Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:19 - ಕನ್ನಡ ಸಮಕಾಲಿಕ ಅನುವಾದ

19 ಆಗ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ,” ಎಂದರು. ಆದರೆ ಯೆಹೋವ ದೇವರು ಹೇಳಿದಂತೆ ಫರೋಹನ ಹೃದಯ ಕಠಿಣವಾಯಿತು. ಆದ್ದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಆ ಜೋಯಿಸರು - ಇದು ದೇವರ ಕೈಕೆಲಸವೇ ಸರಿ ಎಂದು ಫರೋಹನಿಗೆ ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು; ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:19
18 ತಿಳಿವುಗಳ ಹೋಲಿಕೆ  

ನಾನು ದೇವರ ಬಲದಿಂದಲೇ ದೆವ್ವಗಳನ್ನು ಓಡಿಸುವುದಾದರೆ, ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.


ನಿಮ್ಮ ಬೆರಳಿನ ಸೃಷ್ಟಿಯಾದ ಆಕಾಶಮಂಡಲವನ್ನೂ ನೀವು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡಿದಾಗ,


ನಾನು ದೇವರ ಆತ್ಮನಿಂದ ದೆವ್ವಗಳನ್ನು ಓಡಿಸುವುದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.


ನಾನು ಈಜಿಪ್ಟಿನ ಮೇಲೆ ನನ್ನ ಕೈಯನ್ನಿಟ್ಟು, ಅವರೊಳಗಿಂದ ಇಸ್ರಾಯೇಲರನ್ನು ಹೊರಗೆ ಬರಮಾಡಿದಾಗ, ನಾನು ಯೆಹೋವ ದೇವರೆಂದು ಈಜಿಪ್ಟಿನವರಿಗೆ ತಿಳಿದುಬರುವುದು,” ಎಂದು ಹೇಳಿದರು.


“ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ.


ಆಗ ಮುಖ್ಯಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ, “ಈತನು ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?


ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ,


ಆಗ ನೋಡಿರಿ, ಅದು ತನ್ನ ಮೇರೆಯಾದ ಬೇತ್ ಷೆಮೆಷ್ ಎಂಬ ಮಾರ್ಗವನ್ನು ಹಿಡಿದು ಹೋದರೆ, ಯೆಹೋವ ದೇವರು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾರೆ, ಇಲ್ಲದೆ ಹೋದರೆ ಅವರ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ತಾನಾಗಿಯೇ ನಮಗೆ ಆಯಿತೆಂದು ತಿಳಿದುಕೊಳ್ಳಿರಿ,” ಎಂದರು.


ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ, ಅದರ ಸಂಗಡ ನಿಶ್ಚಯವಾಗಿ ದೋಷಪರಿಹಾರ ಕಾಣಿಕೆಯನ್ನು ಕಳುಹಿಸಿರಿ, ಆಗ ನೀವು ಸ್ವಸ್ಥರಾಗುವಿರಿ. ಅವರ ಕೈ ನಿಮ್ಮನ್ನು ಬಿಟ್ಟುಹೋಗದೆ ಇರುವ ಕಾರಣ ನಿಮಗೆ ತಿಳಿಯುವುದು,” ಎಂದರು.


ಫರೋಹನ ಅಧಿಕಾರಿಗಳು ಅವನಿಗೆ, “ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವಂತೆ ಅವರನ್ನು ಕಳುಹಿಸಿಬಿಡು. ಈಜಿಪ್ಟ್ ನಾಶವಾಯಿತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ?” ಎಂದರು.


ಆದರೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆದರೆ ನನ್ನ ಕೈಯನ್ನು ಈಜಿಪ್ಟಿನ ಮೇಲೆ ಇಟ್ಟು, ದೊಡ್ಡ ನ್ಯಾಯ ತೀರ್ಪುಗಳಿಂದ ನನ್ನ ಜನರಾದ ಇಸ್ರಾಯೇಲರನ್ನೂ, ಅವರ ಸೈನ್ಯಗಳನ್ನೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡುವೆನು.


ಯೆಹೋವ ದೇವರು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತನ್ನು ಕೇಳಲಿಲ್ಲ.


ಆ ಒಣಗಿದ್ದ ಏಳು ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಸಿದಾಗ, ಅದರ ಅರ್ಥವನ್ನು ನನಗೆ ಯಾರೂ ಹೇಳಲಿಲ್ಲ,” ಎಂದನು.


ಯೆಹೋವ ದೇವರು ಇಸ್ರಾಯೇಲರ ಪಶುಗಳನ್ನೂ ಈಜಿಪ್ಟಿನವರ ಪಶುಗಳನ್ನೂ ವಿಂಗಡಿಸುವರು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯುವುದಿಲ್ಲ,’ ” ಎಂದರು.


ಇಸ್ರಾಯೇಲರು ಇದ್ದ ಗೋಷೆನ್ ಪ್ರಾಂತದಲ್ಲಿ ಆಲಿಕಲ್ಲಿನ ಮಳೆಯು ಇರಲಿಲ್ಲ.


ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾರೂ ತಮ್ಮ ಸ್ಥಳವನ್ನು ಬಿಟ್ಟು ಏಳಲಿಲ್ಲ. ಆದರೆ ಇಸ್ರಾಯೇಲರಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.


ಆದರೆ ಯೆಹೋವ ದೇವರು ಈಜಿಪ್ಟಿನವರಿಗೂ, ಇಸ್ರಾಯೇಲರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳುಕೊಳ್ಳುವಂತೆ, ಇಸ್ರಾಯೇಲಿನವರ ವಿರುದ್ಧ ಇಲ್ಲವೆ ಪ್ರಾಣಿಗಳ ವಿರುದ್ಧ ಒಂದು ನಾಯಿ ಸಹ ಬೊಗಳುವುದಿಲ್ಲ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು