Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:18 - ಕನ್ನಡ ಸಮಕಾಲಿಕ ಅನುವಾದ

18 ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ಮಹಾ ಕಠಿಣವಾದ ಆಲಿಕಲ್ಲಿನ ಮಳೆಯನ್ನು ಬೀಳುವಂತೆ ಮಾಡುವೆನು. ಅಂಥದ್ದು ಈಜಿಪ್ಟಿನಲ್ಲಿ, ಅದರ ರಾಜ್ಯವು ಸ್ಥಾಪಿತವಾದಂದಿನಿಂದ ಇಲ್ಲಿಯವರೆಗೂ ಆಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಈಜಿಪ್ಟಿನ ರಾಜ್ಯ ಸ್ಥಾಪಿತವಾಗಿ ಇಂದಿನವರೆಗೂ ಬೀಳದಂಥ ಕಲ್ಲಿನ ಮಳೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು; ಐಗುಪ್ತರಾಜ್ಯವು ಸ್ಥಾಪಿಸಲ್ಪಟ್ಟ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ನಾಳೆ ಇದೇ ಸಮಯಕ್ಕೆ ಸರಿಯಾಗಿ ಭೀಕರವಾದ ಆಲಿಕಲ್ಲಿನ ಮಳೆಯನ್ನು ಸುರಿಸುವೆನು. ಈಜಿಪ್ಟ್ ರಾಜ್ಯವು ಸ್ಥಾಪನೆಯಾದಂದಿನಿಂದ ಇಂಥ ಆಲಿಕಲ್ಲಿನ ಮಳೆ ಬಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:18
14 ತಿಳಿವುಗಳ ಹೋಲಿಕೆ  

ನಿಮ್ಮ ಬಿರುಗಾಳಿಯಿಂದ ಅವರನ್ನು ಹಿಂಸಿಸಿ, ನಿಮ್ಮ ಸುಳಿಗಾಳಿಯಿಂದ ಅವರನ್ನು ತಲ್ಲಣ ಪಡಿಸಿರಿ.


ಆಗ ಎಲೀಷನು, “ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಿಲಲ್ಲಿ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಆರು ಕಿಲೋಗ್ರಾಂ ಜವೆಗೋಧಿ ಒಂದು ಬೆಳ್ಳಿ ನಾಣ್ಯಕ್ಕೆ ಮಾರಲಾಗುವುದು,” ಎಂದನು.


ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು. ಅವರು ನಿನ್ನ ಅರಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ಅವರು ತೆಗೆದುಕೊಂಡು ಹೋಗುವರು,’ ” ಎಂದನು.


ಈಜೆಬೆಲಳು ಎಲೀಯನ ಬಳಿಗೆ ದೂತನನ್ನು ಕಳುಹಿಸಿ, “ನಾನು ನಾಳೆ ಇಷ್ಟು ಹೊತ್ತಿಗೆ ಅವರಲ್ಲಿರುವ ಒಬ್ಬೊಬ್ಬನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ, ದೇವರುಗಳು ನನಗೆ ಬೇಕಾದದ್ದನ್ನು ಮಾಡಲಿ,” ಎಂದು ಹೇಳಿದಳು.


ಹಾಗೆಯೇ, “ಆರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಜವೆಗೋಧಿ ಹನ್ನೆರಡು ಕಿಲೋಗ್ರಾಂ ಒಂದು ಬೆಳ್ಳಿ ನಾಣ್ಯಕ್ಕೆ ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಮಾರಲಾಗುವುದು,” ಎಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.


ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು.


ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?


ಜನರ ಶಿಕ್ಷಣಕ್ಕಾಗಿಯೂ, ಭೂಮಿಯ ಹಿತಕ್ಕಾಗಿಯೂ ದೇವರು ತಮ್ಮ ಪ್ರೀತಿಯನ್ನು ತೋರಿಸಲು, ಮೇಘಗಳನ್ನು ಬರಮಾಡುತ್ತಾರೆ.


“ಯೋಬನೇ, ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿರುವೆಯಾ? ಕಲ್ಮಳೆಯ ಉಗ್ರಾಣಗಳನ್ನು ನೋಡಿರುವೆಯಾ?


ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿಕೊಳ್ಳುವುವು. ನಿನ್ನ ತಂದೆ ಅಲ್ಲದೆ ನಿನ್ನ ತಂದೆಯ ತಂದೆಗಳಾಗಲಿ, ಭೂಮಿಯ ಮೇಲೆ ಇದ್ದಂದಿನಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಯಾರೂ ನೋಡಿಲ್ಲ,’ ” ಎಂದು ಮೋಶೆ ಹೇಳಿ ಫರೋಹನ ಬಳಿಯಿಂದ ಹೊರಟುಹೋದನು.


ಹೀಗೆ ಮಿಡತೆಗಳ ಉಪದ್ರವ ಈಜಿಪ್ಟ್ ದೇಶದಲ್ಲೆಲ್ಲಾ ಬಂದು, ಈಜಿಪ್ಟಿನ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವುಗಳಂಥವು ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.


ಈಜಿಪ್ಟ್ ದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವುದು. ಅಂಥಾ ಗೋಳಾಟವು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವುದಿಲ್ಲ.


ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿ ಇಟ್ಟಿರುವೆನು; ಯುದ್ಧಕದನಗಳ ದಿನಗಳಿಗಾಗಿಯೂ ಕಾದಿಟ್ಟಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು