Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:12 - ಕನ್ನಡ ಸಮಕಾಲಿಕ ಅನುವಾದ

12 ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಪ್ಪಂದವನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವು ಸೇರುವ ನಾಡಿನ ನಿವಾಸಿಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಮಾಡಿಕೊಂಡರೆ ಅದು ಕೊರಳನ್ನು ಸಿಕ್ಕಿಸುವ ಉರುಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು ನೋಡಿಕೊಳ್ಳಿರಿ; ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಚ್ಚರಿಕೆಯಾಗಿರಿ! ನೀವು ಹೋಗುತ್ತಿರುವ ದೇಶದಲ್ಲಿರುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ನೀವು ಆ ಜನರೊಂದಿಗೆ ಒಪ್ಪಂದ ಮಾಡಿಕೊಂಡರೆ, ಅದು ನಿಮಗೆ ಕೇಡನ್ನು ಬರಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:12
15 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು.


ಅವರ ವಿಗ್ರಹಗಳಿಗೆ ಆರಾಧನೆ ಮಾಡಿದರು; ಅವು ಅವರಿಗೆ ಉರುಲಿನಂತಾದವು.


ಆ ಬಂಗಾರದಿಂದ ಗಿದ್ಯೋನನು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲರೆಲ್ಲರೂ ಅದರ ಹಿಂದೆ ಹೋಗಿ ಪೂಜಿಸಿ ದೇವದ್ರೋಹಿಗಳಾದರು, ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.


ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಆರಾಧಿಸುವಾಗ ಮಾಡಿದ ಎಲ್ಲಾ ಅಸಹ್ಯಕರವಾದ ಆಚಾರಗಳನ್ನು ನಿಮಗೆ ಕಲಿಸಿಕೊಡಬಹುದು ಮತ್ತು ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ದ್ರೋಹಿಗಳಾಗಬಹುದು.


ಈ ಜನಾಂಗಗಳನ್ನು ಕುರಿತು ಯೆಹೋವ ದೇವರು ಇಸ್ರಾಯೇಲರಿಗೆ, “ನೀವು ಅವರ ಬಳಿಗೆ ಪ್ರವೇಶಿಸಬಾರದು. ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು,” ಎಂದು ಹೇಳಿದ್ದರು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.


ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ, ಹಸಿರಾದ ಎಲ್ಲಾ ಮರಗಳ ಕೆಳಗೂ ತಮಗೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದ್ದರು.


ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಬಿಟ್ಟು, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ದೇವರ ಕೋಪಾಗ್ನಿಯು ಬಂತು.


ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.


ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಕೊಡುವಾಗ, ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಅವರಿಗೆ ಮಾಡಬೇಕು.


ಆಗ ಇಸ್ರಾಯೇಲರು ಹಿವ್ವಿಯರಾದ ಅವರಿಗೆ, “ನೀವು ಒಂದು ವೇಳೆ ನಮ್ಮ ಹತ್ತಿರದಲ್ಲಿ ವಾಸಿಸುವವರು ಆಗಿರಬಹುದು. ನಾವು ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವುದು ಹೇಗೆ?” ಎಂದರು.


‘ನಾನೇ ನಿಮ್ಮ ದೇವರಾದ ಯೆಹೋವ ದೇವರು. ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡಬೇಡಿರಿ,’ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಸ್ವರವನ್ನು ಕೇಳದೆ ಹೋದಿರಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು