Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಯೆಹೋವ ದೇವರು ಮೇಘದಲ್ಲಿ ಇಳಿದುಬಂದು ಅಲ್ಲಿ ಅವನ ಸಂಗಡ ನಿಂತುಕೊಂಡು, ಯೆಹೋವ ದೇವರು ತಮ್ಮ ಹೆಸರನ್ನು ಪ್ರಕಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಸರ್ವೇಶ್ವರ ಸ್ವಾಮಿ ಮೇಘಾವೃತರಾಗಿ ಇಳಿದುಬಂದು ಅಲ್ಲಿ ಅವನ ಹತ್ತಿರ ನಿಂತು, ‘ಸರ್ವೇಶ್ವರ’ ಎಂಬ ತಮ್ಮ ನಾಮವನ್ನು ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೋವನು ಮೇಘದಿಂದ ಆವರಿಸಲ್ಪಟ್ಟವನಾಗಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ನಾಮವನ್ನು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೋಶೆಯು ಬೆಟ್ಟವನ್ನೇರಿ ಹೋದನಂತರ ಯೆಹೋವನು ಮೇಘದಲ್ಲಿ ಅವನ ಬಳಿಗೆ ಇಳಿದುಬಂದನು. ಯೆಹೋವನು ಮೋಶೆಯೊಡನೆ ಅಲ್ಲಿ ನಿಂತನು ಮತ್ತು ಮೋಶೆಯು ಯೆಹೋವನ ಹೆಸರನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:5
16 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು, “ನಾನು ನನ್ನ ಒಳ್ಳೆಯತನವನ್ನೆಲ್ಲಾ ನಿನ್ನ ಎದುರಿಗೆ ಹಾದು ಹೋಗ ಮಾಡಿ, ಯೆಹೋವ ದೇವರ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ, ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು,” ಎಂದರು.


ಯೆಹೋವ ದೇವರು ಮೇಘದೊಳಗಿಂದ ಇಳಿದು, ಅವನ ಸಂಗಡ ಮಾತನಾಡಿ, ಅವನ ಮೇಲಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ತೆಗೆದು, ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟರು. ಆದ್ದರಿಂದ ಆತ್ಮವು ಅವರ ಮೇಲೆ ನೆಲೆಯಾಗಿದ್ದಾಗ ಅವರು ಪ್ರವಾದಿಸಿದರು. ಆಮೇಲೆ ಅವರು ಪ್ರವಾದಿಸಲಿಲ್ಲ.


ಮೋಶೆ ಗುಡಾರದೊಳಗೆ ಹೋಗುವಾಗ, ಮೇಘಸ್ತಂಭವು ಪ್ರವೇಶದ್ವಾರದ ಬಳಿಯಲ್ಲಿ ನಿಲ್ಲುತ್ತಿತ್ತು. ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡುತ್ತಿದ್ದರು.


ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.


ಸೊದೋಮಿನ ಅಧಿಪತಿಗಳೇ, ನೀವು ಯೆಹೋವ ದೇವರ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳೇ! ನಮ್ಮ ದೇವರ ನಿಯಮಕ್ಕೆ ಕಿವಿಗೊಡಿರಿ.


ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.


ಬಿಡುಗಡೆಯಾದವರು ಚೀಯೋನಿನಲ್ಲಿ ಯೆಹೋವ ದೇವರ ನಾಮವನ್ನು ಸಾರುವಂತೆಯೂ, ಯೆರೂಸಲೇಮಿನಲ್ಲಿ ತಮ್ಮ ಸ್ತೋತ್ರವನ್ನು ಪ್ರಕಟಿಸುವಂತೆಯೂ ಮಾಡಿದ್ದಾರೆ.


ಏಕೆಂದರೆ ಯೆಹೋವ ದೇವರ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.


ಯೆಹೋವ ದೇವರು ಅಗ್ನಿಯೊಳಗೆ ಬೆಟ್ಟದ ಮೇಲೆ ಇಳಿದಿದ್ದರಿಂದ ಸೀನಾಯಿ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


“ಈಗ ನೀವು ಹೇಳಿದ ಪ್ರಕಾರ ಯೆಹೋವ ದೇವರ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.


ಯೆಹೋವ ದೇವರು ಮೋಶೆಗೆ, “ನಾನು ನಿನ್ನ ಸಂಗಡ ಮಾತನಾಡುವುದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ದಟ್ಟವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ,” ಎಂದರು. ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ತಿಳಿಸಿದನು.


ಅವನ ವಿಷಯದಲ್ಲಿ ಜಾಗ್ರತೆಯಾಗಿದ್ದು, ಅವನ ಮಾತಿಗೆ ವಿಧೇಯರಾಗಿರಿ. ಅವನಿಗೆ ಕೋಪವನ್ನೆಬ್ಬಿಸಬೇಡಿರಿ. ಏಕೆಂದರೆ ನನ್ನ ಹೆಸರು ಅವನಲ್ಲಿ ಇರುವುದರಿಂದ ಅವನು ನಿಮ್ಮ ದ್ರೋಹಗಳನ್ನು ಮನ್ನಿಸುವುದಿಲ್ಲ.


ಯೆಹೋವ ದೇವರು ಮೇಘ ಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು, ಆರೋನನನ್ನೂ ಮಿರ್ಯಾಮಳನ್ನೂ ಕರೆದಾಗ, ಅವರಿಬ್ಬರು ಮುಂದೆ ಬಂದರು.


ಹಾಗೆಯೇ ಸಮುಯೇಲನು ಅವನಿಗೆ ಒಂದನ್ನೂ ಮರೆಮಾಡದೆ, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು, “ಅವರು ಯೆಹೋವ ದೇವರು. ಅವರಿಗೆ ಸರಿತೋರುವುದನ್ನು ಮಾಡಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು