Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:21 - ಕನ್ನಡ ಸಮಕಾಲಿಕ ಅನುವಾದ

21 ದೇವದರ್ಶನದ ಗುಡಾರಕ್ಕೆ ಅಂದರೆ ಒಡಂಬಡಿಕೆಯ ನಿಯಮದ ಗುಡಾರ ನಿರ್ಮಾಣಕ್ಕೆ ಬಳಸಿದ ವಸ್ತುಗಳ ಲೆಕ್ಕ ಇವು: ಮೋಶೆಯ ಆಜ್ಞೆಯ ಮೇರೆಗೆ ಯಾಜಕನಾದ ಆರೋನನ ಮಗನಾದ ಈತಾಮಾರನ ನಿರ್ದೇಶನದಲ್ಲಿ ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವದರ್ಶನದ ಗುಡಾರವನ್ನು ನಿರ್ಮಿಸಿದಾಗ ಉಪಯೋಗಿಸಿದ ಲೋಹಗಳ ಲೆಕ್ಕ ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಮಾಡಿಸಿದ ಪಟ್ಟಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವದರ್ಶನದ ಗುಡಾರವನ್ನು ಮಾಡುವದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕ. ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಈ ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:21
31 ತಿಳಿವುಗಳ ಹೋಲಿಕೆ  

“ಅರಣ್ಯದಲ್ಲಿ ದೇವದರ್ಶನ ಗುಡಾರ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ದೇವರು ಮೋಶೆಗೆ ಆಜ್ಞಾಪಿಸಿದಂತೆ, ಅವನಿಗೆ ತೋರಿಸಿದ ಮಾದರಿಯಂತೆ ಅದನ್ನು ರೂಪಿಸಲಾಗಿತ್ತು.


ಅರಸನು ಮುಖ್ಯಯಾಜಕನಾದ ಯೆಹೋಯಾದಾವನನ್ನು ಕರೆಕಳುಹಿಸಿ ಅವನಿಗೆ, “ಯೆಹೋವ ದೇವರ ಸೇವಕನಾದ ಮೋಶೆಯೂ, ಇಸ್ರಾಯೇಲಿನ ಸಭೆಯೂ ದೇವದರ್ಶನ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆಯನ್ನು ಯೆಹೂದದಿಂದಲೂ, ಯೆರೂಸಲೇಮಿನಿಂದಲೂ ಬರುವಂತೆ ಮಾಡಲು ನೀನು ಲೇವಿಯರನ್ನು ಏಕೆ ವಿಚಾರಿಸಲಿಲ್ಲ?” ಎಂದನು.


ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎದ್ದಿತು.


ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರವನ್ನು ಮುಚ್ಚಿತು. ಸಂಜೆಯಿಂದ ಮುಂಜಾನೆಯವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.


ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”


ಆದರೆ ನೀನು ಸಾಕ್ಷಿಯ ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಅದಕ್ಕೆ ಬೇಕಾದ ಎಲ್ಲವನ್ನೂ ನೋಡಿಕೊಳ್ಳಲು ಲೇವಿಯರನ್ನು ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳುವರು. ಅದರ ಸೇವೆಮಾಡಿ, ಗುಡಾರದ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.


ನಿನ್ನ ಗೋತ್ರದ ಮೂಲಪುರುಷನಾದ ಲೇವಿ ವಂಶದವರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಏಕೆಂದರೆ ಅವರು ನಿನ್ನ ಕೂಡ ಇದ್ದು, ನಿನಗೆ ಸೇವೆಮಾಡಬೇಕು. ಆದರೆ ನೀನು ಮತ್ತು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷಿ ಗುಡಾರದ ಮುಂದೆ ಸೇವೆಮಾಡಬೇಕು.


ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬಳನ್ನು ಮದುವೆಯಾದನು. ಆಕೆಯು ಅವನಿಗೆ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಇವರನ್ನು ಹೆತ್ತಳು.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ನಾನು ನನ್ನ ದೇಹವೆಂಬ ಗುಡಾರದಲ್ಲಿ ಬಾಳುವ ತನಕ ನಿಮ್ಮ ನೆನಪಿಗೆ ತರುವುದು ಯುಕ್ತವೆಂದೆಣಿಸಿದ್ದೇನೆ.


ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು.


ಕ್ರಿಸ್ತ ಯೇಸು ಆಗಿರುವ ಇವರು ಪವಿತ್ರ ಸ್ಥಾನದಲ್ಲಿ ಅಂದರೆ, ಮನುಷ್ಯರಿಂದಲ್ಲ ದೇವರೇ ನಿರ್ಮಿಸಿದ ಪವಿತ್ರ ಸ್ಥಾನದ ನಿಜ ಗುಡಾರದಲ್ಲಿ ಸೇವೆಮಾಡುವವರಾಗಿದ್ದಾರೆ.


ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲಿಯೇ ಇರುವುದು ಒಳ್ಳೆಯದು. ನಿಮಗೆ ಮನಸ್ಸಿದ್ದರೆ ನಾನು ನಿಮಗೊಂದು, ಮೋಶೆಗೊಂದು, ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ಕಟ್ಟುವೆನು,” ಎಂದು ಹೇಳಿದನು.


ಯೆಹೋವ ದೇವರೇ, ನಿಮ್ಮ ಪರಿಶುದ್ಧ ಗುಡಾರದಲ್ಲಿ ವಾಸಿಸುವವರು ಯಾರು? ನಿಮ್ಮ ಪರಿಶುದ್ಧ ಪರ್ವತದಲ್ಲಿ ಬಾಳುವವರು ಯಾರು?


ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು:


ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ, ಸರ್ವಶಕ್ತರ ಕಡೆಗೆ ನೀನು ತಿರುಗಿಕೊಂಡರೆ, ನೀನು ಪುನಃಸ್ಥಾಪಿತವಾಗುವೆ.


ಏಕೆಂದರೆ ನೀನು, ‘ನನ್ನ ನಂಬಿಕೆ ತಪ್ಪಿಲ್ಲದ್ದು, ನಿಮ್ಮ ದೃಷ್ಟಿಯಲ್ಲಿ ನಾನು ಶುದ್ಧನಾಗಿದ್ದೇನೆ,’ ಎಂದು ದೇವರಿಗೆ ಹೇಳಿದ್ದೀ.


ಅಮ್ರಾಮನ ಪುತ್ರರು: ಆರೋನನು, ಮೋಶೆಯು, ಮಿರ್ಯಾಮಳು. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್.


“ಯಾಕೋಬೇ, ನಿನ್ನ ಡೇರೆಗಳೂ; ಇಸ್ರಾಯೇಲರೇ, ನಿಮ್ಮ ಗುಡಾರಗಳೂ ಉತ್ತಮವಾಗಿವೆ!


ಒಡಂಬಡಿಕೆಯ ಮಂಜೂಷವನ್ನು ಅದರಲ್ಲಿ ಇಟ್ಟು, ಅದನ್ನು ನೀನು ಪರದೆಯಿಂದ ಮುಚ್ಚಬೇಕು.


ಆ ಪರದೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ, ಪರದೆಯೊಳಗೆ ಒಡಂಬಡಿಕೆಯ ಮಂಜೂಷವನ್ನು ತರಬೇಕು. ಪರಿಶುದ್ಧ ಸ್ಥಳಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಮಧ್ಯದಲ್ಲಿ ಆ ಪರದೆಯನ್ನು ವಿಂಗಡಿಸಬೇಕು.


ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನದ ಹಲಗೆಯನ್ನು ಇಡಬೇಕು.


ಇದಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿರುವ ಸಾಕ್ಷಿಯ ಗುಡಾರದ ದೇವಾಲಯವು ತೆರೆದಿರುವುದನ್ನು ಕಂಡೆನು.


ಗುಡಾರದ ಮತ್ತು ಅಂಗಳದ ಸುತ್ತಲೂ ಇರುವ ಎಲ್ಲಾ ಗೂಟಗಳೂ ಕಂಚಿನಿಂದ ಮಾಡಿದ್ದಾಗಿದ್ದವು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದವನಾದ ಊರಿಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲಯೇಲನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು