Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:10 - ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಯೆಹೋವ ದೇವರು, “ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿಯಲ್ಲಿಯೂ ಯಾವ ಜನಾಂಗದಲ್ಲಿಯೂ ಹಿಂದೆಂದಿಗೂ ಮಾಡದಿರುವಂಥ ಅದ್ಭುತಗಳನ್ನು ನಿನ್ನ ಎಲ್ಲಾ ಜನರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವೆಯೋ ಆ ಜನರೂ ಯೆಹೋವ ದೇವರ ಕಾರ್ಯವನ್ನು ನೋಡುವರು ಏಕೆಂದರೆ ನಾನು ನಿಮಗೆ ಮಾಡುವಂಥದ್ದು ಭಯಂಕರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಮೋಶೆಗೆ, “ಕೇಳು, ನಾನೊಂದು ಒಡಂಬಡಿಕೆಯನ್ನು ಮಾಡುತ್ತೇನೆ. ಜಗದಲ್ಲಿ ಯಾವ ನಾಡಿನಲ್ಲೂ ಯಾವ ಜನಾಂಗದಲ್ಲೂ ನಡೆಯದಂಥ ಮಹಾತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಜನರೆಲ್ಲರು ಸರ್ವೇಶ್ವರನಾದ ನಾನು ಮಾಡುವ ಮಹಾತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಅದ್ಭುತಕರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಹೇಳಿದ್ದೇನಂದರೆ - ನಾನು ಒಂದು ನಿಬಂಧನೆಯನ್ನು ಸ್ಥಾಪಿಸುತ್ತೇನೆ, ಕೇಳು; ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡಿಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವದು ಭಯಂಕರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಯೆಹೋವನು, “ನಾನು ನಿಮ್ಮೊಂದಿಗೆ ಈ ಒಡಂಬಡಿಕೆಯನ್ನು ಮಾಡುತ್ತಿದ್ದೇನೆ. ಭೂಲೋಕದಲ್ಲಿ ಎಲ್ಲಿಯೇ ಆಗಲಿ ಯಾವ ಜನಾಂಗದಲ್ಲಿಯೇ ಆಗಲಿ ಹಿಂದೆಂದೂ ನಡೆಯದಂತ ಮಹತ್ಕಾರ್ಯಗಳನ್ನು ಮಾಡುವೆನು. ಎಲ್ಲಾ ಜನರು ಮತ್ತು ನಿನ್ನೊಂದಿಗಿರುವ ಜನರು ಇವುಗಳನ್ನು ನೋಡಿ ಯೆಹೋವನಾದ ನಾನೇ ಮಹಾ ಮಹಿಮಸ್ವರೂಪನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:10
28 ತಿಳಿವುಗಳ ಹೋಲಿಕೆ  

ನೀವು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿಮಗೆ ಮಾಡಿದ ಅವರೇ ನಿಮ್ಮ ಸ್ತೋತ್ರವು. ಅವರೇ ನಿಮ್ಮ ದೇವರು.


ಅದ್ಭುತಗಳನ್ನು ಮಾಡುವ ದೇವರು ನೀವೇ. ಜನರಲ್ಲಿ ನಿಮ್ಮ ಬಲವನ್ನು ತಿಳಿಯಮಾಡಿದ್ದೀರಿ.


ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದೆ, ಬೆಟ್ಟಗಳು ನಿನ್ನ ಸಮ್ಮುಖಕ್ಕೆ ಕರಗಿ ಹೋದವು.


ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ. ಮಾನವರ ಪರವಾಗಿ ಮಾಡಿರುವ ದೇವರ ಕಾರ್ಯಗಳು ಅತಿಶಯವಾಗಿವೆ.


ನಿಮ್ಮ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ, ಲಕ್ಷಣಗಳಿಂದಲೂ, ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದಿದ್ದೀರಿ.


ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?


ದೇವರು ಪಿತೃಗಳ ಮುಂದೆ ಈಜಿಪ್ಟ್ ದೇಶದಲ್ಲಿ, ಚೋವನ್ ಬೈಲಿನಲ್ಲಿ ಅದ್ಭುತಗಳನ್ನು ಮಾಡಿದರು.


ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.


ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?


ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.


ಯೆಹೋವ ದೇವರು ಮೋಶೆಗೆ ಹೀಗೆ ಹೇಳಿದರು, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಪ್ರಕಾರವೇ ನಾನು ನಿನ್ನ ಮತ್ತು ಇಸ್ರಾಯೇಲಿನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ.”


ನಿಮ್ಮ ಅತಿಶಯ ಶಕ್ತಿಯ ವಿಷಯವಾಗಿ ಅವರು ಹೇಳುವರು; ನಿಮ್ಮ ಮಹಾಕಾರ್ಯವನ್ನು ನಾನು ಸಾರುವೆನು.


ಹಾಮ ದೇಶದಲ್ಲಿ ಅದ್ಭುತಗಳನ್ನೂ, ಕೆಂಪುಸಮುದ್ರದ ಬಳಿಯಲ್ಲಿ ಅತಿಶಯವಾದವುಗಳನ್ನೂ ಮಾಡಿದ ದೇವರನ್ನು ಮರೆತುಬಿಟ್ಟರು.


ದೇವರು ಅಧಿಕಾರಿಗಳ ಗರ್ವವನ್ನು ಮುರಿಯುತ್ತಾರೆ. ಭೂಲೋಕದ ಅರಸರು ದೇವರಿಗೆ ಭಯಪಡುತ್ತಾರೆ.


ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.


ಬೇರೆ ಯಾವ ಜನಾಂಗಕ್ಕಾದರೂ ದೇವರು ಹೀಗೆ ಮಾಡಲಿಲ್ಲ; ದೇವರ ನ್ಯಾಯವಿಧಿಗಳನ್ನು ಜನರು ತಿಳಿದುಕೊಳ್ಳುವುದಿಲ್ಲ. ಯೆಹೋವ ದೇವರನ್ನು ಸ್ತುತಿಸಿರಿ.


ಅವರು ಹತ್ತು ಆಜ್ಞೆಗಳೆಂಬ ತಮ್ಮ ಒಡಂಬಡಿಕೆಯನ್ನು ನಿಮಗೆ ತಿಳಿಸಿ, ಅದನ್ನು ಮಾಡಬೇಕೆಂದು ನಿಮಗೆ ಆಜ್ಞಾಪಿಸಿ, ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದರು.


ದೇವರೇ, ನಿಮ್ಮ ಪರಿಶುದ್ಧ ಸ್ಥಳದಲ್ಲಿ ನೀವು ಅತಿಶಯವಾಗಿದ್ದೀರಿ. ಇಸ್ರಾಯೇಲರ ದೇವರೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುವರು. ದೇವರಿಗೆ ಸ್ತುತಿಯಾಗಲಿ.


ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು.


ಏಕೆಂದರೆ ಯೆಹೋವ ದೇವರು ನಿಮ್ಮನ್ನು ನಾಶಮಾಡುವಂತೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು. ಆದರೆ ಆ ಸಾರಿ ಕೂಡ ಯೆಹೋವ ದೇವರು ನನ್ನ ಬೇಡಿಕೆಯನ್ನು ಕೇಳಿದರು.


ಅದ್ಭುತಗಳನ್ನು ಮಾಡುವುದರಲ್ಲಿ ಸರಿಸಾಟಿಯಿಲ್ಲದ ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ.


ಅವರೊಬ್ಬರೇ ಮಹಾ ಅದ್ಭುತಗಳನ್ನು ಮಾಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ನೀನು ಈಜಿಪ್ಟ್ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವರಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು