Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:17 - ಕನ್ನಡ ಸಮಕಾಲಿಕ ಅನುವಾದ

17 ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ನೀವು, ‘ನಾವು ಹೋಗಿ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುತ್ತೇವೆ,’ ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ಅವನು, “ನೀವು ಒಳ್ಳೆಯ ಮೈಗಳ್ಳರು! ನಾವು ಹೋಗಿ ಸರ್ವೇಶ್ವರನಿಗೆ ಬಲಿಯರ್ಪಿಸಿಬರಬೇಕು, ಎನ್ನುವುದಕ್ಕೆ ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದಕ್ಕವನು - ನೀವು ಬಹಳ ಮೈಗಳ್ಳರು, ನಾವು ಹೋಗಿ ಯೆಹೋವನಿಗೆ ಯಜ್ಞಮಾಡಿ ಬರಬೇಕನ್ನುವದಕ್ಕೆ ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಫರೋಹನು, “ನೀವು ಸೋಮಾರಿಗಳು. ನಿಮಗೆ ಕೆಲಸ ಮಾಡಲು ಇಷ್ಟವಿಲ್ಲ. ಆದ್ದರಿಂದ ನಿಮ್ಮನ್ನು ಹೋಗಗೊಡಿಸಬೇಕೆಂದು ನೀವು ನನ್ನನ್ನು ಕೇಳುತ್ತೀರಿ. ಇಲ್ಲಿಂದ ಹೊರಟುಹೋಗಿ ಯೆಹೋವನಿಗೆ ಯಜ್ಞಗಳನ್ನು ಮಾಡಬೇಕೆಂದು ಅಪೇಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:17
6 ತಿಳಿವುಗಳ ಹೋಲಿಕೆ  

ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ಯೇಸುವಿನ ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಏಕೆ ಈ ವ್ಯರ್ಥ ಖರ್ಚು?


ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದ್ದರಿಂದ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಅರ್ಪಿಸೋಣ,’ ಎಂದು ಕೂಗುತ್ತಾರೆ.


ನಿಮ್ಮ ದಾಸರಿಗೆ ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ, ‘ಇಟ್ಟಿಗೆಗಳನ್ನು ಮಾಡಿರಿ’ ಎಂದು ನಮಗೆ ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಆದರೆ ತಪ್ಪು ನಿಮ್ಮ ಸ್ವಂತ ಜನರಲ್ಲಿಯೇ ಇದೆ,” ಎಂದರು.


ಆದ್ದರಿಂದ ಈಗ ಹೋಗಿ ಕೆಲಸಮಾಡಿರಿ. ಹುಲ್ಲನ್ನು ನಿಮಗೆ ಕೊಡುವುದಕ್ಕಾಗುವುದಿಲ್ಲ. ಆದರೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ತಯಾರಿಸಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು