Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:2 - ಕನ್ನಡ ಸಮಕಾಲಿಕ ಅನುವಾದ

2 ಬೆಚಲಯೇಲನನ್ನು, ಒಹೋಲಿಯಾಬನನ್ನು ಮತ್ತು ಯೆಹೋವ ದೇವರು ಜ್ಞಾನಕೊಟ್ಟಿದ್ದ ಪ್ರತಿಯೊಬ್ಬ ಶಿಲ್ಪಿಯನ್ನೂ ಆ ಕೆಲಸ ಮಾಡುವುದಕ್ಕೆ ಸಿದ್ಧ ಮನಸ್ಸಿದ್ದ ಪ್ರತಿಯೊಬ್ಬನನ್ನೂ ಮೋಶೆಯು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬೆಚಲೇಲನನ್ನು ಒಹೋಲೀಯಾಬನನ್ನು ಮತ್ತು ಸರ್ವೇಶ್ವರನಿಂದ ಜ್ಞಾನಪಡೆದು ಕೆಲಸ ಕೈಗೊಳ್ಳಲು ಉತ್ಸುಕರಾಗಿದ್ದ ಕಲೆಗಾರರೆಲ್ಲರನ್ನು ಮೋಶೆ ತನ್ನ ಬಳಿಗೆ ಕರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯಾರಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಇಟ್ಟಿದ್ದನೋ ಯಾರಾರನ್ನು ಈ ಕೆಲಸಮಾಡುವದಕ್ಕೆ ಹೃದಯ ಪ್ರೇರಿಸಿತೋ ಆ ಜಾಣರೆಲ್ಲರನ್ನೂ ಮೋಶೆ ತನ್ನ ಹತ್ತಿರಕ್ಕೆ ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬಳಿಕ ಮೋಶೆಯು ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯೆಹೋವನಿಂದ ವಿಶೇಷ ಜ್ಞಾನ ಹೊಂದಿದ ಇತರ ಎಲ್ಲಾ ನಿಪುಣರನ್ನೂ ಕರೆದನು. ಕೆಲಸದಲ್ಲಿ ಸಹಾಯಮಾಡಲು ಇವರು ಬಯಸಿದ್ದರಿಂದ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:2
15 ತಿಳಿವುಗಳ ಹೋಲಿಕೆ  

ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು.


ಅರ್ಖಿಪ್ಪನಿಗೆ, “ನೀನು ಕರ್ತ ಯೇಸುವಿನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವುದಕ್ಕೆ ಎಚ್ಚರವಾಗಿರಬೇಕು!” ಎಂದು ಹೇಳಿರಿ.


ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ. “ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ.


ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು.


ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ದಿನ ತನ್ನನ್ನೇ ಯೆಹೋವ ದೇವರಿಗೆ ಇಷ್ಟಪೂರ್ವಕವಾಗಿ ಸಮರ್ಪಿಸಿಕೊಳ್ಳುವವರು ಯಾರು?” ಎಂದನು.


“ನಿಮ್ಮಲ್ಲಿರುವ ಶಿಲ್ಪಿಗಳೆಲ್ಲರೂ ಬಂದು, ಯೆಹೋವ ದೇವರು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು. ಅವು ಯಾವುವೆಂದರೆ:


ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧವಾಗಿರಬೇಕು. ಅದು ಯೆಹೋವ ದೇವರ ಸಬ್ಬತ್ ದಿನ. ಆ ದಿನದಲ್ಲಿ ಕೆಲಸಮಾಡುವವರಿಗೆ ಮರಣದಂಡನೆಯಾಗಬೇಕು.


ಇದಲ್ಲದೆ ನಾನು ಜ್ಞಾನದ ಆತ್ಮದಿಂದ ತುಂಬಿದ ವಿವೇಕದ ಹೃದಯವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.


“ನನಗೆ ಕಾಣಿಕೆಗಳನ್ನು ತೆಗೆದುಕೊಂಡು ಬರುವಂತೆ ಇಸ್ರಾಯೇಲರ ಸಂಗಡ ಮಾತನಾಡು. ಯಾರ ಹೃದಯದಲ್ಲಿ ಕಾಣಿಕೆ ಕೊಡಬೇಕೆಂಬ ಪ್ರೇರಣೆ ಹುಟ್ಟುತ್ತದೋ, ಅಂಥವರ ಕಾಣಿಕೆಯನ್ನು ನೀನು ತೆಗೆದುಕೊಳ್ಳಬೇಕು.


ತರುವಾಯ ಬೆಚಲಯೇಲ್ ಮತ್ತು ಒಹೋಲಿಯಾಬನೂ ಯೆಹೋವ ದೇವರು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡುವರು. ಅವರು ಪರಿಶುದ್ಧಸ್ಥಳದ ಸೇವೆಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಯೆಹೋವ ದೇವರಿಂದ ಜ್ಞಾನ ವಿವೇಕಗಳನ್ನು ಹೊಂದಿದ ಇತರರೊಂದಿಗೆ ಕೆಲಸಮಾಡುವರು,” ಎಂದು ಹೇಳಿದನು.


ಅವರು ಪರಿಶುದ್ಧ ಆಲಯದ ನಿರ್ಮಾಣಕ್ಕೋಸ್ಕರ ಇಸ್ರಾಯೇಲರು ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ತೆಗೆದುಕೊಂಡರು. ಇದಲ್ಲದೆ ಅವರು ಪ್ರತಿದಿನ ಬೆಳಿಗ್ಗೆ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.


ಇಗೋ, ಯೆಹೋವ ದೇವರ ಆಲಯದ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲಸಕ್ಕೂ, ಎಲ್ಲಾ ವಿಧವಾದ ಸೇವೆಗೂ, ಸಿದ್ಧ ಮನಸ್ಸುಳ್ಳಂಥ ಜಾಣತನದಿಂದ ಕೆಲಸ ಮಾಡುವವರು ನಿನ್ನ ಸಂಗಡ ಇದ್ದಾರೆ. ಇದಲ್ಲದೆ ಪ್ರಧಾನರೂ, ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ವಿಧೇಯರಾಗಿರುವರು.”


ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು