Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:1 - ಕನ್ನಡ ಸಮಕಾಲಿಕ ಅನುವಾದ

1 ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಕಳುಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, ‘ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಸರ್ವೇಶ್ವರ ಸ್ವಾಮಿ ಮೋಶೆಗೆ ಇಂತೆಂದರು: “ನೀನು ಫರೋಹನ ಬಳಿಗೆ ಹೋಗಿ ಹೀಗೆಂದು ಹೇಳು - ‘ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಹೋಗಲು ಅಪ್ಪಣೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಯೆಹೋವನು ಮೋಶೆಗೆ ಇಂತೆಂದನು - ನೀನು ಫರೋಹನ ಬಳಿಗೆ ಹೋಗಿ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ - ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗಿ ಯೆಹೋವನು ಹೀಗೆನ್ನುತ್ತಾನೆ ಎಂದು ಹೇಳು: ‘ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:1
15 ತಿಳಿವುಗಳ ಹೋಲಿಕೆ  

“ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.


ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ, “ಇಸ್ರಾಯೇಲಿನ ಯೆಹೋವ ದೇವರು, ‘ಮರುಭೂಮಿಯಲ್ಲಿ ನನಗೆ ನನ್ನ ಜನರು ಹಬ್ಬವನ್ನಾಚರಿಸುವುದಕ್ಕೆ ಅವರನ್ನು ಹೋಗಗೊಡಿಸು,’ ಎಂದು ಹೇಳುತ್ತಾರೆ,” ಎಂದರು.


ಅವನಿಗೆ ನೀನು, ‘ಹಿಬ್ರಿಯರ ದೇವರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ಮರುಭೂಮಿಯಲ್ಲಿ ನನಗೆ ಆರಾಧನೆ ಮಾಡುವ ಹಾಗೆ ನನ್ನ ಜನರನ್ನು ಕಳುಹಿಸು, ಎಂದು ಅವರು ಹೇಳಿದ್ದಾರೆ. ಆದರೆ ಇಗೋ, ಇಂದಿನವರೆಗೂ ನೀನು ಕೇಳಲಿಲ್ಲ.


ಫರೋಹನೇ, ನಾನು ನಿನಗೆ ಹೇಳುವುದೇನೆಂದರೆ: “ನನ್ನ ಸೇವೆಮಾಡುವಂತೆ ನನ್ನ ಮಗನನ್ನು ಕಳುಹಿಸು.” ನೀನು ಅವನನ್ನು ಕಳುಹಿಸುವುದನ್ನು ನಿರಾಕರಿಸಿದರೆ, ನಾನು ನಿನ್ನ ಮಗನನ್ನು ಅಂದರೆ, ನಿನ್ನ ಜೇಷ್ಠಪುತ್ರನನ್ನು ಕೊಲ್ಲುವೆನು,’ ಎಂದು ತಿಳಿಸಬೇಕು,” ಎಂದರು.


ಆಗ ಅವರು ಫರೋಹನಿಗೆ, “ಹಿಬ್ರಿಯರ ದೇವರು ನಮ್ಮನ್ನು ಸಂದರ್ಶಿಸಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿವಸ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞ ಅರ್ಪಿಸುವುದಕ್ಕೆ ನಾವು ಹೋಗಬೇಕು. ಇಲ್ಲವಾದರೆ ಅವರು ಉಪದ್ರವದಿಂದಲೋ ಖಡ್ಗದಿಂದಲೋ ನಮ್ಮನ್ನು ದಂಡಿಸುವರು,” ಎಂದರು.


ಯೆಹೋವ ದೇವರು ನೈಲ್ ನದಿಯನ್ನು ರಕ್ತವನ್ನಾಗಿ ಮಾಡಿ ಏಳು ದಿನಗಳು ಕಳೆದವು.


ಕಳುಹಿಸುವುದಕ್ಕೆ ನಿರಾಕರಿಸಿದರೆ, ನಾನು ನಿನ್ನ ದೇಶವನ್ನೆಲ್ಲಾ ಕಪ್ಪೆಗಳಿಂದ ಉಪದ್ರವ ತರುವೆನು.


ಆಗ ಯೆಹೋವ ದೇವರು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜನರು ನನ್ನನ್ನು ಆರಾಧಿಸುವಂತೆ ಅವರನ್ನು ಕಳುಹಿಸು.


ಅನಂತರ ಯೆಹೋವ ದೇವರು ಮೋಶೆಗೆ ಹೇಳಿದ್ದೇನಂದರೆ, “ಫರೋಹನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಕಳುಹಿಸು.”


ಆಗ ಯೆಹೋವ ದೇವರು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಪಟ್ಟಣಕ್ಕೆ ಎದುರಾಗಿ ಚಾಚು. ಏಕೆಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದರು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.


ಅವರ ದೇಶವು ಕಪ್ಪೆಗಳಿಂದ ತುಂಬಿಕೊಂಡಿತು; ಅವರ ಅರಸುಗಳ ಕೊಠಡಿಗಳಲ್ಲಿ ಸಹ ಅವು ನುಗ್ಗಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು