Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಯೆಹೋವ ದೇವರು, “ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ಹೋದರೂ, ಎರಡನೆಯ ಸೂಚಕಕಾರ್ಯವನ್ನು ನೋಡಿ ನಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಯೆಹೋವನು ಅವನಿಗೆ, “ಅವರು ನಿನ್ನನ್ನು ನಂಬದೆ, ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ತಿರಸ್ಕರಿಸಿದರೂ, ಎರಡನೆಯ ಸೂಚಕಕಾರ್ಯವನ್ನು ನಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಸರ್ವೇಶ್ವರ ಅವನಿಗೆ, “ಆ ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಅರ್ಥಮಾಡಿಕೊಳ್ಳದೆ ಹೋದರೂ ಎರಡನೆಯದನ್ನು ಅರ್ಥಮಾಡಿಕೊಂಡು ನಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಯೆಹೋವನು ಅವನಿಗೆ - ಅವರು ನಿನ್ನನ್ನು ನಂಬದೆ ಮೊದಲನೆಯ ಮಹತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಯೆಹೋವನು ಅವನಿಗೆ, “ನೀನು ನಿನ್ನ ಊರುಗೋಲಿನಿಂದ ಸೂಚಕಕಾರ್ಯ ಮಾಡುವಾಗ ಜನರು ನಿನ್ನನ್ನು ನಂಬುವರು; ನಿನ್ನ ಮಾತಿಗೆ ಲಕ್ಷ್ಯಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:8
10 ತಿಳಿವುಗಳ ಹೋಲಿಕೆ  

ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


ಗಾಯ ಮಾಡುವವರೂ ಗಾಯ ಕಟ್ಟುವವರೂ ದೇವರೇ; ಹೊಡೆಯುವುದೂ ಗುಣಪಡಿಸುವುದೂ ದೇವರ ಕೈಯೇ.


ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.


ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಜನರು ಅವರನ್ನು ನಂಬಲಿಲ್ಲ.


ದೇವರು ಅವನಿಗೆ, “ನಿನ್ನ ಕೈಯನ್ನು ಉಡಿಯಲ್ಲಿ ಹಾಕು,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ, ಉಡಿಯಿಂದ ಹೊರಗೆ ತೆಗೆದಾಗ, ಅದು ಅವನ ಉಳಿದ ಮೈಯಂತೆ ಆಗಿತ್ತು.


ಆ ಎರಡೂ ಸೂಚಕಕಾರ್ಯಗಳನ್ನು ಅವರು ನಂಬದೆ, ನಿನ್ನ ಮಾತನ್ನು ಕೇಳದೆ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದು, ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ನೀನು ತೆಗೆದ ನದಿಯ ನೀರು ಒಣಗಿದ ನೆಲದ ಮೇಲೆ ರಕ್ತವಾಗುವುದು,” ಎಂದರು.


ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಯೆಹೋವ ದೇವರ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು.


ಅದಕ್ಕವನು, “ಈಗ ನಿಮ್ಮ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ, ನನ್ನ ಸಂಗಡ ಮಾತನಾಡುವವರು ನೀವು ಎಂಬುದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು