Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:29 - ಕನ್ನಡ ಸಮಕಾಲಿಕ ಅನುವಾದ

29 ಹೀಗೆ ಮಾಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ಬೇಕಾದವುಗಳನ್ನು ಇಸ್ರಾಯೇಲಿನ ಸ್ತ್ರೀಪುರುಷರೆಲ್ಲರು ಮನಃಪೂರ್ವಕವಾಗಿಯೇ ಯೆಹೋವ ದೇವರಿಗೆ ಕಾಣಿಕೆಯನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಗಳಿಗೋಸ್ಕರ ಆತನಿಗೆ ಕಾಣಿಕೆಗಳನ್ನು ತಂದುಕೊಟ್ಟ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಈ ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಈ ಕಾಣಿಕೆಗಳು ಉಪಯೋಗಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:29
25 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿರ್ಧರಿಸಿದ್ದನ್ನು ಕೊಡಲಿ. ಮನಸ್ಸಿಲ್ಲದ ಮನಸ್ಸಿನಿಂದಾಗಲಿ ಅಥವಾ ಬಲವಂತದಿಂದಾಗಲಿ ಕೊಡಬಾರದು. ಏಕೆಂದರೆ ಸಂತೋಷದಿಂದ ಕೊಡುವವನನ್ನು ದೇವರು ಪ್ರೀತಿಸುತ್ತಾರೆ.


ಮೋಶೆಯು ಇಸ್ರಾಯೇಲರ ಇಡೀ ಸಮೂಹಕ್ಕೆ ಹೇಳಿದ್ದು: “ಯೆಹೋವ ದೇವರು ಆಜ್ಞಾಪಿಸಿದ್ದು ಇದೇ.


ಮಾತ್ರವಲ್ಲದೆ ನಮಗೆ ಬಹು ನಿಶ್ಚಯವಾದ ಪ್ರವಾದನೆಯ ವಾಕ್ಯಗಳಿವೆ. ಉದಯ ನಕ್ಷತ್ರವಾಗಿರುವ ಕ್ರಿಸ್ತ ಯೇಸು ನಿಮ್ಮ ಹೃದಯಗಳಲ್ಲಿ ಉದಯಿಸುವಾಗ ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪದಂತೆ ಎಣಿಸಿ, ನೀವು ಆ ಪ್ರವಾದನಾ ವಾಕ್ಯಗಳಿಗೆ ಲಕ್ಷ್ಯಕೊಡುವುದು ಒಳ್ಳೆಯದು.


ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆಯೂ ದೇವರ ಇಸ್ರಾಯೇಲಿನ ಸಮಾಧಾನ ಹಾಗೂ ಕರುಣೆ ಇರಲಿ.


ನಾನು ಇಷ್ಟಪೂರ್ವಕವಾಗಿ ಸುವಾರ್ತೆ ಸಾರಿದರೆ, ನನಗೆ ಬಹುಮಾನವಿರುವುದು. ಇಷ್ಟವಿಲ್ಲದೆ ಮಾಡಿದರೆ, ನನ್ನ ವಶಕ್ಕೆ ಒಪ್ಪಿಸಲಾದ ಕಾರ್ಯಭಾರವನ್ನು ನಾನು ನೆರವೇರಿಸಿದಂತಾಗುತ್ತದೆ.


ಹಾಗಾದರೆ, ಅಪೊಲ್ಲೋಸನು ಯಾರು? ಪೌಲನು ಯಾರು? ಅವನವನಿಗೆ ಕರ್ತದೇವರು ನೇಮಿಸಿದ ಕಾರ್ಯದ ಪ್ರಕಾರ ಅವರವರ ಮುಖಾಂತರ ನೀವು ನಂಬಿದ್ದೀರಿ. ಅವರು ಕೇವಲ ಸೇವಕರಾಗಿದ್ದಾರೆ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.


“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.


ಆಗ ಪಿತೃಗಳ ಪ್ರಧಾನರೂ, ಇಸ್ರಾಯೇಲ್ ಗೋತ್ರಗಳ ಪ್ರಧಾನರೂ, ಸಹಸ್ರಾಧಿಪತಿಗಳೂ ಶತಾಧಿಪತಿಗಳೂ, ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು,


ಇದಲ್ಲದೆ ನಾನು ನನ್ನ ದೇವರ ಮನೆಯ ಮೇಲೆ ನನಗೆ ಭಕ್ತಿ ಇರುವುದರಿಂದ, ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು, ನನ್ನ ಸ್ವಂತ ಸ್ವತ್ತಿನಿಂದ ಬಂಗಾರವನ್ನೂ, ಬೆಳ್ಳಿಯನ್ನೂ ನನ್ನ ಪವಿತ್ರ ದೇವರ ಮನೆಗೆ ಕೊಟ್ಟಿದ್ದೇನೆ.


ನಾನು ಇಸ್ರಾಯೇಲ್ ನಾಯಕರೊಂದಿಗೂ ಸ್ವೇಚ್ಛೆಯಿಂದ ಬಂದ ಜನರೊಂದಿಗೆ ನನ್ನ ಹೃದಯವಿದೆ. ಯೆಹೋವ ದೇವರನ್ನು ಸ್ತುತಿಸಿರಿ.


“ಇಸ್ರಾಯೇಲಿನ ನಾಯಕರು ಮುನ್ನಡೆದಾಗ, ಜನರು ಸ್ವಇಚ್ಛೆಯಿಂದ ಅವರನ್ನು ಹಿಂಬಾಲಿಸಿದಾಗ ಯೆಹೋವ ದೇವರನ್ನು ಸ್ತುತಿಸಿರಿ!


ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ಆಜ್ಞಾವಿಧಿಗಳನ್ನು ಕಾಪಾಡಿ ನಡೆದುಕೊಳ್ಳಬೇಕು.


ನಾನು ನಿಮಗೆ ಆಜ್ಞಾಪಿಸುವ ವಾಕ್ಯಕ್ಕೆ ಏನನ್ನೂ ಕೂಡಿಸಬೇಡಿರಿ, ಅದರಿಂದ ಏನನ್ನೂ ತೆಗೆಯಬೇಡಿರಿ. ಆದರೆ ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಳ್ಳಬೇಕು.


ಅವರು ಪರಿಶುದ್ಧ ಆಲಯದ ನಿರ್ಮಾಣಕ್ಕೋಸ್ಕರ ಇಸ್ರಾಯೇಲರು ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ತೆಗೆದುಕೊಂಡರು. ಇದಲ್ಲದೆ ಅವರು ಪ್ರತಿದಿನ ಬೆಳಿಗ್ಗೆ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.


ಹಾಗೆಯೇ ಅವನ ಪ್ರಧಾನರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ, ಜೆಕರ್ಯನೂ, ಯೆಹೀಯೇಲನೂ ಪಸ್ಕದ ಬಲಿಗೋಸ್ಕರ ಎರಡು ಸಾವಿರದ ಆರುನೂರು ಪಸ್ಕದ ಬಲಿಗಳನ್ನೂ, ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.


ಅದರ ತರುವಾಯ ಅವರು ನಿತ್ಯ ದಹನಬಲಿ, ಅಮಾವಾಸ್ಯೆ ಬಲಿ, ಯೆಹೋವ ದೇವರ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಜನರು ಅರ್ಪಿಸುವ ಸ್ವಂತ ಇಚ್ಛೆಯಿಂದ ತಂದ ಬಲಿದಾನಗಳ ಬಲಿಯನ್ನೂ ಸಮರ್ಪಿಸಿದರು.


ನಾನು ಅವರಿಗೆ, “ನೀವು ಯೆಹೋವ ದೇವರಿಗೆ ಪ್ರತಿಷ್ಠಿತರಾಗಿದ್ದೀರಿ. ಈ ವಸ್ತುಗಳು ಹಾಗೆಯೇ ಪ್ರತಿಷ್ಠಿತವು. ಈ ಬೆಳ್ಳಿ ಬಂಗಾರವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರಿಗೆ ಸಮರ್ಪಿತವಾದ ಕಾಣಿಕೆ.


ನಿಮ್ಮಲ್ಲಿರುವದರಿಂದ ಯೆಹೋವ ದೇವರಿಗೆ ಕಾಣಿಕೆಯನ್ನು ಅರ್ಪಿಸಿರಿ. ಯಾರ‍್ಯಾರಿಗೆ ಇಷ್ಟವಿದೆಯೋ ಅವರು, “ಚಿನ್ನ, ಬೆಳ್ಳಿ, ಕಂಚು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು