Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಅವರು ಫರೋಹನಿಗೆ, “ಹಿಬ್ರಿಯರ ದೇವರು ನಮ್ಮನ್ನು ಸಂದರ್ಶಿಸಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿವಸ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞ ಅರ್ಪಿಸುವುದಕ್ಕೆ ನಾವು ಹೋಗಬೇಕು. ಇಲ್ಲವಾದರೆ ಅವರು ಉಪದ್ರವದಿಂದಲೋ ಖಡ್ಗದಿಂದಲೋ ನಮ್ಮನ್ನು ದಂಡಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮೋಶೆ ಮತ್ತು ಆರೋನರು, “ಹಿಬ್ರಿಯರ ದೇವರು ನಮಗೆ ದರ್ಶನವಿತ್ತರು. ಅಪ್ಪಣೆ ಆದರೆ ನಾವು ಮರುಭೂಮಿಯಲ್ಲಿ ಮೂರು ದಿವಸದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸಿ ಬರುತ್ತೇವೆ. ಹಾಗೆ ಮಾಡದೆಹೋದರೆ ಅವರು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರ ಮಾಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಅವನಿಗೆ - ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು; ಅಪ್ಪಣೆಯಾದರೆ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞ ಮಾಡಿ ಬರುವೆವು; ಮಾಡದೆ ಹೋದರೆ ಆತನು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರಮಾಡಾನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದಕ್ಕೆ ಮೋಶೆ ಆರೋನರು, “ಇಬ್ರಿಯರ ದೇವರು ನಮ್ಮ ಸಂಗಡ ಮಾತಾಡಿದ್ದಾನೆ. ಆದ್ದರಿಂದ ನಾವು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವೆವು. ಇಲ್ಲವಾದರೆ ಆತನು ನಮ್ಮನ್ನು ಕಾಯಿಲೆಯಿಂದಲೋ ಕತ್ತಿಯಿಂದಲೋ ಸಂಹರಿಸುವನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:3
12 ತಿಳಿವುಗಳ ಹೋಲಿಕೆ  

“ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.


“ ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, “ಆಹಾ!” ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವ ಕೋಪವುಂಟಾಗದ ಹಾಗೆ, ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಶ್ರದ್ಧೆಯಿಂದ ಒದಗಿಸಿಕೊಡಬೇಕು.


ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.


ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ, ಯೆಹೋವ ದೇವರಿಗೆ ಭಯಪಡದ ಕಾರಣ, ಯೆಹೋವ ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದರು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವವರೆಗೆ ಯೆಹೋವ ದೇವರು ನಿಮಗೆ ವ್ಯಾಧಿಯು ಅಂಟಿಕೊಳ್ಳುವಂತೆ ಮಾಡುವರು.


ಅವನಿಗೆ ನೀನು, ‘ಹಿಬ್ರಿಯರ ದೇವರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ಮರುಭೂಮಿಯಲ್ಲಿ ನನಗೆ ಆರಾಧನೆ ಮಾಡುವ ಹಾಗೆ ನನ್ನ ಜನರನ್ನು ಕಳುಹಿಸು, ಎಂದು ಅವರು ಹೇಳಿದ್ದಾರೆ. ಆದರೆ ಇಗೋ, ಇಂದಿನವರೆಗೂ ನೀನು ಕೇಳಲಿಲ್ಲ.


ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಕಳುಹಿಸು.


ಆಗ ಯೆಹೋವ ದೇವರು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜನರು ನನ್ನನ್ನು ಆರಾಧಿಸುವಂತೆ ಅವರನ್ನು ಕಳುಹಿಸು.


ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವ ದೇವರಿಗೆ ಅವರ ಅಪ್ಪಣೆಯಂತೆ ಯಜ್ಞಮಾಡುವೆವು,” ಎಂದು ಹೇಳಿದನು.


ಒಡಂಬಡಿಕೆಯನ್ನು ಮುರಿದದ್ದಕ್ಕಾಗಿ, ಮುಯ್ಯಿಗೆ ಮುಯ್ಯಿ ತೀರಿಸುವ ಖಡ್ಗವನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಸೇರಿದಾಗ, ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನಿಮ್ಮನ್ನು ಶತ್ರುವಿನ ಕೈಗೆ ಒಪ್ಪಿಸಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು