿ ಅವನ ಸಂಗಡ ನಿಂತುಕೊಂಡು, ಯೆಹೋವ ದೇವರು ತಮ್ಮ ಹೆಸರನ್ನು ಪ್ರಕಟಮಾಡಿದರು.


ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.


ಆಗ ಯೆಹೋವ ದೇವರು ಗುಡಾರದೊಳಗೆ ಮೇಘ ಸ್ತಂಭದಲ್ಲಿ ಕಾಣಿಸಿಕೊಂಡರು. ಆ ಮೇಘಸ್ತಂಭವು ಗುಡಾರದ ಬಾಗಿಲಿನ ಮೇಲೆ ನಿಂತಿತು.


ಮೋಶೆಯು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಾಗ, ಅವನು ಒಡಂಬಡಿಕೆಯ ಮಂಜೂಷದ ಮೇಲೆ ಇರುವ ಕರುಣಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವ ಧ್ವನಿಯನ್ನು ಮೋಶೆಯು ಕೇಳಿದನು. ಹೀಗೆ ದೇವರು ಅವನ ಸಂಗಡ ಮಾತನಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು