Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:1 - ಕನ್ನಡ ಸಮಕಾಲಿಕ ಅನುವಾದ

1 ಬೆಚಲೇಲನು ಜಾಲಿ ಮರದಿಂದ ದಹನಬಲಿಯ ಪೀಠವನ್ನು ಮಾಡಿದರು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅವನು ಬಲಿಪೀಠವನ್ನು ಜಾಲಿಮರದಿಂದ ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅವನು ಯಜ್ಞವೇದಿಯನ್ನು ಜಾಲೀಮರದಿಂದ ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ ಬೆಚಲೇಲನು ಯಜ್ಞವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಈ ವೇದಿಕೆಯು ಸರ್ವಾಂಗಹೋಮಗಳನ್ನು ಅರ್ಪಿಸುವುದಕ್ಕೆ ಕಟ್ಟಲ್ಪಟ್ಟಿತ್ತು. ವೇದಿಕೆಯು ಚೌಕವಾಗಿತ್ತು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:1
19 ತಿಳಿವುಗಳ ಹೋಲಿಕೆ  

ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು, ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು 2,200 ಕಿಲೋಮೀಟರ್ ಆಗಿತ್ತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿದ್ದವು.


ನಮಗೊಂದು ಬಲಿಪೀಠ ಉಂಟು. ಅದರ ಪದಾರ್ಥವನ್ನು ತಿನ್ನುವುದಕ್ಕೆ ಗುಡಾರದ ಸೇವೆ ಮಾಡುವವರಿಗೆ ಹಕ್ಕಿಲ್ಲ.


ಇವುಗಳಲ್ಲದೆ, ಸೊಲೊಮೋನನು ಕಂಚಿನ ಬಲಿಪೀಠವನ್ನು ಮಾಡಿಸಿದನು; ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ ಸುಮಾರು ಐದು ಮೀಟರ್.


ದೇವದರ್ಶನದ ಗುಡಾರದ ಬಳಿಯಲ್ಲಿ ದಹನಬಲಿಯ ಪೀಠವನ್ನು ಇಟ್ಟನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠ ಇಟ್ಟು ಅದರ ಮೇಲೆ ದಹನಬಲಿ ಮತ್ತು ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು.


“ನೀನು ದಹನಬಲಿಯ ಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡಬೇಕು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಕ್ರಿಸ್ತ ಯೇಸುವು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾರೆ, ನಿರಂತರವೂ ಹಾಗೆಯೇ ಇರುವರು.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.


ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ.


ದಹನಬಲಿಪೀಠದ ಎಲ್ಲಾ ಉಪಕರಣಗಳು, ಗಂಗಾಳ, ಅದರ ಕಾಲು,


ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದರು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಿದರು.


ಆದರೆ ಊರಿಯನ ಮಗ, ಹೂರನ ಮೊಮ್ಮಗನಾದ ಬೆಚಲಯೇಲನು ಮಾಡಿದ ಕಂಚಿನ ಬಲಿಪೀಠವು ಗಿಬ್ಯೋನಿನಲ್ಲಿ ಯೆಹೋವ ದೇವರ ಗುಡಾರದ ಮುಂದೆ ಇತ್ತು. ಅಲ್ಲಿ ಸೊಲೊಮೋನನೂ, ಸಭೆಯೂ ದೇವರ ಇಚ್ಛೆಯನ್ನು ವಿಚಾರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು