Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:20 - ಕನ್ನಡ ಸಮಕಾಲಿಕ ಅನುವಾದ

20 ಅವನು ಆಜ್ಞಾಶಾಸನಗಳನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿಟ್ಟು, ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ, ಮಂಜೂಷದ ಮೇಲೆ ಕರುಣಾಸನವನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮೋಶೆಯು ಒಡಂಬಡಿಕೆಯ ಆಜ್ಞಾಶಾಸನಗಳನ್ನು ತೆಗೆದುಕೊಂಡು ಪವಿತ್ರ ಪೆಟ್ಟಿಗೆಯಲ್ಲಿಟ್ಟನು. ಮೋಶೆಯು ಪೆಟ್ಟಿಗೆಯ ಎರಡು ಕಡೆಗಳಲ್ಲಿ ಕೋಲುಗಳನ್ನು ಇರಿಸಿದನು. ಬಳಿಕ ಅವನು ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:20
19 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮನ್ನವನ್ನು ಸಂರಕ್ಷಿಸುವುದಕ್ಕೆ ಸಾಕ್ಷಿಯಾಗಿ ಇಟ್ಟನು.


ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.


ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.


ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.


ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ


ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.


ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ; ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.”


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ, ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.


ತರುವಾಯ ನಾನು ಬೆಟ್ಟದಿಂದ ಇಳಿದುಬಂದು, ಆ ಹಲಗೆಗಳನ್ನು ಯೆಹೋವ ದೇವರು ನನಗೆ ಆಜ್ಞಾಪಿಸಿದ ಹಾಗೆ ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಅವು ಅಲ್ಲಿಯೇ ಇರುತ್ತವೆ.


ಒಡಂಬಡಿಕೆಯ ಮಂಜೂಷವನ್ನು ಅದರಲ್ಲಿ ಇಟ್ಟು, ಅದನ್ನು ನೀನು ಪರದೆಯಿಂದ ಮುಚ್ಚಬೇಕು.


ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.


ಮಹಾಪರಿಶುದ್ಧ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮೇಲೆ ಕರುಣಾಸನವನ್ನು ಇಡಬೇಕು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ, ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.


ದಾವೀದನು ಯೆಹೋವ ದೇವರ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತೆಗೆದುಕೊಂಡು ಬರುವ ನಿಮಿತ್ತ, ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲರನ್ನು ಕೂಡಿಸಿ ಬರಮಾಡಿದನು.


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ, ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು