Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:8 - ಕನ್ನಡ ಸಮಕಾಲಿಕ ಅನುವಾದ

8 ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಸೇವೆಮಾಡುತ್ತಿದ್ದ ಸ್ತ್ರೀಯರಿಂದ ಕೂಡಿಸಿದ ಕಂಚಿನ ದರ್ಪಣಗಳಿಂದ ಕಂಚಿನಿಂದ ಬೋಗುಣಿಯನ್ನು ಅದರ ಪೀಠವನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆಮಾಡುತ್ತಿದ್ದ ಮಹಿಳೆಯರು ಕೊಟ್ಟ ತಾಮ್ರದ ದರ್ಪಣಗಳಿಂದ ನೀರಿನ ತೊಟ್ಟಿಯನ್ನೂ ಅದರ ಪೀಠವನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವದರ್ಶನದ ಗುಡಾರದ ಬಾಗಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ತಾಮ್ರದಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು. ದೇವದರ್ಶನಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳನ್ನು ಅದಕ್ಕೆ ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:8
23 ತಿಳಿವುಗಳ ಹೋಲಿಕೆ  

ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು.


ಏಲಿಯು ಬಹಳ ವೃದ್ಧನಾಗಿದ್ದನು. ಅವನು ತನ್ನ ಪುತ್ರರು ಇಸ್ರಾಯೇಲ್ ಜನರಿಗೆ ಮಾಡುವುದೆಲ್ಲವನ್ನೂ, ಅವರು ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬುದನ್ನೂ ಕೇಳಿ ಅವರಿಗೆ,


ನೀನು ದೇವದರ್ಶನದ ಗುಡಾರಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಗಂಗಾಳವನ್ನಿಟ್ಟು, ಅದರಲ್ಲಿ ನೀರನ್ನು ತುಂಬಿಸಬೇಕು.


ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲು ಇರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.


ಯೇಸು ಅವನಿಗೆ, “ಸ್ನಾನಮಾಡಿಕೊಂಡವರು ತಮ್ಮ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು. ಅವರು ಸಂಪೂರ್ಣವಾಗಿ ಶುದ್ಧರಾಗಿದ್ದಾರೆ. ನೀವು ಸಹ ಶುದ್ಧರಾಗಿದ್ದೀರಿ. ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದರು.


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


ನನ್ನ ಕೈಗಳನ್ನು ನಿರ್ಮಲವಾಗಿ ತೊಳೆದುಕೊಂಡು, ಯೆಹೋವ ದೇವರೇ, ನಿಮ್ಮ ಬಲಿಪೀಠವನ್ನು ಸುತ್ತುತ್ತಾ,


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ಪ್ರಿಯ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತ ಯೇಸು ಹೇಗೆ ನೀತಿವಂತರಾಗಿದ್ದಾರೋ ಹಾಗೆಯೇ ನೀತಿಯನ್ನು ಅನುಸರಿಸುವವರು ನೀತಿವಂತರಾಗಿದ್ದಾರೆ.


ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಆದರೆ ಪೇತ್ರನು ಬಾಗಿಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು. ಮಹಾಯಾಜಕನಿಗೆ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.


ಆಗ ಪೇತ್ರನು ಹೊರಾಂಗಣದಲ್ಲಿ ಕುಳಿತಿರಲು, ಒಬ್ಬ ದಾಸಿಯು ಅವನ ಬಳಿಗೆ ಬಂದು, “ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು,” ಎಂದಳು.


ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ, ನನ್ನ ಬಾಗಿಲುಗಳ ನಿಲುವುಗಳಲ್ಲಿ ನಿರೀಕ್ಷಿಸುತ್ತಾ, ನನ್ನ ಮಾತುಗಳನ್ನು ಕೇಳುವವರು ಧನ್ಯರು.


ಹತ್ತು ಕಂಚಿನ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು 800 ಲೀಟರ್ ನೀರು ಹಿಡಿಯುತ್ತಿತ್ತು. ಒಂದೊಂದು ತೊಟ್ಟಿಯು 2 ಮೀಟರ್ ಇದ್ದವು. ಪ್ರತಿಯೊಂದು ಪೀಠಗಳ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.


ದಹನಬಲಿಪೀಠದ ಎಲ್ಲಾ ಉಪಕರಣಗಳು, ಗಂಗಾಳ, ಅದರ ಕಾಲು,


ಬಲಿಪೀಠವನ್ನು ಹೊರುವುದಕ್ಕೆ ಅದರ ಎರಡೂ ಬದಿಯಲ್ಲಿ ಮಾಡಿದ ಕೋಲುಗಳನ್ನು ಬಳೆಗಳಲ್ಲಿ ಸೇರಿಸಿದರು. ಅವರು ಆ ಬಲಿಪೀಠವನ್ನು ಚೌಕಟ್ಟುಗಳಿಂದ ಪೊಳ್ಳಾಗಿರುವಂತೆ ಮಾಡಿದರು.


ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು; ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್; ಅದರ ಎತ್ತರ ಸುಮಾರು ಎರಡು ಮೀಟರ್; ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು;


ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು