Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:25 - ಕನ್ನಡ ಸಮಕಾಲಿಕ ಅನುವಾದ

25 ಆ ಆಲಿಕಲ್ಲಿನ ಮಳೆಯು ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ ಹೊಲದಲ್ಲಿ ಇದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳು ಮಾಡಿ, ಎಲ್ಲಾ ಮರಗಳನ್ನು ಮುರಿದುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಮಳೆಯಿಂದ ಐಗುಪ್ತ ದೇಶದ ಎಲ್ಲಾ ಕಡೆಗಳಲ್ಲಿದ್ದ ಮನುಷ್ಯರು, ಪಶುಗಳು, ಬಯಲಿನಲ್ಲಿದ್ದ ಎಲ್ಲವೂ ನಾಶವಾದವು. ಆನೆಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಪೈರುಗಳು ಹಾಳಾದವು. ಹೊಲಗಳಲ್ಲಿದ್ದ ಮರಗಳು ಮುರಿದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆ ಮಳೆಯಿಂದ ಈಜಿಪ್ಟ್ ದೇಶದ ಎಲ್ಲಾ ಕಡೆಯಲ್ಲಿ ಮನುಷ್ಯರು - ಮೃಗಗಳು ಮಾತ್ರವಲ್ಲ ಬಯಲಿನಲ್ಲಿ ಇದ್ದ ಎಲ್ಲವೂ ನಾಶವಾದುವು; ಹೊಲಗದ್ದೆಗಳಲ್ಲಿದ್ದ ಪೈರುಪಚ್ಚೆಗಳೆಲ್ಲವು ಬಿದ್ದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ಕಲ್ಲಿನ ಮಳೆ ಐಗುಪ್ತದೇಶದ ಎಲ್ಲಾ ಕಡೆಯಲ್ಲಿ ಮನುಷ್ಯರನ್ನೂ ಪಶುಗಳನ್ನೂ ಬೈಲಿನಲ್ಲಿದ್ದ ಎಲ್ಲವನ್ನೂ ನಷ್ಟಪಡಿಸಿತು. ಆ ಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಎಲ್ಲಾ ಪೈರುಗಳು ಹಾಳಾದವು. ಅಡವಿಯಲ್ಲಿದ್ದ ಮರಗಳು ಮುರಿದು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಈಜಿಪ್ಟಿನ ಹೊಲಗಳಲ್ಲಿದ್ದ ಪ್ರತಿಯೊಂದನ್ನೂ ಬಿರುಗಾಳಿ ನಾಶಮಾಡಿತು. ಆಲಿಕಲ್ಲು ಜನರನ್ನೂ ಪ್ರಾಣಿಗಳನ್ನೂ ಸಸ್ಯಗಳನ್ನೂ ನಾಶಮಾಡಿತು; ಹೊಲಗಳಲ್ಲಿದ್ದ ಎಲ್ಲಾ ಮರಗಳನ್ನು ಮುರಿದುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:25
8 ತಿಳಿವುಗಳ ಹೋಲಿಕೆ  

ಅವರ ದ್ರಾಕ್ಷಿಬಳ್ಳಿಗಳು ಕಲ್ಮಳೆಯಿಂದಲೂ ಅವರ ಅತ್ತಿಮರಗಳು ಮಂಜಿನಿಂದಲೂ ನಾಶವಾದವು.


ಹೀಗಿರುವುದರಿಂದ ಯಾರನ್ನಾದರೂ ಕಳುಹಿಸಿ ನಿನ್ನ ಪಶುಗಳನ್ನೂ, ಹೊಲದಲ್ಲಿ ನಿನಗಿರುವವುಗಳನ್ನೂ ಭದ್ರಪಡಿಸು. ಏಕೆಂದರೆ ಮನೆಗಳಿಗೆ ಬಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಆಲಿಕಲ್ಲಿನ ಮಳೆಯು ಸುರಿದು ಕೊಲ್ಲುವುದು,’ ಎಂದು ಹೇಳು,” ಎಂದರು.


ಸಿಡಿಲಿನ ಆರ್ಭಟದೊಂದಿಗೆ ಕಠಿಣವಾದ ಆಲಿಕಲ್ಲಿನ ಮಳೆಯೂ ಸುರಿಯಿತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಅಂಥ ಘೋರವಾದ ಆಲಿಕಲ್ಲಿನ ಮಳೆಯೂ ಆ ದೇಶದಲ್ಲಿ ಆಗಿರಲಿಲ್ಲ.


ಅವರ ದನಗಳು ಕಲ್ಮಳೆಗೂ ಅವರ ಪಶುಗಳು ಸಿಡಿಲಿಗೂ ಒಳಪಟ್ಟವು.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದನ್ನು ನನ್ನ ರೋಷದಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ, ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳು ಸುರಿಯುವುವು.


ಮಾರನೆಯ ದಿನವೇ ಯೆಹೋವ ದೇವರು ಆ ಕಾರ್ಯವನ್ನು ಮಾಡಲಾರಂಭಿಸಿದರು. ಈಜಿಪ್ಟಿನ ಪಶುಗಳೆಲ್ಲಾ ಸತ್ತು ಹೋದವು. ಆದರೆ ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು